Homeಮುಖಪುಟಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

- Advertisement -
- Advertisement -

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ವೀರಭದ್ರ ಸಿಂಗ್ (87) ಗುರುವಾರ ಮುಂಜಾನೆ (ಜುಲೈ 8) ಶಿಮ್ಲಾದಲ್ಲಿ ನಿಧನರಾಗಿದ್ದಾರೆ. ಕಳೆದ ಜುಲೈ 5 ರಂದು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಜೊತೆಗೆ ತೀವ್ರ ಅನಾರೋಗ್ಯದಿಂದ ಮಾಜಿ ಮುಖ್ಯಮಂತ್ರಿ ಬಳಲುತ್ತಿದ್ದರು.

ಹಿಮಾಚಲ ಪ್ರದೇಶದಲ್ಲಿ ಆರು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಅವರು,  ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ (ಐಜಿಎಂಸಿ) ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮುಂಜಾನೆ 3: 30 ರ ಸುಮಾರಿಗೆ ನಿಧನರಾದರು ಎಂದು ಐಜಿಎಂಸಿಯ ಹಿರಿಯ ವೈದ್ಯಕೀಯ ಅಧೀಕ್ಷಕ ಜನಕ್ ರಾಜ್ ಖಚಿತಪಡಿಸಿದ್ದಾರೆ.

87 ವರ್ಷದ ವೀರಭದ್ರ ಸಿಂಗ್ ಅವರಿಗೆ ಕಳೆದ ಮೂರು ತಿಂಗಳಲ್ಲಿ 2 ಬಾರಿ ಕೊರೊನಾ ವೈರಸ್ ಸೋಂಕು ತಗುಲಿತ್ತು. ಹಿನ್ನೆಲೆಯಲ್ಲಿ ಏಪ್ರಿಲ್ 13ರಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ನಂತರ ಅವರು ಚೇತರಿಸಿಕೊಂಡಿದ್ದರು. ಬಳಿಕ ಆರೋಗ್ಯ ಸ್ಥಿತಿ ಹದಗೆಟ್ಟು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯೂಮೋನಿಯಾ, ಮಧುವೇಹದಂತಹ ಅನಾರೋಗ್ಯಗಳಿಂದ ಬಳಲುತ್ತಿದ್ದರು.

ಇದನ್ನೂ ಓದಿ: ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರಿಗೆ ಗೌರವ ಸೂಚಕವಾಗಿ ಮೂರು ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಶೋಕಾಚರಣೆಯನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ. ಜುಲೈ 8 ರಿಂದ 10ರ ವರೆಗೆ ಶೋಕಾಚರಣೆಯನ್ನು ಆಚರಿಸಲಾಗುವುದು.

“ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ಜುಲೈ 8 ರ ಬೆಳಿಗ್ಗೆ ನಿಧನರಾಗಿದ್ದಾರೆ. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಮೂರು ದಿನಗಳ ರಾಜ್ಯ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ. ಜುಲೈ 8 ರಿಂದ ಜುಲೈ 10 ರವರೆಗೆ ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ” ಎಂದು ಸರ್ಕಾರ ಹೇಳಿದೆ.

ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಒಂಬತ್ತು ಬಾರಿ ಶಾಸಕರಾಗಿ, ಐದು ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 1983 ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...