Homeಕರ್ನಾಟಕಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

- Advertisement -
- Advertisement -

ಕರ್ನಾಟಕ ರಾಜ್ಯದ ಮಾಜಿ ಸಚಿವ, ಮಲ್ಲೇಶ್ವರಂ ಮತ್ತು ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ಮಾಜಿ ಶಾಸಕರಾದ ಎಂ.ರಘುಪತಿ (82) ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಎಂ.ರಘುಪತಿಯವರ ಮೃತದೇಹವನ್ನು ಮಲ್ಲೇಶ್ವರಂನಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಬೆಳಿಗ್ಗೆ (ಜೂನ್‌‌ 19) ಅಂತ್ಯಸಂಸ್ಕಾರ ನೆರವೇರಲಿದೆ.

ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಎಂ.ರಘುಪತಿ ಅವರು ಮಲ್ಲೇಶ್ವರಂ ಮತ್ತು ಶಿವಾಜಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದರು. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಜನತಾ ಪರಿವಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ರಘುಪತಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್.ಟಿ.ರಾಮರಾವ್‌ ಅವರ ಆತ್ಮೀಯರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಸಕ್ರಿಯ ರಾಜಕಾರಣದಿಂದ ಹೊರಗುಳಿದಿದ್ದರು.

ದಕ್ಷಿಣ ಭಾರತದಿಂದ ಅಖಿಲ ಭಾರತ ಯೂತ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾದವರು ರಘುಪತಿ. 1983ರಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಸಿ ಚುನಾವಣೆಯಲ್ಲಿ ಗೆದ್ದರು. ನಂತರದಲ್ಲಿ ಅವರು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಕ್ಕೆ ಬರಬೇಕಾಯಿತು.

ಹೆಗಡೆಯವರ ಕ್ಯಾಬಿನೇಟ್‌ನಲ್ಲಿ ಶಿಕ್ಷಣ ಸಚಿವರಾಗಿದ್ದರು, ಮೀನುಗಾರಿಕೆ, ಕಾರ್ಮಿಕ ಇಲಾಖೆ, ಆಹಾರ ಇಲಾಖೆ, ವಾರ್ತಾ ಇಲಾಖೆಗಳ ಜವಾಬ್ದಾರಿ ನಿರ್ವಹಿಸಿದ್ದರು.

ಸಂಚಾರಿ ಗ್ರಂಥಾಲಯವನ್ನು ಆರಂಭಿಸಿದರು. ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವ ಯೋಜನೆಯನ್ನು ಆರಂಭಿಸಿದವರು ರಘುಪತಿಯವರೇ. ದೂರದರ್ಶನವನ್ನು ಬೆಂಗಳೂರಿನಲ್ಲಿ ಆರಂಭಿಸಿದರು.

ಶಿಕ್ಷಕರ ಸಮಸ್ಯೆಗಳು ಬಂದಾಗ ಮುಂದೆ ಬರುತ್ತಿದ್ದರು. ಮೌಲ್ಯಮಾಪನ ಮಾಡಿದಾಗ ಶಿಕ್ಷಕರ ಭತ್ಯೆಯನ್ನು  ಅಂದಿಗಂದಿಗೆ ನೀಡುವುದನ್ನು ಆರಂಭಿಸಿದರು. ಖಾಸಗಿ ಕಾಲೇಜುಗಳನ್ನು ವಶಕ್ಕೆ ಪಡೆದು ಸರ್ಕಾರಿ ಕೆಲಸಕ್ಕೆ ನೇಮಿಸಿದರು.

ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಆತ್ಮೀಯರಾಗಿದ್ದರು. ವಿ.ಪಿ.ಸಿಂಗ್ ಅವರು ಬೆಂಗಳೂರಿಗೆ ಬಂದಾಗ ರಘುಪತಿಯವರ ಮನೆಗೆ ಬರದೆ ಹಿಂತಿರುಗುತ್ತಿರಲಿಲ್ಲ. ಎನ್‌.ಟಿ.ರಾಮರಾವ್ ಸರ್ಕಾರ ಬಿಕ್ಕಟ್ಟಿನಲ್ಲಿದ್ದಾಗ ಎಲ್ಲ ಶಾಸಕರನ್ನು ಬೆಂಗಳೂರಿಗೆ ಕರೆತಂದು ಅವರನ್ನು ನೋಡಿಕೊಂಡು ವಾಪಸ್ ಕಳುಹಿಸಿದ್ದವರು ರಘುಪತಿ.

ಸಂಜಯ್‌ ಗಾಂಧಿಯವರಿಗೂ ಆತ್ಮೀಯರಾಗಿದ್ದರು. ಒಮ್ಮೆ ಅನಂತಕುಮಾರ್‌ ವಿರುದ್ಧ, ಮತ್ತೊಮ್ಮೆ ಗುಂಡೂರಾವ್ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರು. ವಿಧಾನಸಭಾ ಚುನಾವಣೆಯಲ್ಲಿ ಮಲ್ಲೇಶ್ವರಂ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಜಿ.ಆರ್‌. ಅವರಿಗೂ ರಘುಪತಿ ಆತ್ಮೀಯರಾಗಿದ್ದರು. ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳೊಂದಿಗೆ ಯಾವುದಾದರೂ ಮಾತುಕತೆ ನಡೆಸಬೇಕಿದ್ದರೆ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ರಘುಪತಿಯವರನ್ನು ಜೊತೆಯಲ್ಲಿಯೇ ಕರೆದುಕೊಂಡು ಹೋಗುತ್ತಿದ್ದರು. ಉಭಯ ರಾಜ್ಯಗಳ ನಡುವೆ ಸಂವಹನ ಸಾಧನವಾಗಿ ನಿಂತಿದ್ದವರು ರಘುಪತಿ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಮುಂಜಾನೆ ತಮ್ಮ ವರ್ಣರಂಜಿತ ಬದುಕಿಗೆ ತೆರೆ ಎಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...