Homeಮುಖಪುಟಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

- Advertisement -
- Advertisement -

ತಮಿಳುನಾಡಿನ ಎಐಡಿಂಕೆ ಸರ್ಕಾರದ ಅವಧಿಯಲ್ಲಿ ಮಂತ್ರಿಯಾಗಿದ್ದ ಎಂ.ಮಣಿಕಂಠನ್, ಇಂಡೊ-ಮಲೇ‍ಷಿಯಾ ಮೂಲದ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಭಾನುವಾರ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಭಾನುವಾರ ಬೆಳಗ್ಗೆ ಬೆಂಗಳೂರು ನಗರದಲ್ಲಿ ಚೆನ್ನೈನ ವಿಶೇಷ  ಪೊಲೀಸರ ತಂಡ ಮಣಿಕಂಠನ್ ಅವರನ್ನು ಬಂಧಿಸಿ ತಮಿಳುನಾಡಿಗೆ ಕರೆದುಕೊಂಡು ಹೋಗಿದೆ.

ಇಂಡೊ-ಮಲೇ‍ಷಿಯಾ ಮೂಲದ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿದ, ಗರ್ಭಪಾತ ಮಾಡಿಸಿದ ಮತ್ತು ಬೆದರಿಕೆ ಒಡ್ಡಿದ ಕೃತ್ಯಗಳಲ್ಲಿ ತೊಡಗಿದ ಆರೋಪವನ್ನು ಮಾಜಿ ಸಚಿವ ಮಣಿಕಂಠನ್ ಎದುರಿಸುತ್ತಿದ್ದಾರೆ.

ಮದ್ರಾಸ್ ಹೈಕೋರ್ಟ್‌ನಲ್ಲಿ  ತಮ್ಮ ಬಂಧನಕ್ಕೆ ತಡಕೋರಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮದ್ರಾಸ್ ಹೈಕೋರ್ಟ್ ಮಣಿಕಂಠನ್ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿ ಜೂನ್ 9 ರ ವರೆಗೆ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಮಣಿಕಂಠನ್ ತಮಿಳುನಾಡನ್ನು ತೊರೆದು ತಲೆಮರೆಸಿಕೊಂಡಿದ್ದರು. ಬೆಂಗಳೂರಿನಲ್ಲಿ ಮಣಿಕಂಠನ್ ಅಡಗಿರುವ ನಿಖರ ಮಾಹಿತಿಯನ್ನು ಪಡೆದ ಪೊಲೀಸರು ಇಂದು ಮುಂಜಾನೆ ಅವರನ್ನು ಬಂಧಿಸಿ ತಮಿಳುನಾಡಿಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ: ಆಯಿಷಾ ಸುಲ್ತಾನಾ

ಕಳೆದ ತಿಂಗಳು ಮಲೇಷಿಯಾ ಮೂಲದ ಮಹಿಳೆ ಆಡ್ಯಾರ್ ಆಲ್ ವಿಮೆನ್ ಪೊಲೀಸ್ ಠಾಣೆಯಲ್ಲಿ ಮಣಿಕಂದನ್ ಅವರ ವಿರುದ್ಧ ಮೋಸ, ಅತ್ಯಾಚಾರ, ಗರ್ಭಪಾತದ ಆರೋಪದಲ್ಲಿ ದೂರು ದಾಖಲಿಸಿದ್ದರು.  ಆಡ್ಯಾರ್ ಪೊಲೀಸರು ಮಣಿಕಂಠನ್ ವಿರುದ್ಧ IPC ಸೆಕ್ಷನ್ 376 ( ಅತ್ಯಾಚಾರ) ,ಸೆಕ್ಷನ್ 313 (ಗರ್ಭಪಾತ), ಸೆಕ್ಷನ್ 323 ( ಸ್ವಯಂ ಪ್ರೇರಿತ ಹಲ್ಲೆ), ಸೆಕ್ಷನ್ 417(ಮೋಸ), ಸೆಕ್ಷನ್ 506(i)(ಅಪರಾಧಿಕ ಕೃತ್ಯಕ್ಕೆ ಕುಮ್ಮಕ್ಕು) IT ಕಾಯ್ದೆ ಸೇರಿ ಹಲವು ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

ಮಣಿಕಂದನ್ ಕಳೆದ ನಾಲ್ಕು ವರ್ಷಗಳಿಂದ ತಮ್ಮ ಜೊತೆ ಲಿವ್‌ ಇನ್ ಸಂಬಂಧದಲ್ಲಿ ಇದ್ದಾರೆ. 3 ಸಾರಿ ಬಲವಂತದಿಂದ ಗರ್ಭಪಾತವನ್ನು ಮಾಡಿಸಿದ್ದಾರೆ. ಈಗ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ.

2017 ರಲ್ಲಿ ಮಣಿಕಂಠನ್ ತಮಿಳು ನಾಡಿನ IT  ಇಲಾಖೆಯ ಮಂತ್ರಿಯಾಗಿದ್ದರು. ಆ ಸಂದರ್ಭದಲ್ಲಿ ಇಂಡೋ-ಮಲೇಷಿಯನ್ ನಟಿಯ ಪರಿಚಯವಾಗಿದೆ. ಹಾಗೇ ಪರಿಚಯ ಸ್ನೇಹಕ್ಕೆ ತಿರುಗಿ, ಮದುವೆಯಾಗುವ ಆಮಿಷವೊಡ್ಡಿ ಮಹಿಳೆಗೆ ಗರ್ಭಪಾತವನ್ನು ಮಾಡಿಸಿದ್ದಾರೆ. ವಿವಾಹಿತ ವ್ಯಕ್ತಿಯಾಗಿದ್ದರೂ ತನ್ನನ್ನು ಮದುವೆಯಾಗುವುದಾಗಿ ತಮಿಳು ನಾಡಿನ ಮಾಜಿ ಮಂತ್ರಿ ನಂಬಿಸಿದ್ದರು. ಈಗ ಅವರು ಮಲೇಷಿಯಾಗೆ ಮರಳು, ಇಲ್ಲವಾದರೆ ನಿನ್ನ ಕುಟಂಬಕ್ಕೆ ತೊಂದರೆ ಕೊಡುವುದಾಗಿ ಬೆದರಿಸಿದ್ದಾರೆ. ಹಾಗೆ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಎಲ್ಲಾ ಆರೋಪಗಳನ್ನು ಎಂ.ಮಣಿಕಂಠನ್ ನಿರಾಕರಿಸಿದ್ದು, ಆರೋಪಗಳು ನಿರಾಧಾರವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...