Homeಮುಖಪುಟಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

- Advertisement -
- Advertisement -

ತಮಿಳುನಾಡಿನ ಎಐಡಿಂಕೆ ಸರ್ಕಾರದ ಅವಧಿಯಲ್ಲಿ ಮಂತ್ರಿಯಾಗಿದ್ದ ಎಂ.ಮಣಿಕಂಠನ್, ಇಂಡೊ-ಮಲೇ‍ಷಿಯಾ ಮೂಲದ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಭಾನುವಾರ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಭಾನುವಾರ ಬೆಳಗ್ಗೆ ಬೆಂಗಳೂರು ನಗರದಲ್ಲಿ ಚೆನ್ನೈನ ವಿಶೇಷ  ಪೊಲೀಸರ ತಂಡ ಮಣಿಕಂಠನ್ ಅವರನ್ನು ಬಂಧಿಸಿ ತಮಿಳುನಾಡಿಗೆ ಕರೆದುಕೊಂಡು ಹೋಗಿದೆ.

ಇಂಡೊ-ಮಲೇ‍ಷಿಯಾ ಮೂಲದ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿದ, ಗರ್ಭಪಾತ ಮಾಡಿಸಿದ ಮತ್ತು ಬೆದರಿಕೆ ಒಡ್ಡಿದ ಕೃತ್ಯಗಳಲ್ಲಿ ತೊಡಗಿದ ಆರೋಪವನ್ನು ಮಾಜಿ ಸಚಿವ ಮಣಿಕಂಠನ್ ಎದುರಿಸುತ್ತಿದ್ದಾರೆ.

ಮದ್ರಾಸ್ ಹೈಕೋರ್ಟ್‌ನಲ್ಲಿ  ತಮ್ಮ ಬಂಧನಕ್ಕೆ ತಡಕೋರಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮದ್ರಾಸ್ ಹೈಕೋರ್ಟ್ ಮಣಿಕಂಠನ್ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿ ಜೂನ್ 9 ರ ವರೆಗೆ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಮಣಿಕಂಠನ್ ತಮಿಳುನಾಡನ್ನು ತೊರೆದು ತಲೆಮರೆಸಿಕೊಂಡಿದ್ದರು. ಬೆಂಗಳೂರಿನಲ್ಲಿ ಮಣಿಕಂಠನ್ ಅಡಗಿರುವ ನಿಖರ ಮಾಹಿತಿಯನ್ನು ಪಡೆದ ಪೊಲೀಸರು ಇಂದು ಮುಂಜಾನೆ ಅವರನ್ನು ಬಂಧಿಸಿ ತಮಿಳುನಾಡಿಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ: ಆಯಿಷಾ ಸುಲ್ತಾನಾ

ಕಳೆದ ತಿಂಗಳು ಮಲೇಷಿಯಾ ಮೂಲದ ಮಹಿಳೆ ಆಡ್ಯಾರ್ ಆಲ್ ವಿಮೆನ್ ಪೊಲೀಸ್ ಠಾಣೆಯಲ್ಲಿ ಮಣಿಕಂದನ್ ಅವರ ವಿರುದ್ಧ ಮೋಸ, ಅತ್ಯಾಚಾರ, ಗರ್ಭಪಾತದ ಆರೋಪದಲ್ಲಿ ದೂರು ದಾಖಲಿಸಿದ್ದರು.  ಆಡ್ಯಾರ್ ಪೊಲೀಸರು ಮಣಿಕಂಠನ್ ವಿರುದ್ಧ IPC ಸೆಕ್ಷನ್ 376 ( ಅತ್ಯಾಚಾರ) ,ಸೆಕ್ಷನ್ 313 (ಗರ್ಭಪಾತ), ಸೆಕ್ಷನ್ 323 ( ಸ್ವಯಂ ಪ್ರೇರಿತ ಹಲ್ಲೆ), ಸೆಕ್ಷನ್ 417(ಮೋಸ), ಸೆಕ್ಷನ್ 506(i)(ಅಪರಾಧಿಕ ಕೃತ್ಯಕ್ಕೆ ಕುಮ್ಮಕ್ಕು) IT ಕಾಯ್ದೆ ಸೇರಿ ಹಲವು ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

ಮಣಿಕಂದನ್ ಕಳೆದ ನಾಲ್ಕು ವರ್ಷಗಳಿಂದ ತಮ್ಮ ಜೊತೆ ಲಿವ್‌ ಇನ್ ಸಂಬಂಧದಲ್ಲಿ ಇದ್ದಾರೆ. 3 ಸಾರಿ ಬಲವಂತದಿಂದ ಗರ್ಭಪಾತವನ್ನು ಮಾಡಿಸಿದ್ದಾರೆ. ಈಗ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ.

2017 ರಲ್ಲಿ ಮಣಿಕಂಠನ್ ತಮಿಳು ನಾಡಿನ IT  ಇಲಾಖೆಯ ಮಂತ್ರಿಯಾಗಿದ್ದರು. ಆ ಸಂದರ್ಭದಲ್ಲಿ ಇಂಡೋ-ಮಲೇಷಿಯನ್ ನಟಿಯ ಪರಿಚಯವಾಗಿದೆ. ಹಾಗೇ ಪರಿಚಯ ಸ್ನೇಹಕ್ಕೆ ತಿರುಗಿ, ಮದುವೆಯಾಗುವ ಆಮಿಷವೊಡ್ಡಿ ಮಹಿಳೆಗೆ ಗರ್ಭಪಾತವನ್ನು ಮಾಡಿಸಿದ್ದಾರೆ. ವಿವಾಹಿತ ವ್ಯಕ್ತಿಯಾಗಿದ್ದರೂ ತನ್ನನ್ನು ಮದುವೆಯಾಗುವುದಾಗಿ ತಮಿಳು ನಾಡಿನ ಮಾಜಿ ಮಂತ್ರಿ ನಂಬಿಸಿದ್ದರು. ಈಗ ಅವರು ಮಲೇಷಿಯಾಗೆ ಮರಳು, ಇಲ್ಲವಾದರೆ ನಿನ್ನ ಕುಟಂಬಕ್ಕೆ ತೊಂದರೆ ಕೊಡುವುದಾಗಿ ಬೆದರಿಸಿದ್ದಾರೆ. ಹಾಗೆ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಎಲ್ಲಾ ಆರೋಪಗಳನ್ನು ಎಂ.ಮಣಿಕಂಠನ್ ನಿರಾಕರಿಸಿದ್ದು, ಆರೋಪಗಳು ನಿರಾಧಾರವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...