Homeಕರ್ನಾಟಕ’ಕನ್ನಡ ಪ್ರಭ’ದ ಮಾಜಿ ಉದ್ಯೋಗಿಯ ಡೆತ್‌‌‌ ನೋಟ್: ತನಿಖೆಗೆ ಆಗ್ರಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

’ಕನ್ನಡ ಪ್ರಭ’ದ ಮಾಜಿ ಉದ್ಯೋಗಿಯ ಡೆತ್‌‌‌ ನೋಟ್: ತನಿಖೆಗೆ ಆಗ್ರಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

ಶನಿವಾರ ರಾತ್ರಿ ದೇವಾಲಯವೊಂದರ ಬಳಿ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಪತ್ತೆ ಹಚ್ಚಿದ್ದ ಪೊಲೀಸರು ಅಲ್ಲಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.

- Advertisement -
- Advertisement -

ವೈದ್ಯಕೀಯ ಸಚಿವ ಸುಧಾಕರ್‌ ಹಾಗೂ ಕನ್ನಡ ಪ್ರಭ ಸಂಪಾದಕ ರವಿ ಹಗೆಡೆ ಸೇರಿದಂತೆ ಇನ್ನು ಹಲವರ ಕಿರುಕುಳ ನೀಡಿದ್ದಾಗಿ ಆರೋಪಿಸಿ ಕನ್ನಡ ಪ್ರಭ ಚಿಕ್ಕಬಳ್ಳಾಪುರ ಜಿಲ್ಲಾ ವರದಿಗಾರ ಕಳೆದ ಶನಿವಾರ ಸುದೀರ್ಘ ಡೆತ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಸುದ್ದಿ ರಾಜ್ಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ, ಈ ಪ್ರಕರಣದ ಕುರಿತು ತನಿಖೆಯಾಗಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ವಾದ ವಿವಾದಗಳು ಆರಂಭವಾಗಿವೆ. ಈ ನಡುವೆ ಆತ್ಮಹತ್ಯೆಗೆ ಶರಣಾಗಿದ್ದ ಅಶ್ವತ್ಥ್‌ ನಾರಾಯಣ್ ಚೇತರಿಸಿಕೊಳ್ಳುತ್ತಿದ್ದು, ಈ ಪ್ರಕರಣದಲ್ಲಿ ಸರ್ಕಾರದ ನಡೆ ಹೇಗಿರಲಿದೆ? ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ಅಸಲಿಗೆ ಅಶ್ವಥ್‌ ನಾರಾಯಣ ಅವರು ಶನಿವಾರದಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸುಧೀರ್ಘ ಡೆತ್‌‌ನೋಟ್ ಬರೆದಿದ್ದು, ತಮ್ಮ ಸಾವಿಗೆ ಸಚಿವ ಡಾ. ಕೆ. ಸುಧಾಕರ್, ಕನ್ನಡ ಪ್ರಭ ಸಂಪಾದಕ ರವಿ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್, ಸಹ ಸಂಪಾದಕ ಬಿ. ವಿ. ಮಲ್ಲಿಕಾರ್ಜುನಯ್ಯಾ, ಪಿಎಸ್ಐ ಪಾಪಣ್ಣ ಸೇರಿದಂತೆ ಜಿಲ್ಲೆಯ ಇತರೆ ಐದು ಪತ್ರಕರ್ತರು ಕಾರಣ, ಅವರ ಪಿತೂರಿಯಿಂದಲೇ ನನ್ನ ಬದುಕು ಈ ಹಂತಕ್ಕೆ ತಲುಪಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಪತ್ರಕರ್ತೆ ವಿರುದ್ದ ಮಾಜಿ ಸಚಿವ ಅಕ್ಬರ್‌‌ ದಾಖಲಿಸಿದ್ದ ಮಾನಹಾನಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ!

ಡೆತ್‌ನೋಟ್ ಅನ್ನು ಒಂದು ತಿಂಗಳಿನಿಂದ ಬರೆಯುತ್ತಿದ್ದೇನೆ, ಆದರೆ ಕುಟುಂಬದವರ ಮುಖನೋಡಿಕೊಂಡು ತನ್ನ ಆತ್ಮಹತ್ಯೆಯನ್ನು  ಮುಂದೂಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಮುಂಬಡ್ತಿಯನ್ನು ಹಾಗೂ ಸಂಬಳ ತೆಡೆಹಿಡಿದಿದ್ದು ಸೇರಿದಂತೆ ಕೆಲಸದಿಂದ ಕಿತ್ತು ಹಾಕಿದ್ದು ತನ್ನ ಆತ್ಮಹತ್ಯೆಗೆ ಕಾರಣ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ. ಅವರು ತಮ್ಮ ಪತ್ರವನ್ನು ಫೇಸ್‌‌ಬುಕ್‌‌ನಲ್ಲಿ ಅಪ್ಲೋಡ್ ಮಾಡಿದ ತಕ್ಷಣ ಅವರ ಲೊಕೇಶನ್ ಅನ್ನು ಪೊಲೀಸರು ಟ್ಯ್ರಾಕ್ ಮಾಡಿದ್ದರು. ನಂತರ ದೇವಾಲಯವೊಂದರ ಬಳಿ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಪತ್ತೆ ಹಚ್ಚಿದ್ದ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಪತ್ರಕರ್ತ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಬರೆದ ಸುಧೀರ್ಘ ಬರಹ ಇಲ್ಲಿದೆ.

ಅವರನ್ನು ಪತ್ರಿಕೆಯಿಂದ ಕಿತ್ತೆಸೆಯಲು ಆರೋಗ್ಯ ಸಚಿವ ಸುಧಾಕರ್‌ ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆಯವರ ಮೇಲೆ ಒತ್ತಡ ಹೇರಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ. ಆದರೆ, ಈ ಘಟನೆಯ ಬಗ್ಗೆ ಹಾಗೂ ತಮ್ಮ ಮೇಲಿನ ಆರೋಪಗಳ ಬಗ್ಗೆ ಸಚಿವ ಸುಧಾಕರ್ ಅಥವಾ ರವಿ ಹೆಗಡೆ ಈವರೆಗೆ ಸ್ಪಷ್ಟನೆ ನೀಡಿಲ್ಲ.

ಇದನ್ನೂ ಓದಿ: ಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ನಿಷ್ಪಕ್ಷಪಾತ ತನಿಖೆಗೆ ಗೃಹ ಸಚಿವರಿಗೆ ಒತ್ತಾಯಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

ಪತ್ರಕರ್ತ ಅಶ್ವಥ್‌ ನಾರಾಯಣ ಅವರ ಆತ್ಮಹತ್ಯೆ ಯತ್ನ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ಹಿರಿಯ ಪತ್ರಕರ್ತ ಖಿನ್ನತೆಗೊಳಗಾಗಿ ಆತ್ಮಹತ್ಯೆ ಯತ್ನ ಮಾಡಿರುವುದು ಆತಂಕಕಾರಿ ಮತ್ತು ನೋವಿನ ಸಂಗತಿಯಾಗಿದೆ ಎಂದಿರುವ ಅವರು, “ಇವರನ್ನು ಸ್ಥಳೀಯ ಪೊಲೀಸ್ ಪ್ರಕರಣದಲ್ಲಿ ಸಿಲುಕಿಸಲು ಮತ್ತು ಆಗಿಂದಾಗ್ಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡುವ ಪ್ರಯತ್ನ ನಡೆದಿದೆ. ಪತ್ರಕರ್ತನ ಮಾನಸಿಕ ಸ್ಥಿಮಿತ ತಗ್ಗಿಸುವ ಮಟ್ಟಿಗೆ ಪೊಲೀಸ್ ಒತ್ತಡ ಮತ್ತು ಕಿರುಕುಳ ಮಾಡುವುದು ಅತ್ಯಂತ ಖಂಡನೀಯ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಯಿಂದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕು. ಅಲ್ಲದೆ ಬಟ್ಲಹಳ್ಳಿ ಪೊಲೀಸ್ ಠಾಣೆ ಸಬ್‌‌ಇನ್ಸ್ಪೆಕ್ಟರ್ ಪಾಪಣ್ಣ ಅವರನ್ನು ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...