Homeಮುಖಪುಟಸಹಕಾರಿ ಬ್ಯಾಂಕ್‌ ಹಗರಣ: ಕಾಂಗ್ರೆಸ್ ಹಿರಿಯ ಶಾಸಕನಿಗೆ 5 ವರ್ಷ ಜೈಲು

ಸಹಕಾರಿ ಬ್ಯಾಂಕ್‌ ಹಗರಣ: ಕಾಂಗ್ರೆಸ್ ಹಿರಿಯ ಶಾಸಕನಿಗೆ 5 ವರ್ಷ ಜೈಲು

- Advertisement -
- Advertisement -

ನಾಗ್ಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎನ್‌ಡಿಸಿಸಿಬಿ)ನ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ಕೇದಾರ್ ಮತ್ತು ಇತರ ಐವರಿಗೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶುಕ್ರವಾರ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಜೆ ವಿ ಪೆಖ್ಲೆ-ಪುರ್ಕರ್ ಅವರು 20 ವರ್ಷ ಹಳೆಯ ಪ್ರಕರಣದ ತೀರ್ಪು ಪ್ರಕಟಿಸಿದ್ದು, ಆರು ಮಂದಿಗೆ ತಲಾ ₹10ಲಕ್ಷ ದಂಡ ವಿಧಿಸಿದ್ದಾರೆ.

ಸುನಿಲ್ ಕೇದಾರ್ ಜೊತೆಗೆ ಎನ್‌ಡಿಸಿಸಿಬಿಯ ಜನರಲ್ ಮ್ಯಾನೇಜರ್, ನಿರ್ದೇಶಕ, ಹೂಡಿಕೆ ಸಂಸ್ಥೆಯಾದ ಹೋಮ್ ಟ್ರೇಡ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಿಗೆ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿದ್ದ ಇತರ ಮೂವರನ್ನು ಖುಲಾಸೆಗೊಳಿಸಲಾಗಿದೆ.

ಶಾಸಕ ಸುನಿಲ್ ಕೇದಾರ್ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 409 ಅಡಿಯಲ್ಲಿ ತಪ್ಪಿತಸ್ಥರೆಂದು ಪರಿಗಣಿಸಲಾಗಿದೆ.

ಪ್ರಾಸಿಕ್ಯೂಷನ್ ಪ್ರಕಾರ, ಹೋಮ್ ಟ್ರೇಡ್ ಪ್ರೈವೇಟ್ ಲಿಮಿಟೆಡ್ ಮೂಲಕ ಹಣ ಹೂಡಿಕೆ ಮಾಡುವಾಗ ನಿಯಮಗಳನ್ನು ಉಲ್ಲಂಘಿಸಿದ್ದ ಪರಿಣಾಮ ಎನ್‌ಡಿಸಿಸಿಬಿ 2002 ರಲ್ಲಿ ಸರ್ಕಾರಿ ಭದ್ರತೆಗಳಲ್ಲಿ ₹125 ಕೋಟಿ ಕಳೆದುಕೊಂಡಿದೆ. ಆಗ ಸುನೀಲ್ ಕೇದಾರ್ ಬ್ಯಾಂಕಿನ ಅಧ್ಯಕ್ಷರಾಗಿದ್ದರು.

ಸುನಿಲ್ ಕೇದಾರ್ ಮತ್ತು ಇತರ ಆರೋಪಿಗಳಿಗೆ ಬ್ಯಾಂಕಿನ ಸಂಪೂರ್ಣ ಪಾಲನ್ನು ವಹಿಸಿಕೊಡಲಾಗಿತ್ತು. ಈ ನಿಧಿಯು ಬ್ಯಾಂಕ್‌ನ ಮೇಲೆ ಜನರು ನಂಬಿಕೆಯಿಂದ ಇಟ್ಟ, ಕಷ್ಟಪಟ್ಟು ಗಳಿಸಿದ ಹಣ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸುವ ವೇಳೆ ಹೇಳಿದೆ.

ಬ್ಯಾಂಕ್‌ ಅಧ್ಯಕ್ಷರಾಗಿದ್ದ ಸುನಿಲ್ ಕೇದಾರ್ ಮತ್ತು ಆಗಿನ ಜನರಲ್ ಮ್ಯಾನೇಜರ್ ಅಶೋಕ್ ಚೌಧರಿ ಅವರಿಗೆ ಕಾನೂನು ಸೂಚಿಸಿದ ರೀತಿಯಲ್ಲಿ ಹಣವನ್ನು ಹೂಡಿಕೆ ಮಾಡಿಸಲು ಅವಕಾಶ ನೀಡಲಾಗಿತ್ತು. ಆದರೆ, ಅವರು ನಿಯಮ ಉಲ್ಲಂಘಿಸುವ ಮೂಲಕ ನಂಬಿಕೆಯಯನ್ನು ಉಳಿಸಿಕೊಂಡಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ : ಬಿಹಾರ: ತೋಟದಿಂದ ಸೊಪ್ಪು ಕಿತ್ತ ಆರೋಪದಲ್ಲಿ ದಲಿತ ಬಾಲಕಿಯನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...