Homeಅಂತರಾಷ್ಟ್ರೀಯಚುನಾವಣಾ ಭಾಷಣ ಮಾಡುತ್ತಿದ್ದಾಗ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡಿಕ್ಕಿ ಹತ್ಯೆ

ಚುನಾವಣಾ ಭಾಷಣ ಮಾಡುತ್ತಿದ್ದಾಗ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬೆಳಗ್ಗೆ ದಕ್ಷಿಣದ ನಗರವಾದ ನಾರಾದಲ್ಲಿ ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಎರಡು ಬಾರಿ ಗುಂಡು ಹಾರಿಸಲಾಗಿದೆ. ಅವರು ಚುನಾವಣಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದರು ಎಂದು ವರದಿಯಾಗಿದೆ. ತಕ್ಷಣ ಕುಸಿದು ಬಿದ್ದ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.

ದಾಳಿ ಘಟನೆಯನ್ನು ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿರುವ ಜಪಾನ್‌ನ ಹಾಲಿ ಪ್ರಧಾನಿ ಫ್ಯೂಮಿಯೊ ಕಿಶಿಡಾ, “ಇದು ಅನಾಗರಿಕ ಮತ್ತು ದುರುದ್ದೇಶಪೂರಿತವಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಾಜಿ ಪ್ರಧಾನಿ ಅಬೆ ಅವರಿಗೆ ನಾರಾದಲ್ಲಿ ಬೆಳಿಗ್ಗೆ 11:30 ರ ಸುಮಾರಿಗೆ ಗುಂಡಿಕ್ಕಲಾಗಿದೆ. ಶೂಟರ್ ಎಂದು ನಂಬಲಾದ 40 ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ” ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಹಿರೋಕಾಜು ಮಾಟ್ಸುನೊ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾನುವಾರ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಮುನ್ನ ನಡೆದ ಕಾರ್ಯಕ್ರಮವೊಂದರಲ್ಲಿ ಶಿಂಜೋ ಅಬೆ ಭಾಷಣ ಮಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿಸಿತು ಎಂದು ಕ್ಯೋಡೋ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

“ಅವರು ಭಾಷಣ ಮಾಡುತ್ತಿದ್ದಾಗ, ವ್ಯಕ್ತಿಯೊಬ್ಬ ಹಿಂದಿನಿಂದ ಬಂದ. ಮೊದಲ ಗುಂಡಿನ ಸದ್ದು ಆಟಿಕೆ ಬಂದೂಕಿನಂತೆ ಕೇಳಿತ್ತು. ಅದರಿಂದ ಅವರು ನೆಲಕ್ಕೆ ಬೀಳಲಿಲ್ಲ, ಎರಡನೇ ಗುಂಡಿನ ಸದ್ದು ದೊಡ್ಡದಾಗಿತ್ತು. ಕಿಡಿ ಮತ್ತು ಹೊಗೆ ಕೂಡಾ ಕಂಡಿತ್ತು. ಎರಡನೇ ಹೊಡೆತದ ನಂತರ, ಜನರು ಅವರನ್ನು ಸುತ್ತುವರೆದರು” ಎಂದು ಪ್ರತ್ಯಕ್ಷದರ್ಶಿ ಯುವತಿಯೊಬ್ಬರು ಹೇಳಿದ್ದಾರೆ.

ಎರಡೂ ಗುಂಡುಗಳು ಅವರಿಗೆ ತಾಗಿವೆಯೇ ಅಥವಾ ಗುಂಡು ಅವರ ಕುತ್ತಿಗೆಗೆ ತಗುಲಿ ಬೇರೆಡೆಗೆ ಹೋಗಿದೆಯೆ ಎಂಬುದು ಸ್ಪಷ್ಟವಾಗಿಲ್ಲ.

ದಾಳಿಯ ನಂತರದ ನಿಮಿಷಗಳಲ್ಲಿ ಶಿಂಜೊಗೆ ಪ್ರಜ್ಞೆಯಿತ್ತು ಮತ್ತು ಸ್ಪಂದಿಸುತ್ತಿದ್ದರು ಎಂದು ಹೇಳಲಾಗಿದೆ. ಆ ನಂತರ ಅವರ ಪರಿಸ್ಥತಿ ಹದಗೆಟ್ಟಿತು ಎಂದು ವರದಿಗಳು ಹೇಳಿವೆ. ಬಹುಶಃ ಶಾಟ್‌ಗನ್‌ನಿಂದ ಅವರ ಹಿಂದಿನಿಂದ ಗುಂಡು ಹಾರಿಸಿರುವುದು ಕಂಡುಬಂದಿದೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಘಟನೆಯ ಹಿನ್ನೆಲೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗಿ ಎಂದು ವರದಿಗಳು ಹೇಳಿವೆ.

ಜಪಾನ್‌ನ ದೀರ್ಘಾವಧಿ ಪ್ರಧಾನಿಯಾಗಿರುವ ಶಿಂಜೊ ಅಬೆ, 2006 ರಲ್ಲಿ ಒಂದು ವರ್ಷ ಮತ್ತು 2012 ರಿಂದ 2020 ರವರೆಗೆ ಅಧಿಕಾರದಲ್ಲಿದ್ದರು. ನಂತರ ಅವರು ಆರೋಗ್ಯ ಸಮಸ್ಯೆಯಿಂದ ತಮ್ಮ ಸ್ಥಾನದಿಂದ ನಿರ್ಗಮಿಸಿದರು.

ಇದನ್ನೂ ಓದಿ: ಕೊಲಂಬಿಯಾದಲ್ಲಿ ಮೊದಲ ಎಡಪಂಥೀಯ ಸರ್ಕಾರ; ಸಾಧ್ಯವಾದದ್ದು ಹೇಗೆ?

ಜಪಾನ್‌ ‌ಕಠಿಣ ಬಂದೂಕು ನಿಯಂತ್ರಣ ಕಾನೂನುಗಳನ್ನು ಹೊಂದಿದೆ. ಬಂದೂಕು ಪರವಾನಗಿಯನ್ನು ಪಡೆಯುವುದು ಜಪಾನಿನ ನಾಗರಿಕರಿಗೂ ದೀರ್ಘ ಮತ್ತು ಸಂಕೀರ್ಣ ಪ್ರಕ್ರಿಯೆಯಾಗಿದೆ. ಬಂದೂಕು ಬೇಕೆಂದರೆ ಅವರು ಮೊದಲು ಶೂಟಿಂಗ್ ಅಸೋಸಿಯೇಷನ್‌ನಿಂದ ಶಿಫಾರಸನ್ನು ಪಡೆಯಬೇಕು ಮತ್ತು ಪೊಲೀಸರಿಂದ ಕಟ್ಟುನಿಟ್ಟಾದ ತಪಾಸಣೆಗೆ ಒಳಗಾಗಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...