Homeಮುಖಪುಟವೈಎಸ್‌ ಆರ್‌ ಕಾಂಗ್ರೆಸ್‌ಗೆ ಸೇರಿದ ಒಂದೇ ವಾರದಲ್ಲಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ವೈಎಸ್‌ ಆರ್‌ ಕಾಂಗ್ರೆಸ್‌ಗೆ ಸೇರಿದ ಒಂದೇ ವಾರದಲ್ಲಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

- Advertisement -
- Advertisement -

ಭಾರತದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ವೈಎಸ್‌ ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ಒಂದೇ ವಾರದಲ್ಲಿ ಪಕ್ಷವನ್ನು ತೊರೆಯುವುದಾಗಿ ಘೋಷಿಸಿದ್ದು, ಸಕ್ರಿಯ ರಾಜಕೀಯದಿಂದ ವಿರಾಮ ತೆಗೆದುಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅಂಬಟಿ ರಾಯುಡು, ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತ್ಯಜಿಸಲು ಮತ್ತು ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ನಿರ್ಧರಿಸಿದ್ದೇನೆ ಎಂದು ಎಲ್ಲರಿಗೂ ತಿಳಿಸುತ್ತಿದ್ದೇನೆ. ಮುಂದಿನ ನಡೆಯನ್ನು ಸರಿಯಾದ ಸಮಯದಲ್ಲಿ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಅಂಬಟಿ ರಾಯುಡು ಅವರು  ಡಿಸೆಂಬರ್‌.28ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ, ಉಪ ಮುಖ್ಯಮಂತ್ರಿ ಕೆ ನಾರಾಯಣ ಸ್ವಾಮಿ ಮತ್ತು ರಾಜಂಪೇಟ ಲೋಕಸಭಾ ಸದಸ್ಯ ಪಿ ಮಿಥುನ್ ರೆಡ್ಡಿ ಅವರ ಸಮ್ಮುಖದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ್ದ ಅಂಬಟಿ ರಾಯುಡು, ಶಿಕ್ಷಣ ಕ್ಷೇತ್ರದಲ್ಲಿ ಸಿಎಂ ಜಗನ್ ತಂದ ಬದಲಾವಣೆ ಮತ್ತು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಬಡ ಮಕ್ಕಳನ್ನು ಬೆಳೆಸುತ್ತಿರುವುದರಿಂದ ಸಿಎಂ ಜಗನ್​ ಮೋಹನ್​ ರೆಡ್ಡಿ  ಅವರಿಂದ ಪ್ರಭಾವಿತರಾಗಿ ವೈಎಸ್​ಆರ್​ ಕಾಂಗ್ರೆಸ್‌ಗೆ​ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದರು.

ಈ ಹಿಂದಿನಿಂದಲೂ ಆಂಧ್ರ ಸಿಎಂ ಜಗನ್​ ಮೋಹನ್​ ರೆಡ್ಡಿ ಜೊತೆ ಆತ್ಮೀಯತೆ ಹೊಂದಿದ್ದ ಅಂಬಟಿ ರಾಯುಡು ನಿರೀಕ್ಷೆಯಂತೆ ವೈಎಸ್​ಆರ್​ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಮುಂಬರುವ ಆಂಧ್ರ ಪ್ರದೇಶ ಚುನಾವಣೆಯಲ್ಲಿ ವಿಧಾನಸಭಾ ಅಥವಾ ಲೋಕಸಭಾ ಅಭ್ಯರ್ಥಿಯಾಗಿ ರಾಯುಡು ಚುನಾವಣಾ ಕಣಕ್ಕೆ ಇಳಿಯವು ಸಾಧ್ಯತೆ ಇತ್ತು ಎಂದು ಹೇಳಲಾಗಿತ್ತು. ಆದರೆ ಇದೀಗ ಈ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿದೆ.

ಅಂಬಟಿ  ರಾಯುಡು ಅವರು ಅಂತರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಗಳಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದರು ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳಲ್ಲಿ ಹಲವು ರಾಜ್ಯಗಳನ್ನು ಪ್ರತಿನಿಧಿಸಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ ನಂತರ ರಾಯುಡು ಅವರು 2023ರಲ್ಲಿ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು. ಆ ಬಳಿಕ ಮಾಜಿ ಕ್ರಿಕೆಟಿಗರು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಜನಸೇವೆಯಲ್ಲಿ ತೊಡಗಿದ್ದರು. 37 ವರ್ಷದ ಅಂಬಾಟಿ ರಾಯುಡು ಅವರು ರಾಜಕಾರಣ ಸೇರುವುದಾಗಿ ಕಳೆದ ಜೂನ್ ತಿಂಗಳಲ್ಲಿ ಘೋಷಣೆ ಮಾಡಿದ್ದರು.

 

ಇದನ್ನು ಓದಿ: ಹಲಾಲ್ ಉತ್ಪನ್ನಗಳ ನಿಷೇಧ: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್‌ ನೊಟೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...