Homeಅಂತರಾಷ್ಟ್ರೀಯಚುನಾವಣಾ ಭಾಷಣ ಮಾಡುತ್ತಿದ್ದಾಗ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡಿಕ್ಕಿ ಹತ್ಯೆ

ಚುನಾವಣಾ ಭಾಷಣ ಮಾಡುತ್ತಿದ್ದಾಗ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬೆಳಗ್ಗೆ ದಕ್ಷಿಣದ ನಗರವಾದ ನಾರಾದಲ್ಲಿ ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಎರಡು ಬಾರಿ ಗುಂಡು ಹಾರಿಸಲಾಗಿದೆ. ಅವರು ಚುನಾವಣಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದರು ಎಂದು ವರದಿಯಾಗಿದೆ. ತಕ್ಷಣ ಕುಸಿದು ಬಿದ್ದ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.

ದಾಳಿ ಘಟನೆಯನ್ನು ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿರುವ ಜಪಾನ್‌ನ ಹಾಲಿ ಪ್ರಧಾನಿ ಫ್ಯೂಮಿಯೊ ಕಿಶಿಡಾ, “ಇದು ಅನಾಗರಿಕ ಮತ್ತು ದುರುದ್ದೇಶಪೂರಿತವಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಾಜಿ ಪ್ರಧಾನಿ ಅಬೆ ಅವರಿಗೆ ನಾರಾದಲ್ಲಿ ಬೆಳಿಗ್ಗೆ 11:30 ರ ಸುಮಾರಿಗೆ ಗುಂಡಿಕ್ಕಲಾಗಿದೆ. ಶೂಟರ್ ಎಂದು ನಂಬಲಾದ 40 ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ” ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಹಿರೋಕಾಜು ಮಾಟ್ಸುನೊ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾನುವಾರ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಮುನ್ನ ನಡೆದ ಕಾರ್ಯಕ್ರಮವೊಂದರಲ್ಲಿ ಶಿಂಜೋ ಅಬೆ ಭಾಷಣ ಮಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿಸಿತು ಎಂದು ಕ್ಯೋಡೋ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

“ಅವರು ಭಾಷಣ ಮಾಡುತ್ತಿದ್ದಾಗ, ವ್ಯಕ್ತಿಯೊಬ್ಬ ಹಿಂದಿನಿಂದ ಬಂದ. ಮೊದಲ ಗುಂಡಿನ ಸದ್ದು ಆಟಿಕೆ ಬಂದೂಕಿನಂತೆ ಕೇಳಿತ್ತು. ಅದರಿಂದ ಅವರು ನೆಲಕ್ಕೆ ಬೀಳಲಿಲ್ಲ, ಎರಡನೇ ಗುಂಡಿನ ಸದ್ದು ದೊಡ್ಡದಾಗಿತ್ತು. ಕಿಡಿ ಮತ್ತು ಹೊಗೆ ಕೂಡಾ ಕಂಡಿತ್ತು. ಎರಡನೇ ಹೊಡೆತದ ನಂತರ, ಜನರು ಅವರನ್ನು ಸುತ್ತುವರೆದರು” ಎಂದು ಪ್ರತ್ಯಕ್ಷದರ್ಶಿ ಯುವತಿಯೊಬ್ಬರು ಹೇಳಿದ್ದಾರೆ.

ಎರಡೂ ಗುಂಡುಗಳು ಅವರಿಗೆ ತಾಗಿವೆಯೇ ಅಥವಾ ಗುಂಡು ಅವರ ಕುತ್ತಿಗೆಗೆ ತಗುಲಿ ಬೇರೆಡೆಗೆ ಹೋಗಿದೆಯೆ ಎಂಬುದು ಸ್ಪಷ್ಟವಾಗಿಲ್ಲ.

ದಾಳಿಯ ನಂತರದ ನಿಮಿಷಗಳಲ್ಲಿ ಶಿಂಜೊಗೆ ಪ್ರಜ್ಞೆಯಿತ್ತು ಮತ್ತು ಸ್ಪಂದಿಸುತ್ತಿದ್ದರು ಎಂದು ಹೇಳಲಾಗಿದೆ. ಆ ನಂತರ ಅವರ ಪರಿಸ್ಥತಿ ಹದಗೆಟ್ಟಿತು ಎಂದು ವರದಿಗಳು ಹೇಳಿವೆ. ಬಹುಶಃ ಶಾಟ್‌ಗನ್‌ನಿಂದ ಅವರ ಹಿಂದಿನಿಂದ ಗುಂಡು ಹಾರಿಸಿರುವುದು ಕಂಡುಬಂದಿದೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಘಟನೆಯ ಹಿನ್ನೆಲೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗಿ ಎಂದು ವರದಿಗಳು ಹೇಳಿವೆ.

ಜಪಾನ್‌ನ ದೀರ್ಘಾವಧಿ ಪ್ರಧಾನಿಯಾಗಿರುವ ಶಿಂಜೊ ಅಬೆ, 2006 ರಲ್ಲಿ ಒಂದು ವರ್ಷ ಮತ್ತು 2012 ರಿಂದ 2020 ರವರೆಗೆ ಅಧಿಕಾರದಲ್ಲಿದ್ದರು. ನಂತರ ಅವರು ಆರೋಗ್ಯ ಸಮಸ್ಯೆಯಿಂದ ತಮ್ಮ ಸ್ಥಾನದಿಂದ ನಿರ್ಗಮಿಸಿದರು.

ಇದನ್ನೂ ಓದಿ: ಕೊಲಂಬಿಯಾದಲ್ಲಿ ಮೊದಲ ಎಡಪಂಥೀಯ ಸರ್ಕಾರ; ಸಾಧ್ಯವಾದದ್ದು ಹೇಗೆ?

ಜಪಾನ್‌ ‌ಕಠಿಣ ಬಂದೂಕು ನಿಯಂತ್ರಣ ಕಾನೂನುಗಳನ್ನು ಹೊಂದಿದೆ. ಬಂದೂಕು ಪರವಾನಗಿಯನ್ನು ಪಡೆಯುವುದು ಜಪಾನಿನ ನಾಗರಿಕರಿಗೂ ದೀರ್ಘ ಮತ್ತು ಸಂಕೀರ್ಣ ಪ್ರಕ್ರಿಯೆಯಾಗಿದೆ. ಬಂದೂಕು ಬೇಕೆಂದರೆ ಅವರು ಮೊದಲು ಶೂಟಿಂಗ್ ಅಸೋಸಿಯೇಷನ್‌ನಿಂದ ಶಿಫಾರಸನ್ನು ಪಡೆಯಬೇಕು ಮತ್ತು ಪೊಲೀಸರಿಂದ ಕಟ್ಟುನಿಟ್ಟಾದ ತಪಾಸಣೆಗೆ ಒಳಗಾಗಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...