Homeಅಂತರಾಷ್ಟ್ರೀಯಚುನಾವಣಾ ಭಾಷಣ ಮಾಡುತ್ತಿದ್ದಾಗ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡಿಕ್ಕಿ ಹತ್ಯೆ

ಚುನಾವಣಾ ಭಾಷಣ ಮಾಡುತ್ತಿದ್ದಾಗ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬೆಳಗ್ಗೆ ದಕ್ಷಿಣದ ನಗರವಾದ ನಾರಾದಲ್ಲಿ ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಎರಡು ಬಾರಿ ಗುಂಡು ಹಾರಿಸಲಾಗಿದೆ. ಅವರು ಚುನಾವಣಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದರು ಎಂದು ವರದಿಯಾಗಿದೆ. ತಕ್ಷಣ ಕುಸಿದು ಬಿದ್ದ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.

ದಾಳಿ ಘಟನೆಯನ್ನು ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿರುವ ಜಪಾನ್‌ನ ಹಾಲಿ ಪ್ರಧಾನಿ ಫ್ಯೂಮಿಯೊ ಕಿಶಿಡಾ, “ಇದು ಅನಾಗರಿಕ ಮತ್ತು ದುರುದ್ದೇಶಪೂರಿತವಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಾಜಿ ಪ್ರಧಾನಿ ಅಬೆ ಅವರಿಗೆ ನಾರಾದಲ್ಲಿ ಬೆಳಿಗ್ಗೆ 11:30 ರ ಸುಮಾರಿಗೆ ಗುಂಡಿಕ್ಕಲಾಗಿದೆ. ಶೂಟರ್ ಎಂದು ನಂಬಲಾದ 40 ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ” ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಹಿರೋಕಾಜು ಮಾಟ್ಸುನೊ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾನುವಾರ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಮುನ್ನ ನಡೆದ ಕಾರ್ಯಕ್ರಮವೊಂದರಲ್ಲಿ ಶಿಂಜೋ ಅಬೆ ಭಾಷಣ ಮಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿಸಿತು ಎಂದು ಕ್ಯೋಡೋ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

“ಅವರು ಭಾಷಣ ಮಾಡುತ್ತಿದ್ದಾಗ, ವ್ಯಕ್ತಿಯೊಬ್ಬ ಹಿಂದಿನಿಂದ ಬಂದ. ಮೊದಲ ಗುಂಡಿನ ಸದ್ದು ಆಟಿಕೆ ಬಂದೂಕಿನಂತೆ ಕೇಳಿತ್ತು. ಅದರಿಂದ ಅವರು ನೆಲಕ್ಕೆ ಬೀಳಲಿಲ್ಲ, ಎರಡನೇ ಗುಂಡಿನ ಸದ್ದು ದೊಡ್ಡದಾಗಿತ್ತು. ಕಿಡಿ ಮತ್ತು ಹೊಗೆ ಕೂಡಾ ಕಂಡಿತ್ತು. ಎರಡನೇ ಹೊಡೆತದ ನಂತರ, ಜನರು ಅವರನ್ನು ಸುತ್ತುವರೆದರು” ಎಂದು ಪ್ರತ್ಯಕ್ಷದರ್ಶಿ ಯುವತಿಯೊಬ್ಬರು ಹೇಳಿದ್ದಾರೆ.

ಎರಡೂ ಗುಂಡುಗಳು ಅವರಿಗೆ ತಾಗಿವೆಯೇ ಅಥವಾ ಗುಂಡು ಅವರ ಕುತ್ತಿಗೆಗೆ ತಗುಲಿ ಬೇರೆಡೆಗೆ ಹೋಗಿದೆಯೆ ಎಂಬುದು ಸ್ಪಷ್ಟವಾಗಿಲ್ಲ.

ದಾಳಿಯ ನಂತರದ ನಿಮಿಷಗಳಲ್ಲಿ ಶಿಂಜೊಗೆ ಪ್ರಜ್ಞೆಯಿತ್ತು ಮತ್ತು ಸ್ಪಂದಿಸುತ್ತಿದ್ದರು ಎಂದು ಹೇಳಲಾಗಿದೆ. ಆ ನಂತರ ಅವರ ಪರಿಸ್ಥತಿ ಹದಗೆಟ್ಟಿತು ಎಂದು ವರದಿಗಳು ಹೇಳಿವೆ. ಬಹುಶಃ ಶಾಟ್‌ಗನ್‌ನಿಂದ ಅವರ ಹಿಂದಿನಿಂದ ಗುಂಡು ಹಾರಿಸಿರುವುದು ಕಂಡುಬಂದಿದೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಘಟನೆಯ ಹಿನ್ನೆಲೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗಿ ಎಂದು ವರದಿಗಳು ಹೇಳಿವೆ.

ಜಪಾನ್‌ನ ದೀರ್ಘಾವಧಿ ಪ್ರಧಾನಿಯಾಗಿರುವ ಶಿಂಜೊ ಅಬೆ, 2006 ರಲ್ಲಿ ಒಂದು ವರ್ಷ ಮತ್ತು 2012 ರಿಂದ 2020 ರವರೆಗೆ ಅಧಿಕಾರದಲ್ಲಿದ್ದರು. ನಂತರ ಅವರು ಆರೋಗ್ಯ ಸಮಸ್ಯೆಯಿಂದ ತಮ್ಮ ಸ್ಥಾನದಿಂದ ನಿರ್ಗಮಿಸಿದರು.

ಇದನ್ನೂ ಓದಿ: ಕೊಲಂಬಿಯಾದಲ್ಲಿ ಮೊದಲ ಎಡಪಂಥೀಯ ಸರ್ಕಾರ; ಸಾಧ್ಯವಾದದ್ದು ಹೇಗೆ?

ಜಪಾನ್‌ ‌ಕಠಿಣ ಬಂದೂಕು ನಿಯಂತ್ರಣ ಕಾನೂನುಗಳನ್ನು ಹೊಂದಿದೆ. ಬಂದೂಕು ಪರವಾನಗಿಯನ್ನು ಪಡೆಯುವುದು ಜಪಾನಿನ ನಾಗರಿಕರಿಗೂ ದೀರ್ಘ ಮತ್ತು ಸಂಕೀರ್ಣ ಪ್ರಕ್ರಿಯೆಯಾಗಿದೆ. ಬಂದೂಕು ಬೇಕೆಂದರೆ ಅವರು ಮೊದಲು ಶೂಟಿಂಗ್ ಅಸೋಸಿಯೇಷನ್‌ನಿಂದ ಶಿಫಾರಸನ್ನು ಪಡೆಯಬೇಕು ಮತ್ತು ಪೊಲೀಸರಿಂದ ಕಟ್ಟುನಿಟ್ಟಾದ ತಪಾಸಣೆಗೆ ಒಳಗಾಗಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...