Homeಅಂತರಾಷ್ಟ್ರೀಯಚುನಾವಣಾ ಭಾಷಣ ಮಾಡುತ್ತಿದ್ದಾಗ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡಿಕ್ಕಿ ಹತ್ಯೆ

ಚುನಾವಣಾ ಭಾಷಣ ಮಾಡುತ್ತಿದ್ದಾಗ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬೆಳಗ್ಗೆ ದಕ್ಷಿಣದ ನಗರವಾದ ನಾರಾದಲ್ಲಿ ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಎರಡು ಬಾರಿ ಗುಂಡು ಹಾರಿಸಲಾಗಿದೆ. ಅವರು ಚುನಾವಣಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದರು ಎಂದು ವರದಿಯಾಗಿದೆ. ತಕ್ಷಣ ಕುಸಿದು ಬಿದ್ದ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.

ದಾಳಿ ಘಟನೆಯನ್ನು ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿರುವ ಜಪಾನ್‌ನ ಹಾಲಿ ಪ್ರಧಾನಿ ಫ್ಯೂಮಿಯೊ ಕಿಶಿಡಾ, “ಇದು ಅನಾಗರಿಕ ಮತ್ತು ದುರುದ್ದೇಶಪೂರಿತವಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಾಜಿ ಪ್ರಧಾನಿ ಅಬೆ ಅವರಿಗೆ ನಾರಾದಲ್ಲಿ ಬೆಳಿಗ್ಗೆ 11:30 ರ ಸುಮಾರಿಗೆ ಗುಂಡಿಕ್ಕಲಾಗಿದೆ. ಶೂಟರ್ ಎಂದು ನಂಬಲಾದ 40 ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ” ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಹಿರೋಕಾಜು ಮಾಟ್ಸುನೊ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾನುವಾರ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಮುನ್ನ ನಡೆದ ಕಾರ್ಯಕ್ರಮವೊಂದರಲ್ಲಿ ಶಿಂಜೋ ಅಬೆ ಭಾಷಣ ಮಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿಸಿತು ಎಂದು ಕ್ಯೋಡೋ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

“ಅವರು ಭಾಷಣ ಮಾಡುತ್ತಿದ್ದಾಗ, ವ್ಯಕ್ತಿಯೊಬ್ಬ ಹಿಂದಿನಿಂದ ಬಂದ. ಮೊದಲ ಗುಂಡಿನ ಸದ್ದು ಆಟಿಕೆ ಬಂದೂಕಿನಂತೆ ಕೇಳಿತ್ತು. ಅದರಿಂದ ಅವರು ನೆಲಕ್ಕೆ ಬೀಳಲಿಲ್ಲ, ಎರಡನೇ ಗುಂಡಿನ ಸದ್ದು ದೊಡ್ಡದಾಗಿತ್ತು. ಕಿಡಿ ಮತ್ತು ಹೊಗೆ ಕೂಡಾ ಕಂಡಿತ್ತು. ಎರಡನೇ ಹೊಡೆತದ ನಂತರ, ಜನರು ಅವರನ್ನು ಸುತ್ತುವರೆದರು” ಎಂದು ಪ್ರತ್ಯಕ್ಷದರ್ಶಿ ಯುವತಿಯೊಬ್ಬರು ಹೇಳಿದ್ದಾರೆ.

ಎರಡೂ ಗುಂಡುಗಳು ಅವರಿಗೆ ತಾಗಿವೆಯೇ ಅಥವಾ ಗುಂಡು ಅವರ ಕುತ್ತಿಗೆಗೆ ತಗುಲಿ ಬೇರೆಡೆಗೆ ಹೋಗಿದೆಯೆ ಎಂಬುದು ಸ್ಪಷ್ಟವಾಗಿಲ್ಲ.

ದಾಳಿಯ ನಂತರದ ನಿಮಿಷಗಳಲ್ಲಿ ಶಿಂಜೊಗೆ ಪ್ರಜ್ಞೆಯಿತ್ತು ಮತ್ತು ಸ್ಪಂದಿಸುತ್ತಿದ್ದರು ಎಂದು ಹೇಳಲಾಗಿದೆ. ಆ ನಂತರ ಅವರ ಪರಿಸ್ಥತಿ ಹದಗೆಟ್ಟಿತು ಎಂದು ವರದಿಗಳು ಹೇಳಿವೆ. ಬಹುಶಃ ಶಾಟ್‌ಗನ್‌ನಿಂದ ಅವರ ಹಿಂದಿನಿಂದ ಗುಂಡು ಹಾರಿಸಿರುವುದು ಕಂಡುಬಂದಿದೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಘಟನೆಯ ಹಿನ್ನೆಲೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗಿ ಎಂದು ವರದಿಗಳು ಹೇಳಿವೆ.

ಜಪಾನ್‌ನ ದೀರ್ಘಾವಧಿ ಪ್ರಧಾನಿಯಾಗಿರುವ ಶಿಂಜೊ ಅಬೆ, 2006 ರಲ್ಲಿ ಒಂದು ವರ್ಷ ಮತ್ತು 2012 ರಿಂದ 2020 ರವರೆಗೆ ಅಧಿಕಾರದಲ್ಲಿದ್ದರು. ನಂತರ ಅವರು ಆರೋಗ್ಯ ಸಮಸ್ಯೆಯಿಂದ ತಮ್ಮ ಸ್ಥಾನದಿಂದ ನಿರ್ಗಮಿಸಿದರು.

ಇದನ್ನೂ ಓದಿ: ಕೊಲಂಬಿಯಾದಲ್ಲಿ ಮೊದಲ ಎಡಪಂಥೀಯ ಸರ್ಕಾರ; ಸಾಧ್ಯವಾದದ್ದು ಹೇಗೆ?

ಜಪಾನ್‌ ‌ಕಠಿಣ ಬಂದೂಕು ನಿಯಂತ್ರಣ ಕಾನೂನುಗಳನ್ನು ಹೊಂದಿದೆ. ಬಂದೂಕು ಪರವಾನಗಿಯನ್ನು ಪಡೆಯುವುದು ಜಪಾನಿನ ನಾಗರಿಕರಿಗೂ ದೀರ್ಘ ಮತ್ತು ಸಂಕೀರ್ಣ ಪ್ರಕ್ರಿಯೆಯಾಗಿದೆ. ಬಂದೂಕು ಬೇಕೆಂದರೆ ಅವರು ಮೊದಲು ಶೂಟಿಂಗ್ ಅಸೋಸಿಯೇಷನ್‌ನಿಂದ ಶಿಫಾರಸನ್ನು ಪಡೆಯಬೇಕು ಮತ್ತು ಪೊಲೀಸರಿಂದ ಕಟ್ಟುನಿಟ್ಟಾದ ತಪಾಸಣೆಗೆ ಒಳಗಾಗಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...