Homeಕರ್ನಾಟಕಮಾಜಿ ಶಾಸಕ ಮಂಡ್ಯದ ಎಚ್.ಡಿ. ಚೌಡಯ್ಯ ನಿಧನ

ಮಾಜಿ ಶಾಸಕ ಮಂಡ್ಯದ ಎಚ್.ಡಿ. ಚೌಡಯ್ಯ ನಿಧನ

- Advertisement -
- Advertisement -

ಜನಪರ ನಾಯಕ, ಸ್ವಾಭಿಮಾನಿ ರಾಜಕಾರಣಿ ಎಂದೇ ಪ್ರಸಿದ್ಧಿ ಪಡೆದಿದ್ದ ಮಾಜಿ ಶಾಸಕ ಎಚ್.ಡಿ.ಚೌಡಯ್ಯ (94) ಅವರು ಮಂಗಳವಾರ ರಾತ್ರಿ ಮಂಡ್ಯದ ಹೊಳಲು ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ರೈತ ಕುಟುಂಬದಲ್ಲಿ ಜನಿಸಿದ್ದ ಚೌಡಯ್ಯ ಅವರು, ಕೃಷಿ ಪದವಿ (ಬಿಎಸ್ಸಿ ಅಗ್ರಿ) ಪಡೆದಿದ್ದರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಅವರು, ತಾಲೂಕು ಬೋರ್ಡ್‌ ಅಧ್ಯಕ್ಷರಾಗಿದ್ದರು. ಕಾವೇರಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಹೀಗೆ ಅನೇಕ ಹೋರಾಟಗಳ ಮೂಲಕ ರಾಜಕೀಯ ಪ್ರವೇಶಿಸಿದರು. 1978ರಲ್ಲಿ ಪ್ರಥಮ ಬಾರಿಗೆ ಕೆರಗೋಡು ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ನಂತರ ನಾಲ್ಕು ಬಾರಿ ಶಾಸಕರಾಗಿ ಹಾಗೂ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಸತ್ಯ ಹಾಗೂ ಪ್ರಾಮಾಣಿಕ ರಾಜಕಾರಣಿ ಎಂದೇ ಸಮಕಾಲೀನರು ಅವರನ್ನು ನೆನಪಿಸಿಕೊಳ್ಳುತ್ತಾರೆ. ಜನಪರ ಆಲೋಚನೆಗಳಿಂದ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿದ್ದ ಅವರು ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದರು.

ಪಿಇಟಿ ಶಿಕ್ಷಣ ಸಂಸ್ಥೆ ಹುಟ್ಟುಹಾಕಿದ್ದರು. ಪಿಐಎಸ್ ಟ್ರಸ್ಟ್‌ ನ ಮಾಜಿ ಅಧ್ಯಕ್ಷ, ಹಿರಿಯ ಸಹಕಾರಿ ಧುರೀಣರಾದ್ದರು. ಪಿಐಎಸ್ ಟ್ರಸ್ಟ್‌ನ ಅಧ್ಯಕ್ಷರಾಗಿ 31 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಚೌಡಯ್ಯ ಬಳಲುತ್ತಿದ್ದರು. ಇವರ ಅಗಲಿಕೆಗೆ, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.‌ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

“ಆತ್ಮೀಯರು, ಹಿತೈಷಿಯಾಗಿದ್ದ ಮಂಡ್ಯದ ಹಿರಿಯ ಮುತ್ಸದ್ದಿ ಎಚ್.ಡಿ.ಚೌಡಯ್ಯ ಅವರ ನಿಧನ ಅತೀವ ದುಖಃಕರ ಸಂಗತಿ. ಪತ್ನಿಯ ಅಗಲಿಕೆ ಬಳಿಕ ಬಹಳ ನೊಂದಿದ್ದರು. ಆರೋಗ್ಯ ಸಮಸ್ಯೆಗಳಿದ್ದವು. ಶತಾಯುಶಿ ಆಗುತ್ತಾರೆ ಎನ್ನುವ ನನ್ನ ನಿರೀಕ್ಷೆಯನ್ನು ನಿರಾಸೆಗೊಳಿಸಿ ನಮ್ಮನ್ನು ಅಗಲಿದ್ದಾರೆ” ಎಂದು ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರು, “ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರ ಎಚ್.ಡಿ. ಚೌಡಯ್ಯ ಅವರ ನಿಧನದಿಂದ ನನಗೆ ಬಹಳ ನೋವಾಗಿದೆ. ಅವರು ಆದರ್ಶ ಜನಪ್ರತಿನಿಧಿ ಆಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆ ಸಲ್ಲಿಸಿದ್ದರು” ಎಂದು ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿರಿ: ಕನ್ನಡದ ಹಿರಿಯ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...