Homeಮುಖಪುಟಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

ಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

"ದೇಶದ ಇಂದಿನ ಪರಿಸ್ಥಿತಿಯಲ್ಲಿ ತಾನು ಐಎಎಸ್ ಅಧಿಕಾರಿಯಾಗಿದ್ದು, ದೇಶವನ್ನು ಕಾಡುತ್ತಿರುವ ಅಪಾಯದ ವಿರುದ್ಧ ಹೋರಾಡಲಾಗದು" ಎಂದು ಕಳೆದ ವರ್ಷ ರಾಜೀನಾಮೆ ನೀಡಿದ್ದರು.

- Advertisement -
- Advertisement -

ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರಿದ ಕೆಲವೇ ತಿಂಗಳುಗಳಲ್ಲಿ ಮತ್ತೊರ್ವ ಐಎಎಸ್ ಅಧಿಕಾರಿ ತಮಿಳುನಾಡು ರಾಜಕೀಯಕ್ಕೆ ಬರಲಿದ್ದಾರೆ. ತಮಿಳುನಾಡು ಮೂಲದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರಲಿದ್ದಾರೆ. ಈ ಬಗ್ಗೆ ತಾವೇ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

ತನ್ನ ದಕ್ಷತೆ, ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಸಸಿಕಾಂತ್, ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಉದ್ಯೋಗಕ್ಕೆ ರಾಜೀನಾಮೆ ಕೊಟ್ಟರು. ಇವರು “ದೇಶದ ಇಂದಿನ ಪರಿಸ್ಥಿತಿಯಲ್ಲಿ ತಾನು ಐಎಎಸ್ ಅಧಿಕಾರಿಯಾಗಿದ್ದು, ದೇಶವನ್ನು ಕಾಡುತ್ತಿರುವ ಅಪಾಯದ ವಿರುದ್ಧ ಹೋರಾಡಲಾಗದು” ಎಂಬ ಹೇಳಿಕೆಯಿಂದ ಜನರಲ್ಲಿ ಅಚ್ಚರಿ ಉಂಟುಮಾಡಿದ್ದರು. ಜೊತೆಗೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಟ್ವಿಟರ್‌ನಲ್ಲಿ ತಮ್ಮ ನಿಲುವನ್ನು ಪೋಸ್ಟ್ ಮಾಡಿರುವ ಸಸಿಕಾಂತ್ ಸೆಂಥಿಲ್ ’ಹೋರಾಟವನ್ನು ಮುಂದುವರೆಸುವ ನನ್ನ ಪ್ರಯತ್ನದಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದೇನೆ ಎಂದು ನಾನು ಎಲ್ಲರಿಗೂ ತಿಳಿಸಲು ಬಯಸುತ್ತೇನೆ’ ಎಂದಿದ್ದಾರೆ.

’ನಾನು ಎಲ್ಲಿದ್ದರೂ ನನ್ನ ಜೀವನದುದ್ದಕ್ಕೂ ನಿರ್ಲಕ್ಷ್ಯಕ್ಕೆ ಒಳಗಾದವರಿಗೆ ಧ್ವನಿಯಾಗಲು ಪ್ರಯತ್ನಿಸುತ್ತಿರುವ ಕಾರ್ಯಕರ್ತನಾಗಿದ್ದೇನೆ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ಅದೇ ರೀತಿ ಮುಂದುವರಿಯುತ್ತೇನೆ’ ಎಂಬ ಭರವಸೆ ನೀಡಿದ್ದಾರೆ.

ಮಾಜಿ ಕರ್ನಾಟಕ-ಕೇಡರ್ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಅವರು ಸೋಮವಾರ ತಮಿಳುನಾಡಿನಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಈ ಕುರಿತು ಈಗಾಗಲೇ ಕಾಂಗ್ರೆಸ್​ ನಾಯಕರು ಸಸಿಕಾಂತ್ ಸೆಂಥಿಲ್ ಜೊತೆ ಒಂದು ಸುತ್ತು ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಜ್ವಾಲಾಮುಖಿಯ ಕಂಪನ : ಸಸಿಕಾಂತ್ ಸೆಂಥಿಲ್‌ರವರ ಮೊದಲ ಬರಹ…

41 ವರ್ಷದ ಮಾಜಿ ಐಎಎಸ್ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ (ಟಿಎನ್‌ಸಿಸಿ) ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡಿನ ಎಐಸಿಸಿ ಉಸ್ತುವಾರಿ ಮತ್ತು ಕರ್ನಾಟಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಸೆಂಥಿಲ್ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಅಧಿಕಾರಿ ಸೆಂಥಿಲ್ 2009ರ ಬ್ಯಾಚ್​​ನ ಕರ್ನಾಟಕ ಕೇಡರ್​ ಐಎಎಸ್​ ಅಧಿಕಾರಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ, ಕಳೆದ ವರ್ಷದ ಸೆಪ್ಟೆಂಬರ್ 6 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ತಮ್ಮ ದಕ್ಷತೆ ಮತ್ತು ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದರು. ಕೇಂದ್ರ ಸರ್ಕಾರದ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆಗಳನ್ನ ಅವರು ವಿರೋಧಿಸಿದ್ದರು.

ನಾಗರಿಕ ಸೇವೆಗಳಿಗೆ ರಾಜೀನಾಮೆ ನೀಡಿದ ನಂತರ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸೆಂಥಿಲ್ ಟೀಕಿಸಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆ, ಅಭಿಯಾನಗಳಲ್ಲಿ ಭಾಗಿಯಾಗಿದ್ದರು.

ಸಸಿಕಾಂತ್ ಸೆಂಥಿಲ್ ಅವರ ಕಿರಿಯ ಸಹೋದ್ಯೋಗಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿಗೆ ಸೇರುವ ಮೂಲಕ ತಮಿಳುನಾಡಿನಲ್ಲಿ ರಾಜಕೀಯ ಧುಮುಕಿದ್ದಾರೆ. ಪ್ರಸ್ತುತ ಅಣ್ಣಾಮಲೈ ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದಾರೆ.


ಇದನ್ನೂ ಓದಿ: ಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...