Homeಕರ್ನಾಟಕಕೇರಳದ ಮಾಜಿ ಆರೋಗ್ಯ ಸಚಿವೆ ‘ಶೈಲಜಾ ಟೀಚರ್‌’ ಮಂಗಳೂರಿಗೆ!

ಕೇರಳದ ಮಾಜಿ ಆರೋಗ್ಯ ಸಚಿವೆ ‘ಶೈಲಜಾ ಟೀಚರ್‌’ ಮಂಗಳೂರಿಗೆ!

- Advertisement -
- Advertisement -

ಕೇರಳದಲ್ಲಿ ನಿಫಾ ಮತ್ತು ಕೊರೊನಾ ಎರಗಿದಾಗ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಾಜಿ ಆರೋಗ್ಯ ಸಚಿವೆ ‘ಕೆ.ಕೆ. ಶೈಲಜಾ ಟೀಚರ್‌’ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಸಿಪಿಐಎಂ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವೆಂಬರ್‌ 23 ರ ಮಂಗಳವಾರ ಜಿಲ್ಲೆಯ ಗುರುಪುರ ಕೈಕಂಬದಲ್ಲಿ ನಡೆಯಲಿದೆ.

ಅಂದು ನಡೆಯಲಿರುವ ಬಹಿರಂಗ ಸಭೆಯಲ್ಲಿ ಶೈಲಜಾ ಟೀಚರ್‌ ಅವರು ಪ್ರಮುಖ ಭಾಷಣಕಾರರಾಗಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಓಪನ್ ಸೊಸೈಟಿ ಪ್ರಶಸ್ತಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಮಂಗಳೂರು ನಗರ ಸಿಪಿಐಎಂ ಕಾರ್ಯದರ್ಶಿ ಸುನಿಲ್ ಕುಮಾರ್‌ ಬಜಾಲ್, “ಜಿಲ್ಲಾ ಸಮ್ಮೇಳನದ ಅಂಗವಾಗಿ ನಡೆಯಲಿರುವ ಬಹಿರಂಗ ಸಭೆಗೆ ಅವರು ಆಗಮಿಸಲಿದ್ದಾರೆ. ಅಂದು ಶ್ರಮಿಕರು, ಕಾರ್ಮಿಕರು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಮತ್ತು ಬೆಂಬಲಿಗರು ಸೇರಿದಂತೆ ಸುಮಾರು 10 ಸಾವಿರ ಜನರು ಭಾಗವಹಿಸಲಿದ್ದು, ವರ್ಣರಂಜಿತ ರ್‍ಯಾಲಿ ನಡೆಯಲಿದೆ. ಅವರನ್ನು ಉದ್ದೇಶಿಸಿ ಶೈಲಜಾ ಟೀಚರ್‌ ಭಾಷಣ ಮಾಡಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ಕೇರಳದಲ್ಲಿ ನಿಫಾ ಸಾಂಕ್ರಮಿಕವನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಶೈಲಜಾ ಟೀಚರ್‌, ಕೊರೊನಾ ಸಮಯದಲ್ಲೂ ವಿಶ್ವದ ಗಮನ ಸೆಳೆದಿದ್ದರು.

ಅಮೇರಿಕನ್ ಅಸೋಸಿಯೇಷನ್ ​​ಫಾರ್ ದಿ ಅಡ್ವಾನ್ಸ್‌ಮೆಂಟ್ ಆಫ್ ಸೈನ್ಸ್ (ಎಎಎಎಸ್) ನ ವಿಜ್ಞಾನ ನಿಯತಕಾಲಿಕೆಯು, ಕೇರಳ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಅವರನ್ನು “ಭಾರತದ ಕೋವಿಡ್ ಟೀಚರ್” ಎಂದು ಬಣ್ಣಿಸಿತ್ತು. ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ಅವರನ್ನು ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ವಿಶ್ವದ ‘ಟಾಪ್ ಥಿಂಕರ್-2020’ ಎಂದು ಗೌರವಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟವನ್ನು ಸಮರ್ಪಕವಾಗಿ ನಿಭಾಯಿಸಿದ್ದಕ್ಕೆ ಶೈಲಜಾ ಅವರನ್ನು ವಿಶ್ವಸಂಸ್ಥೆಯು ‘ಸಾರ್ವಜನಿಕ ಸೇವಾ ದಿನಾಚರಣೆ’ಯಲ್ಲಿ ಭಾಷಣಕ್ಕಾಗಿ ಆಹ್ವಾನಿಸಿ ಗೌರವಿಸಿತ್ತು. ಅಲ್ಲದೆ ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ವಿಶ್ವವಿದ್ಯಾಲಯ (CEU) ನೀಡುವ ಓಪನ್ ಸೊಸೈಟಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...