Homeಮುಖಪುಟನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

ಹೀನಾಯ ಸೋಲಿನ ಬಳಿಕವೂ ಕೈಲಾಶ್‌ ವಿಜಯವರ್ಗಿಯ ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಮುಂದುವರೆದಿರುವುದು ವಿವಾದಿತ ಪೋಸ್ಟ್‌ಗೆ ಕಾರಣವಾಗಿದೆ.

- Advertisement -
- Advertisement -

ತ್ರಿಪುರ ಮತ್ತು ಮೇಘಾಲಯದ ಮಾಜಿ ರಾಜ್ಯಪಾಲರಾದ ತಥಾಗತ ರಾಯ್‌ರವರು ಬಿಜೆಪಿ ನಾಯಕ, ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್‌ ವಿಜಯವರ್ಗಿಯ ಅವರ ಚಿತ್ರವನ್ನು ನಾಯಿಯ ಚಿತ್ರದೊಂದಿಗೆ ಕೊಲಾಜ್‌ ಮಾಡಿ ಟ್ವಿಟರ್‌ನಲ್ಲಿ ಹಂಚಿಕೊಂಡು ಬಿಜೆಪಿ ಪಕ್ಷವನ್ನು ದಿಗ್ಭ್ರಮೆಗೆ ತಳ್ಳಿದ್ದಾರೆ.

ಹೀನಾಯ ಸೋಲಿನ ಬಳಿಕವೂ ಕೈಲಾಶ್‌ ವಿಜಯವರ್ಗಿಯ ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಮುಂದುವರೆದಿದ್ದಾರೆ ಎಂಬ ನೆಟ್ಟಿಗರೊಬ್ಬರ ಪೋಸ್ಟ್‌ಗೆ ತಥಾಗತ ರಾಯ್‌ರವರು ‘ಮತ್ತೊಮ್ಮೆ ಪಶ್ಚಿಮ ಬಂಗಾಳದಲ್ಲಿ ವೊಡಾಫೋನ್’ ಎಂಬ ಶೀರ್ಷಿಕೆಯೊಂದಿಗೆ ಕೈಲಾಶ್‌ ವಿಜಯವರ್ಗಿಯರವರನ್ನು ನಾಯಿಗೆ ಹೋಲಿಸಿ ಪೋಸ್ಟ್ ಮಾಡಿದ್ದಾರೆ.

ಸುಗತೊ ಎಂಬುವವರು “ಕೈಲಾಶ್‌ ವಿಜಯವರ್ಗಿಯರನ್ನು ಯಾರೂ ಉಲ್ಲೇಖಿಸುತ್ತಿಲ್ಲ. ಬದಲಿಗೆ ಅವರ ಹತ್ತಿರದ ಹಿರಿಯ ಬಿಜೆಪಿ ನಾಯಕರು ಅವರನ್ನು ರಕ್ಷಿಸುತ್ತಿದ್ದಾರೆ. ಆಶ್ಚರ್ಯವೆಂದರೆ ಅವರಿನ್ನು ಪಶ್ಚಿಮ ಬಂಗಾಲದ ಉಸ್ತುವಾರಿಯಾಗಿರುವುದು. ಅದೇ ಸಂದರ್ಭದಲ್ಲಿ ಬಿಜೆಪಿ ಕಲ್ಕತ್ತಾದಲ್ಲಿ ಲೆಕ್ಕಕ್ಕೆ ಇಲ್ಲದಂತಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ವಿಜಯವರ್ಗಿಯ ಅವರ ಜೊತೆಗೆ ವೊಡಾಫೋನ್‌ನ ಪಗ್‌(ನಾಯಿ) ಇರುವ ಫೋಟೊ ಮೂಲಕ ತಥಾಗತ ರಾಯ್ ಪ್ರತಿಕ್ರಿಯಿಸಿದ್ದಾರೆ.

ಬಂಗಾಳದ ಮಾಜಿ ಬಿಜೆಪಿ ಮುಖ್ಯಸ್ಥರಾದ ತಥಾಗತ ರಾಯ್, ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪಕ್ಷದ ನಾಯಕರನ್ನು ಟೀಕಿಸುತ್ತಾ ಬಂದಿದ್ದಾರೆ. ಮೇಘಾಲಯ ಮತ್ತು ತ್ರಿಪುರಾ ರಾಜ್ಯಪಾಲರಾಗಿದ್ದ ತಥಾಗತ ರಾಯ್ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ.

ಬಂಗಾಳದಲ್ಲಿ ಬಿಜೆಪಿಯ ಸೋಲಿನ ನಂತರ ರಾಯ್ ಅವರು ಪಕ್ಷದ ಬಂಗಾಳದ ನಾಯಕರಾದ ವಿಜಯವರ್ಗಿಯ ಮತ್ತು ದಿಲೀಪ್ ಘೋಷ್ ಅವರ ಟಿಕೆಟ್ ಹಂಚಿಕೆಯ ನಿರ್ಧಾರಗಳನ್ನು ದೂಷಿಸಿದ್ದರು. ಟ್ವೀಟ್ ಒಂದರಲ್ಲಿ “ಕೈಲಾಶ್-ದಿಲೀಪ್-ಶಿವ್-ಅರವಿಂದ್‌ರವರು ಪ್ರಪಂಚದ ಅತಿ ದೊಡ್ಡ ಪಕ್ಷದ ನಮ್ಮ ಗೌರವಾನ್ವಿತ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರವರ ಹೆಸರನ್ನು ಮಣ್ಣುಪಾಲು ಮಾಡಿದ್ದಾರೆ. ಅಗರ್‌ವಾಲ್ ಭವನದಲ್ಲಿ (ಬಂಗಾಳದ ಬಿಜೆಪಿ ಕಚೇರಿ)  ಮತ್ತು 7 ಸ್ಟಾರ್ ಹೋಟೆಲ್‌ಗಳಲ್ಲಿ ಕುಳಿತು ತೃಣಮೂಲ ಕಾಂಗ್ರೆಸ್‌ನಿಂದ ಹೊರಬಂದ ಕಸಕಡ್ಡಿಗಳಿಗೆ ಟಿಕೆಟ್ ನೀಡಿ ಪಕ್ಷದ ಗೌರವನ್ನು ಹಾಳುಗೆಡವಿದರು” ಎಂದು ಬರೆದಿದ್ದರು.


ಇದನ್ನೂ ಓದಿ: ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...