Homeಮುಖಪುಟನ್ಯಾಯಾಧೀಶರ ನೇಮಕಾತಿ ವಿಳಂಬ ಮಾಡುತ್ತಿರುವುದಕ್ಕೆ ಸರ್ಕಾರವನ್ನು ಟೀಕಿಸಿದ ಮಾಜಿ ನ್ಯಾಯಾಧೀಶ ನಾರಿಮನ್

ನ್ಯಾಯಾಧೀಶರ ನೇಮಕಾತಿ ವಿಳಂಬ ಮಾಡುತ್ತಿರುವುದಕ್ಕೆ ಸರ್ಕಾರವನ್ನು ಟೀಕಿಸಿದ ಮಾಜಿ ನ್ಯಾಯಾಧೀಶ ನಾರಿಮನ್

- Advertisement -
- Advertisement -

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕೊಲಿಜಿಯಂ ವ್ಯವಸ್ಥೆಯ ವಿರುದ್ಧ ವಾಗ್ದಾಳಿ ನಡೆಸಿದ್ದು ಮತ್ತೆ ನ್ಯಾಯಾಧೀಶರ ನೇಮಕವನ್ನು ಸರ್ಕಾರ ವಿಳಂಬ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ರೋಹಿಂಟನ್ ಫಾಲಿ ನಾರಿಮನ್ ಅವರು ಶುಕ್ರವಾರ ಟೀಕಿಸಿದ್ದಾರೆ.  ಈ ಬಗ್ಗೆ ಪಿಟಿಐ ವರದಿ ಮಾಡಿದೆ.

ಸ್ವತಂತ್ರ ಮತ್ತು ನಿರ್ಭೀತ ನ್ಯಾಯಾಧೀಶರು ಇಲ್ಲದಿದ್ದರೆ, ನ್ಯಾಯಾಂಗವು ಕುಸಿಯುತ್ತದೆ ಮತ್ತು ಭಾರತವು ಹೊಸ ಕರಾಳ ಯುಗವನ್ನು ಎದುರಿಸಬೇಕಾಗುತ್ತದೆ ಎಂದು ನಾರಿಮನ್ ಹೇಳಿದರು.

ದೇಶದಲ್ಲಿ ನ್ಯಾಯಾಂಗ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ನ್ಯಾಯಾಂಗದ ನಡುವಿನ ಬಿಕ್ಕಟ್ಟು ಏರ್ಪಟ್ಟಿರುವುದರಿಂದ ಈ ರೀತಿಯ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ: ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಇತ್ತೀಚಿನ ತಿಂಗಳುಗಳಲ್ಲಿ ರಿಜಿಜು ಅವರು, ನ್ಯಾಯಾಧೀಶರ ನೇಮಕಾತಿಯ ಅಸ್ತಿತ್ವದಲ್ಲಿರುವ ಕೊಲಿಜಿಯಂ ವ್ಯವಸ್ಥೆಯನ್ನು ಪದೇ ಪದೇ ಟೀಕಿಸಿದ್ದಾರೆ. ಅದು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯಿದೆಯೊಂದಿಗೆ ಇರಬೇಕು ಎಂದು ನಾರಿಮನ್ ಒತ್ತಾಯಿಸಿದರು.

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯ್ದೆಯು, ಮುಖ್ಯ ನ್ಯಾಯಮೂರ್ತಿ, ಇಬ್ಬರು ಹಿರಿಯ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಕಾನೂನು ಸಚಿವರು ಮತ್ತು ಮುಖ್ಯ ನ್ಯಾಯಮೂರ್ತಿ, ಪ್ರಧಾನಿ ಮತ್ತು ವಿರೋಧ ಪಕ್ಷದ ನಾಯಕರಿಂದ ನಾಮನಿರ್ದೇಶನಗೊಂಡ ಇತರ ಇಬ್ಬರು ಗಣ್ಯ ವ್ಯಕ್ತಿಗಳನ್ನು ಒಳಗೊಂಡ ಸಂಸ್ಥೆಯ ಮೂಲಕ ನ್ಯಾಯಾಂಗ ನೇಮಕಾತಿಗಳನ್ನು ಮಾಡಲು ಪ್ರಸ್ತಾಪಿಸಿದೆ.

ಕೊಲಿಜಿಯಂ ವ್ಯವಸ್ಥೆಯ ಅಡಿಯಲ್ಲಿ, ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಐವರು ಹಿರಿಯ-ಅತ್ಯಂತ ನ್ಯಾಯಾಧೀಶರು, ಉನ್ನತ ನ್ಯಾಯಾಲಯ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಳ ಬಗ್ಗೆ ನಿರ್ಧರಿಸುತ್ತಾರೆ.

“ಸರಿಯೋ ತಪ್ಪೋ” ನ್ಯಾಯಾಲಯದ ತೀರ್ಪುಗಳನ್ನು ಒಪ್ಪಿಕೊಳ್ಳುವುದು ರಿಜಿಜು ಅವರ ಕರ್ತವ್ಯವಾಗಿದೆ ಎಂದು ಶನಿವಾರ ನಾರಿಮನ್ ಹೇಳಿದರು ಎಂದು NDTV ವರದಿ ಮಾಡಿದೆ.

“ಈಗ, ನೀವು [ರಿಜಿಜು] ಅದನ್ನು ಟೀಕಿಸಬಹುದು,” ಮತ್ತೆ “ನಾಗರಿಕನಾಗಿ, ನಾನು ಕೂಡ ಅದನ್ನು ಟೀಕಿಸಬಹುದು, ಯಾವುದೇ ಸಮಸ್ಯೆ ಇಲ್ಲ. ಆದರೆ ಎಂದಿಗೂ ಮರೆಯಬೇಡ, ನಾನು ಇಂದು ನಾಗರಿಕನಾಗಿದ್ದೇನೆ. ನನ್ನಂತಾಗದಿದ್ದರೆ ನಾನು ಒಪ್ಪದೇ ಇರಬಹದು. ಆದರೆ, ನೀವು ಅಧಿಕಾರದಲ್ಲಿದ್ದೀರಿ ಆ ತೀರ್ಪಿಗೆ ಬದ್ಧರಾಗಿರುತ್ತಿರಿ” ಎಂದರು.

7 ನೇ ಮುಖ್ಯ ನ್ಯಾಯಮೂರ್ತಿ ಎಂಸಿ ಚಾಗ್ಲಾ ಅವರು, “ಎರಡು ಸಂವಿಧಾನಗಳ ಕಥೆ, ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್” ಎಂಬ ವಿಷಯದ ಕುರಿತು ಉಪನ್ಯಾಸ ನೀಡುವಾಗ, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಈ ಹೇಳಿಕೆಗಳನ್ನು ನೀಡಿದರು.

ನಾರಿಮನ್ ತಮ್ಮ ಭಾಷಣದಲ್ಲಿ ಕೊಲಿಜಿಯಂನ ಶಿಫಾರಸುಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ 30 ದಿನಗಳ ಗಡುವು ಇಡಬೇಕು ಎಂದು ಸಲಹೆ ನೀಡಿದರು ಎಂದು ಬಾರ್ ಮತ್ತು ಪೀಠವು ವರದಿ ಮಾಡಿದೆ.

“ನೇಮಕಾತಿ ವಿಚಾರದಲ್ಲಿ ಅವರದೇ ಹೆಸರುಗಳ ಮೇಲೆ ಕುಳಿತುಕೊಳ್ಳುವುದು ಈ ದೇಶದ ಪ್ರಜಾಪ್ರಭುತ್ವದ ವಿರುದ್ಧವಾಗಿದ್ದು, ಅದು ಅತ್ಯಂತ ಮಾರಕವಾಗುವಂತಹ ವಿಷಯ”. “ಏಕೆಂದರೆ ನೀವು [ಸರ್ಕಾರ] ನಿಜವಾಗಿಯೂ ಏನು ಮಾಡುತ್ತಿದ್ದೀರಿ ಎಂದರೆ ಕೊಲಿಜಿಯಂ ತನ್ನ ಮನಸ್ಸನ್ನು ಬದಲಾಯಿಸಿಕೊಳ್ಳುತ್ತದೆ, ನನೀವು ಹೇಳಿದಂತೆ ಕೇಳಬೇಕು ಎಂದು ಭಾವಿಸುತ್ತಿದ್ದೀರಿ” ಇದು ಸರಿಯಾದ ಯೋಚನೆ ಅಲ್ಲ ಎಂದು ನಾರಿಮನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...