Homeಮುಖಪುಟನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

ಹೀನಾಯ ಸೋಲಿನ ಬಳಿಕವೂ ಕೈಲಾಶ್‌ ವಿಜಯವರ್ಗಿಯ ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಮುಂದುವರೆದಿರುವುದು ವಿವಾದಿತ ಪೋಸ್ಟ್‌ಗೆ ಕಾರಣವಾಗಿದೆ.

- Advertisement -
- Advertisement -

ತ್ರಿಪುರ ಮತ್ತು ಮೇಘಾಲಯದ ಮಾಜಿ ರಾಜ್ಯಪಾಲರಾದ ತಥಾಗತ ರಾಯ್‌ರವರು ಬಿಜೆಪಿ ನಾಯಕ, ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್‌ ವಿಜಯವರ್ಗಿಯ ಅವರ ಚಿತ್ರವನ್ನು ನಾಯಿಯ ಚಿತ್ರದೊಂದಿಗೆ ಕೊಲಾಜ್‌ ಮಾಡಿ ಟ್ವಿಟರ್‌ನಲ್ಲಿ ಹಂಚಿಕೊಂಡು ಬಿಜೆಪಿ ಪಕ್ಷವನ್ನು ದಿಗ್ಭ್ರಮೆಗೆ ತಳ್ಳಿದ್ದಾರೆ.

ಹೀನಾಯ ಸೋಲಿನ ಬಳಿಕವೂ ಕೈಲಾಶ್‌ ವಿಜಯವರ್ಗಿಯ ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಮುಂದುವರೆದಿದ್ದಾರೆ ಎಂಬ ನೆಟ್ಟಿಗರೊಬ್ಬರ ಪೋಸ್ಟ್‌ಗೆ ತಥಾಗತ ರಾಯ್‌ರವರು ‘ಮತ್ತೊಮ್ಮೆ ಪಶ್ಚಿಮ ಬಂಗಾಳದಲ್ಲಿ ವೊಡಾಫೋನ್’ ಎಂಬ ಶೀರ್ಷಿಕೆಯೊಂದಿಗೆ ಕೈಲಾಶ್‌ ವಿಜಯವರ್ಗಿಯರವರನ್ನು ನಾಯಿಗೆ ಹೋಲಿಸಿ ಪೋಸ್ಟ್ ಮಾಡಿದ್ದಾರೆ.

ಸುಗತೊ ಎಂಬುವವರು “ಕೈಲಾಶ್‌ ವಿಜಯವರ್ಗಿಯರನ್ನು ಯಾರೂ ಉಲ್ಲೇಖಿಸುತ್ತಿಲ್ಲ. ಬದಲಿಗೆ ಅವರ ಹತ್ತಿರದ ಹಿರಿಯ ಬಿಜೆಪಿ ನಾಯಕರು ಅವರನ್ನು ರಕ್ಷಿಸುತ್ತಿದ್ದಾರೆ. ಆಶ್ಚರ್ಯವೆಂದರೆ ಅವರಿನ್ನು ಪಶ್ಚಿಮ ಬಂಗಾಲದ ಉಸ್ತುವಾರಿಯಾಗಿರುವುದು. ಅದೇ ಸಂದರ್ಭದಲ್ಲಿ ಬಿಜೆಪಿ ಕಲ್ಕತ್ತಾದಲ್ಲಿ ಲೆಕ್ಕಕ್ಕೆ ಇಲ್ಲದಂತಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ವಿಜಯವರ್ಗಿಯ ಅವರ ಜೊತೆಗೆ ವೊಡಾಫೋನ್‌ನ ಪಗ್‌(ನಾಯಿ) ಇರುವ ಫೋಟೊ ಮೂಲಕ ತಥಾಗತ ರಾಯ್ ಪ್ರತಿಕ್ರಿಯಿಸಿದ್ದಾರೆ.

ಬಂಗಾಳದ ಮಾಜಿ ಬಿಜೆಪಿ ಮುಖ್ಯಸ್ಥರಾದ ತಥಾಗತ ರಾಯ್, ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪಕ್ಷದ ನಾಯಕರನ್ನು ಟೀಕಿಸುತ್ತಾ ಬಂದಿದ್ದಾರೆ. ಮೇಘಾಲಯ ಮತ್ತು ತ್ರಿಪುರಾ ರಾಜ್ಯಪಾಲರಾಗಿದ್ದ ತಥಾಗತ ರಾಯ್ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ.

ಬಂಗಾಳದಲ್ಲಿ ಬಿಜೆಪಿಯ ಸೋಲಿನ ನಂತರ ರಾಯ್ ಅವರು ಪಕ್ಷದ ಬಂಗಾಳದ ನಾಯಕರಾದ ವಿಜಯವರ್ಗಿಯ ಮತ್ತು ದಿಲೀಪ್ ಘೋಷ್ ಅವರ ಟಿಕೆಟ್ ಹಂಚಿಕೆಯ ನಿರ್ಧಾರಗಳನ್ನು ದೂಷಿಸಿದ್ದರು. ಟ್ವೀಟ್ ಒಂದರಲ್ಲಿ “ಕೈಲಾಶ್-ದಿಲೀಪ್-ಶಿವ್-ಅರವಿಂದ್‌ರವರು ಪ್ರಪಂಚದ ಅತಿ ದೊಡ್ಡ ಪಕ್ಷದ ನಮ್ಮ ಗೌರವಾನ್ವಿತ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರವರ ಹೆಸರನ್ನು ಮಣ್ಣುಪಾಲು ಮಾಡಿದ್ದಾರೆ. ಅಗರ್‌ವಾಲ್ ಭವನದಲ್ಲಿ (ಬಂಗಾಳದ ಬಿಜೆಪಿ ಕಚೇರಿ)  ಮತ್ತು 7 ಸ್ಟಾರ್ ಹೋಟೆಲ್‌ಗಳಲ್ಲಿ ಕುಳಿತು ತೃಣಮೂಲ ಕಾಂಗ್ರೆಸ್‌ನಿಂದ ಹೊರಬಂದ ಕಸಕಡ್ಡಿಗಳಿಗೆ ಟಿಕೆಟ್ ನೀಡಿ ಪಕ್ಷದ ಗೌರವನ್ನು ಹಾಳುಗೆಡವಿದರು” ಎಂದು ಬರೆದಿದ್ದರು.


ಇದನ್ನೂ ಓದಿ: ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...