Homeಮುಖಪುಟನ್ಯಾಯಾಧೀಶರ ನೇಮಕಾತಿ ವಿಳಂಬ ಮಾಡುತ್ತಿರುವುದಕ್ಕೆ ಸರ್ಕಾರವನ್ನು ಟೀಕಿಸಿದ ಮಾಜಿ ನ್ಯಾಯಾಧೀಶ ನಾರಿಮನ್

ನ್ಯಾಯಾಧೀಶರ ನೇಮಕಾತಿ ವಿಳಂಬ ಮಾಡುತ್ತಿರುವುದಕ್ಕೆ ಸರ್ಕಾರವನ್ನು ಟೀಕಿಸಿದ ಮಾಜಿ ನ್ಯಾಯಾಧೀಶ ನಾರಿಮನ್

- Advertisement -
- Advertisement -

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕೊಲಿಜಿಯಂ ವ್ಯವಸ್ಥೆಯ ವಿರುದ್ಧ ವಾಗ್ದಾಳಿ ನಡೆಸಿದ್ದು ಮತ್ತೆ ನ್ಯಾಯಾಧೀಶರ ನೇಮಕವನ್ನು ಸರ್ಕಾರ ವಿಳಂಬ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ರೋಹಿಂಟನ್ ಫಾಲಿ ನಾರಿಮನ್ ಅವರು ಶುಕ್ರವಾರ ಟೀಕಿಸಿದ್ದಾರೆ.  ಈ ಬಗ್ಗೆ ಪಿಟಿಐ ವರದಿ ಮಾಡಿದೆ.

ಸ್ವತಂತ್ರ ಮತ್ತು ನಿರ್ಭೀತ ನ್ಯಾಯಾಧೀಶರು ಇಲ್ಲದಿದ್ದರೆ, ನ್ಯಾಯಾಂಗವು ಕುಸಿಯುತ್ತದೆ ಮತ್ತು ಭಾರತವು ಹೊಸ ಕರಾಳ ಯುಗವನ್ನು ಎದುರಿಸಬೇಕಾಗುತ್ತದೆ ಎಂದು ನಾರಿಮನ್ ಹೇಳಿದರು.

ದೇಶದಲ್ಲಿ ನ್ಯಾಯಾಂಗ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ನ್ಯಾಯಾಂಗದ ನಡುವಿನ ಬಿಕ್ಕಟ್ಟು ಏರ್ಪಟ್ಟಿರುವುದರಿಂದ ಈ ರೀತಿಯ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ: ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಇತ್ತೀಚಿನ ತಿಂಗಳುಗಳಲ್ಲಿ ರಿಜಿಜು ಅವರು, ನ್ಯಾಯಾಧೀಶರ ನೇಮಕಾತಿಯ ಅಸ್ತಿತ್ವದಲ್ಲಿರುವ ಕೊಲಿಜಿಯಂ ವ್ಯವಸ್ಥೆಯನ್ನು ಪದೇ ಪದೇ ಟೀಕಿಸಿದ್ದಾರೆ. ಅದು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯಿದೆಯೊಂದಿಗೆ ಇರಬೇಕು ಎಂದು ನಾರಿಮನ್ ಒತ್ತಾಯಿಸಿದರು.

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯ್ದೆಯು, ಮುಖ್ಯ ನ್ಯಾಯಮೂರ್ತಿ, ಇಬ್ಬರು ಹಿರಿಯ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಕಾನೂನು ಸಚಿವರು ಮತ್ತು ಮುಖ್ಯ ನ್ಯಾಯಮೂರ್ತಿ, ಪ್ರಧಾನಿ ಮತ್ತು ವಿರೋಧ ಪಕ್ಷದ ನಾಯಕರಿಂದ ನಾಮನಿರ್ದೇಶನಗೊಂಡ ಇತರ ಇಬ್ಬರು ಗಣ್ಯ ವ್ಯಕ್ತಿಗಳನ್ನು ಒಳಗೊಂಡ ಸಂಸ್ಥೆಯ ಮೂಲಕ ನ್ಯಾಯಾಂಗ ನೇಮಕಾತಿಗಳನ್ನು ಮಾಡಲು ಪ್ರಸ್ತಾಪಿಸಿದೆ.

ಕೊಲಿಜಿಯಂ ವ್ಯವಸ್ಥೆಯ ಅಡಿಯಲ್ಲಿ, ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಐವರು ಹಿರಿಯ-ಅತ್ಯಂತ ನ್ಯಾಯಾಧೀಶರು, ಉನ್ನತ ನ್ಯಾಯಾಲಯ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಳ ಬಗ್ಗೆ ನಿರ್ಧರಿಸುತ್ತಾರೆ.

“ಸರಿಯೋ ತಪ್ಪೋ” ನ್ಯಾಯಾಲಯದ ತೀರ್ಪುಗಳನ್ನು ಒಪ್ಪಿಕೊಳ್ಳುವುದು ರಿಜಿಜು ಅವರ ಕರ್ತವ್ಯವಾಗಿದೆ ಎಂದು ಶನಿವಾರ ನಾರಿಮನ್ ಹೇಳಿದರು ಎಂದು NDTV ವರದಿ ಮಾಡಿದೆ.

“ಈಗ, ನೀವು [ರಿಜಿಜು] ಅದನ್ನು ಟೀಕಿಸಬಹುದು,” ಮತ್ತೆ “ನಾಗರಿಕನಾಗಿ, ನಾನು ಕೂಡ ಅದನ್ನು ಟೀಕಿಸಬಹುದು, ಯಾವುದೇ ಸಮಸ್ಯೆ ಇಲ್ಲ. ಆದರೆ ಎಂದಿಗೂ ಮರೆಯಬೇಡ, ನಾನು ಇಂದು ನಾಗರಿಕನಾಗಿದ್ದೇನೆ. ನನ್ನಂತಾಗದಿದ್ದರೆ ನಾನು ಒಪ್ಪದೇ ಇರಬಹದು. ಆದರೆ, ನೀವು ಅಧಿಕಾರದಲ್ಲಿದ್ದೀರಿ ಆ ತೀರ್ಪಿಗೆ ಬದ್ಧರಾಗಿರುತ್ತಿರಿ” ಎಂದರು.

7 ನೇ ಮುಖ್ಯ ನ್ಯಾಯಮೂರ್ತಿ ಎಂಸಿ ಚಾಗ್ಲಾ ಅವರು, “ಎರಡು ಸಂವಿಧಾನಗಳ ಕಥೆ, ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್” ಎಂಬ ವಿಷಯದ ಕುರಿತು ಉಪನ್ಯಾಸ ನೀಡುವಾಗ, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಈ ಹೇಳಿಕೆಗಳನ್ನು ನೀಡಿದರು.

ನಾರಿಮನ್ ತಮ್ಮ ಭಾಷಣದಲ್ಲಿ ಕೊಲಿಜಿಯಂನ ಶಿಫಾರಸುಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ 30 ದಿನಗಳ ಗಡುವು ಇಡಬೇಕು ಎಂದು ಸಲಹೆ ನೀಡಿದರು ಎಂದು ಬಾರ್ ಮತ್ತು ಪೀಠವು ವರದಿ ಮಾಡಿದೆ.

“ನೇಮಕಾತಿ ವಿಚಾರದಲ್ಲಿ ಅವರದೇ ಹೆಸರುಗಳ ಮೇಲೆ ಕುಳಿತುಕೊಳ್ಳುವುದು ಈ ದೇಶದ ಪ್ರಜಾಪ್ರಭುತ್ವದ ವಿರುದ್ಧವಾಗಿದ್ದು, ಅದು ಅತ್ಯಂತ ಮಾರಕವಾಗುವಂತಹ ವಿಷಯ”. “ಏಕೆಂದರೆ ನೀವು [ಸರ್ಕಾರ] ನಿಜವಾಗಿಯೂ ಏನು ಮಾಡುತ್ತಿದ್ದೀರಿ ಎಂದರೆ ಕೊಲಿಜಿಯಂ ತನ್ನ ಮನಸ್ಸನ್ನು ಬದಲಾಯಿಸಿಕೊಳ್ಳುತ್ತದೆ, ನನೀವು ಹೇಳಿದಂತೆ ಕೇಳಬೇಕು ಎಂದು ಭಾವಿಸುತ್ತಿದ್ದೀರಿ” ಇದು ಸರಿಯಾದ ಯೋಚನೆ ಅಲ್ಲ ಎಂದು ನಾರಿಮನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...