Homeಕರ್ನಾಟಕಉತ್ತರ ಕನ್ನಡ ಡಿಸಿಸಿ ಅಧ್ಯಕ್ಷ ಪಟ್ಟವೇರಲು ಮಾಜಿ ಶಾಸಕ ಸೈಲ್ ಸರ್ಕಸ್!

ಉತ್ತರ ಕನ್ನಡ ಡಿಸಿಸಿ ಅಧ್ಯಕ್ಷ ಪಟ್ಟವೇರಲು ಮಾಜಿ ಶಾಸಕ ಸೈಲ್ ಸರ್ಕಸ್!

- Advertisement -
- Advertisement -

ಉತ್ತರ ಕನ್ನಡ ಬಿಜೆಪಿಯ ಆಯಕಟ್ಟಿನ ಸ್ಥಾನದಲ್ಲೆಲ್ಲ ಮೇಲ್ವರ್ಗದ ಮಹಾಮಹಿಮರೇ ತುಂಬಿಕೊಂಡು ಅಧಿಕಾರ ಸುಖ ಅನುಭವಿಸುತ್ತಿದ್ದಾರೆ. ಶೂದ್ರರನ್ನ ಬಿಜೆಪಿ ಸೂತ್ರಧಾರರು ಕೇವಲ ಕಾಲಾಳುಗಳಂತೆ ದುಡಿಸಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಹಿಂದುಳಿದ ಸಮುದಾಯದ ಮಾಜಿ ಶಾಸಕ ಸತೀಶ್ ಸೈಲ್ ಅವರಿಗೆ ಡಿಸಿಸಿ (ಜಿಲ್ಲಾ ಕಾಂಗ್ರೆಸ್ ಕಮಿಟಿ) ಅಧ್ಯಕ್ಷ ಪಟ್ಟಕಟ್ಟಲು ಪ್ರಯತ್ನ ತುಂಬಾ ನಾಜೂಕಾಗಿ ನಡೆಯುತ್ತಿದೆ. ಕಾಂಗ್ರೆಸ್ ಒಳರಾಜಕಾರಣದ ಸದ್ದಿನ ಹಿಂದಿನ ಈ ಸುದ್ದಿ ಜಿಲ್ಲೆಯಲ್ಲಿ ದೊಡ್ಡ ಕುತೂಹಲಕ್ಕೆ ಕಾರಣವಾಗಿದೆ. ತಮಾಷೆಯೆಂದರೆ ಬಿಜೆಪಿ ಸೇರಲು ಕಳೆದೆರಡು ವರ್ಷದಿಂದ ರಹಸ್ಯ ಕಾರ್ಯಾಚರಣೆ ನಡೆಸುತ್ತಲೇ ಬಂದ ಸೈಲ್‌ಗೆ ಸಲೀಸಾಗಿ ಜಿಲ್ಲಾ ಕಾಂಗ್ರೆಸ್‌ನ ಅತ್ಯುಚ್ ಪೀಠ ಪ್ರಾಪ್ತಿಯಾಗುತ್ತಿದೆ.

ಸರಿಸುಮಾರು ಹನ್ನೆರಡು ವರ್ಷದಿಂದ ಜಿಲ್ಲಾ ಕಾಂಗ್ರೆಸ್ ಕುರ್ಚಿಯಲ್ಲಿ ಭದ್ರವಾಗಿ ಕೂತಿದ್ದ ಉದ್ಯಮಿ ಭೀಮಣ್ಣನಾಯ್ಕ್ ಅವರಿಂದ ಪಾರ್ಟಿಗೇನೂ ಪ್ರಯೋಜನವಾಗಿಲ್ಲ ಎಂಬ ಕೂಗು ಬಹಳ ದಿನದಿಂದ ಕೇಳಿಬರುತ್ತಲೇ ಇತ್ತು. ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಭಾಮೈದರಾದ ಭೀಮಣ್ಣ ತಮ್ಮ ವ್ಯವಹಾರ ಲಾಭದಿಂದ ಪಕ್ಷಕ್ಕಾಗಿ ಹಣ ಹರಿಸುತ್ತಿದ್ದರೇ ಹೊರತು ಸಂಘಟನೆ ಮಾಡುವ ಚಾಕಚಕ್ಯತೆ ಹೊಂದಿರಲಿಲ್ಲ ಎಂಬುದು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರ ಅಂಬೋಣ. ಜಿಲ್ಲೆಯ ಬಹುಸಂಖ್ಯಾತ ದೀವರ ಸಮುದಾಯದ ಭೀಮಣ್ಣ ರಾಜಕೀಯ ಅಸ್ತಿತ್ವವಿರುವುದೇ ಭಾವ ಬಂಗಾರಪ್ಪನವರ ನಾಮಬಲದಲ್ಲಿ.

ಹಲವು ಬಾರಿ ಜಿಲ್ಲೆಯಿಂದ ಎಂಪಿಗಿರಿಗೆ ಸ್ಪರ್ಧಿಸಿ ಒಮ್ಮೆ ಮಾತ್ರ ಗೆದ್ದಿದ್ದ ವಲಸೆಗಾರ್ತಿ ಮಾರ್ಗರೆಟ್ ಆಳ್ವ ವಿರೋಧಿ, ಜಿಲ್ಲೆಯ ಪುರಾತನ ರಾಜಕಾರಣಿ ಆರ್.ವಿ ದೇಶಪಾಂಡೆ ಬಣದಲ್ಲಿ ಗುರುತಿಸಿಕೊಂಡಿದ್ದ ಭೀಮಣ್ಣ ದೊಡ್ಡವರ ಕೃಪಾಶಿರ್ವಾದದಿಂದಲೇ ನಿರಂತರ ಒಂದೂ ಕಾಲು ದಶಕ ಡಿಸಿಸಿ ಅಧ್ಯಕ್ಷತೆ ಹಿಡಿದಿಟ್ಟುಕೊಂಡಿದ್ದರು. ಬಂಗಾರಪ್ಪ ಮತ್ತು ಮಾರ್ಗರೆಟ್ ಆಳ್ವ ನಡುವಿನ ವೈಮನಸ್ಸು ನಾಜೂಕಾಗಿ ಬಳಸಿಕೊಂಡ ದೇಶಪಾಂಡೆಯವರು, ಜಿಲ್ಲೆಯಲ್ಲಿ ಭೀಮಣ್ಣನವರನ್ನು ಮುಂದಿಟ್ಟುಕೊಂಡೇ ಎದುರಾಳಿಗಳ ಹೆಡೆಮುರಿ ಕಟ್ಟುತ್ತ ಸಾಗಿದ್ದರು. ಜನಸಾಮಾನ್ಯರೊಂದಿಗೆ ಅಷ್ಟೇ ಏಕೆ ಸ್ವಜಾತಿ ದೀವರ ನಡುವೆಯೂ ಸರಳವಾಗಿ ಬೆರೆಯಲಾಗದ ಭೀಮಣ್ಣ ಹಲವು ಬಾರಿ ಎಂಪಿ, ಎಮ್ಮೆಲ್ಲೆಗಿರಿಗೆ ಸ್ಪರ್ಧಿಸಿದರೂ ಗೆಲ್ಲಲಾಗಲಿಲ್ಲ. ಈ ದೌರ್ಬಲ್ಯದಿಂದಾಗಿ ಭೀಮಣ್ಣ ನಾಯಕನಾಗಲೇ ಇಲ್ಲವೆಂಬುದು ಅವರ ಹತ್ತಿರದವರ ಬೇಸರ.

ಮಾಜಿ ಸಂಸದೆ ಮಾರ್ಗರೆಟ್ ಆಳ್ವ ಭೀಮಣ್ಣನವರನ್ನು ಡಿಸಿಸಿ ಅಧ್ಯಕ್ಷತೆಯಿಂದ ಇಳಿಸಲೇಬೇಕೆಂದು ಒಂದಲ್ಲ ಒಂದು ತಂತ್ರ ಮಾಡುತ್ತಲೇ ಇದ್ದರು. ಆದರೆ ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿದ್ದ ಅವರ ಹಿಡಿತದಿಂದ ಡಿಸಿಸಿ ಕುರ್ಚಿ ಕಸಿಯಲು ಆಳ್ವರಿಗೆ ಆಗಲಿಲ್ಲ. ಆಳ್ವರವರು ಹಲವು ಸಲ ಭೀಮಣ್ಣನವರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಅವರು ಅಸಮರ್ಥನೆಂದು ಬಿಂಬಿಸಿದ್ದರು. ಆಗೆಲ್ಲ ದೇಶಪಾಂಡೆ ಕತ್ತಿ ಝಳಪಿಸಿ ಶಿಷ್ಯನನ್ನು ಸಂರಕ್ಷಿಸಿದ್ದರು. ಆದರೆ ಈಗ ಅದ್ಯಾಕೋ ಭೀಮಣ್ಣನವರ ಪರ ವಹಿಸಲು ದೇಶಪಾಂಡೆಯವರಿಗೆ ಸಾಧ್ಯವಾಗುತ್ತಿಲ್ಲ. ಭೀಮಣ್ಣನವರ 12 ವರ್ಷದ ರಿಪೋರ್ಟ್ ಕಾರ್ಡ್ ಮುಂದಿಟ್ಟುಕೊಂಡು ಮಾತಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎದುರು ತನ್ನ ಹಿಂಬಾಲಕನ ತಾರೀಫು ಮಾಡಲಾಗುತ್ತಿಲ್ಲ ದೇಶಪಾಂಡೆ ಸಾಹೇಬರಿಗೆ!

ಡಿಸಿಸಿ ಅಧ್ಯಕ್ಷರ ಬದಲಾವಣೆ ಪಕ್ಕ ಎಂಬ ಸಂದೇಶ ಬರುತ್ತಿದ್ದಂತೆಯೇ ಮಾರ್ಗರೆಟ್ ಆಳ್ವ ಮತ್ತು ದೇಶಪಾಂಡೆ ತಮ್ಮ ಅನುಯಾಯಿಗಳಿಗೆ ಪೀಠ ಕೊಡಿಸಲು ಕರಾಮತ್ತು ಶುರು ಹಚ್ಚಿಕೊಂಡುಬಿಟ್ಟಿದ್ದರು. ಮಾಜಿ ಡಿವೈಸಿಸಿ ಅಧ್ಯಕ್ಷ ರವೀಂದ್ರನಾಥ ನಾಯ್ಕ್, ಮಾಜಿ ಶಾಸಕ ಹಾಲಕ್ಕಿ ಬುಡಕಟ್ಟಿನ ಕೆ.ಎಚ್.ಗೌಡ, ಆಳ್ವ ಅವರ ಮಗ ನಿವೇದಿತ್ ಆಳ್ವ ಹೀಗೆ ಹಲವು ಹೆಸರುಗಳು ತೇಲಾಡಿದವು. ಆದರೆ ಇದ್ದಕ್ಕಿದಂತೆ ಬಿಜೆಪಿಯತ್ತ ತೇಲುಗಣ್ಣು ಬಿಡುತ್ತಿದ್ದ ಕಾರವಾರದ ಮಾಜಿ ಶಾಸಕ ಸತೀಶ್ ಸೈಲ್ ಹೆಸರು ಮುನ್ನಲೆಗೆ ಬಂದುಬಿಟ್ಟಿತು. ಅದಿರೋದ್ಯಮಿಯಾಗಿರುವ ಸೈಲ್ ಬಿಜೆಪಿಯಲ್ಲಿ ಪ್ರಭಾವಿಗಳಾಗಿರುವ ತನ್ನ ಉದ್ಯಮ ಮಿತ್ರರ ಸಹಕಾರದಿಂದ ಬಿಜೆಪಿ ಸೇರಲು ಸರ್ಕಸ್ ಮಾಡುತ್ತಿದ್ದರು. ಆದರೆ ಸಿಎಂ ಯಡಿಯೂರಪ್ಪರಿಗೆ ಆಪ್ತರಾಗಿರುವ ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅಡಿಗಡಿಗೆ ಸೈಲ್‌ಗೆ ಅಡ್ಡಿಪಡಿಸಿ ಯಶಸ್ವಿಯೂ ಆಗಿದ್ದರು.

ಕಾರವಾರದ ಲೋಕಲ್ ರಾಜಕೀಯ ಮತ್ತು ಹಣ ಖರ್ಚು ಮಾಡುವ ಸೈಲ್ ಅವರ ತಾಕತ್ತು ಡಿಸಿಸಿ ಹೊಸ ಅಧ್ಯಕ್ಷರ ನೇಮಕಾತಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಮೊಟ್ಟಮೊದಲ ಆಪರೇಷನ್ ಕಮಲದ ಸ್ಯಾಂಪಲ್ ಎಂದೇ ಹೆಸರಾಗಿರುವ ಮಾಜಿ ಸಚಿವ ಆನಂದ ಅಸ್ನೋಟಿಕರ್ ಬಿಜೆಪಿಯಲ್ಲಿ ಮೂಲೆಗುಂಪಾಗಿ ಸೇರಿದರೂ ಭರ್ಕತ್ ಆಗದೇ ಅತಂತ್ರವಾಗಿ ತೊಳಲಾಡುತ್ತಿದ್ದಾರೆ. ಈಗ ಆನಂದ ಕಾಂಗ್ರೆಸ್ ಸೇರಲು ಶತಾಯಗತಾಯ ಹಾರಾಡುತ್ತಿದ್ದರೂ ಸಾಧ್ಯವಾಗುತ್ತಿಲ್ಲ. ಆಳ್ವ ಮತ್ತು ದೇಶಪಾಂಡೆ ಇಬ್ಬರನ್ನೂ ಎದುರು ಹಾಕಿಕೊಂಡಿರುವ ಅಸ್ನೋಟಿಕರ್ ಅವರಿಗೆ ಕಾಂಗ್ರೆಸ್ ಕದ ತೆರೆಯುತ್ತಲೇ ಇಲ್ಲ. ಈಗ ಮತ್ತೊಂದು ಸುತ್ತಿನ ಪ್ರಯತ್ನ ಶುರುಮಾಡಿರುವ ಅಸ್ನೋಟಿಕರ್ ಇತ್ತೀಚೆಗಷ್ಟೇ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಮಧು ಬಂಗಾರಪ್ಪರ ಬೆನ್ನಿಗೆ ಬಿದ್ದು ಕಾಂಗ್ರೆಸ್ ಸೇರಿಸುವಂತೆ ಗೋಳಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಆನಂದ್ ಅಸ್ನೋಟಿಕರ್ ಅವರ ಅಂಥದೊಂದು ಪ್ರಯತ್ನ ಕ್ಲಿಕ್ ಆಗಿಬಿಟ್ಟರೆ ತಾನು ಕಾಂಗ್ರೆಸ್‌ನಲ್ಲಿ ನೆಲೆ-ಬೆಲೆ ಕಳೆದುಕೊಳ್ಳಬೇಕಾಗುತ್ತದೆಂದು ಲೆಕ್ಕಾಹಾಕಿದ ಸತೀಶ್ ಸೈಲ್ ಡಿಸಿಸಿ ಅಧ್ಯಕ್ಷತೆ ಬೇಡಿಕೆ ಇಟ್ಟುಬಿಟ್ಟರು. ಬಿಜೆಪಿ ಸೇರುವುದು ಸಾಧ್ಯವಾಗದೆಂಬುದು ಖಾತ್ರಿಯಾಗುತ್ತಿದ್ದಂತೆ ಕಾಂಗ್ರೆಸಲ್ಲೇ ಬೇರು ವಿಸ್ತರಿಸುವ ತಂತ್ರವನ್ನು ಸೈಲ್ ಹಾಕಿಕೊಂಡಿದ್ದರು. ಇದಕ್ಕವರಿಗೆ ಸುಪ್ರೀಮ್ ಕೋರ್ಟ್ ನ್ಯಾಯವಾದಿಯಾಗಿರುವ ಮತ್ತು ರಾಹುಲ್ ಗಾಂಧಿ ಜತೆ ಒಡನಾಟವೂ ಹೊಂದಿರುವ ಕಾರವಾರ ಮೂಲದ ದೇವದತ್ ಕಾಮತ್ ಅವರ ಸಹಕಾರವು ಸಿಕ್ಕಿದೆ. ಹಲವು ವರ್ಷದಿಂದ ಉತ್ತರ ಕನ್ನಡದ ಕಾಂಗ್ರೆಸ್ ಸಂಸದನಾಗುವ ಕನಸು ಕಾಣುತ್ತಿರುವ ಈ ವಕೀಲ ದಿಲ್ಲಿಯಲ್ಲಿ ಸೈಲ್ ಪರ ಲಾಬಿ ನಡೆಸಿದ್ದರು ಎನ್ನಲಾಗಿದೆ. ನೇರ ಹೈಕಮಾಂಡ್‌ನಿಂದಲೇ ಸೈಲ್ ಹೆಸರು ಶಿಫಾರಸ್ಸಾಗಿರುವುದರಿಂದ ಡಿಕೆಶಿ ಜಿಲ್ಲಾ ಕಾಂಗ್ರೆಸ್‌ನ ಎರಡೂ ಬಣಗಳಿಗೆ ಆತ ಸಖ್ಯವಾಗುವಂತೆ ನೋಡಿಕೊಳ್ಳುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ದುರ್ಬಲವಾಗಿರುವ ಜಿಲ್ಲಾ ಕಾಂಗ್ರೆಸ್ ಕಟ್ಟಲು ಬೇಕಾದ ಹಣಕಾಸು ಬಲ ಸೈಲ್ ಅವರಿಗೆ ಇರುವುದರಿಂದ ಎಲ್ಲರೂ ದುಸರಾ ಮಾತಾಡದೆ ಒಪ್ಪಿಕೊಂಡಿದ್ದಾರೆ!

ಸೈಲ್‌ರಿಂದ ಉತ್ತರಕನ್ನಡದಲ್ಲಿ ಕಾಂಗ್ರೆಸ್‌ಗೆ ಮರುಹುಟ್ಟು ಕೊಡಲು ಸಾಧ್ಯವೋ? ಇಲ್ಲವೋ? ಎಂಬುದು ದೇಶಪಾಂಡೆ, ಆಳ್ವಾ ಮತ್ತು ಸ್ವತಃ ಸೈಲ್ ಅವರಿಗೂ ಗೊತ್ತಿಲ್ಲ. ಆದರೆ ಸೈಲ್ ಅಧ್ಯಕ್ಷತೆ ವಹಿಸಿಕೊಂಡರೆ ಇವರೆಲ್ಲರ ವೈಯಕ್ತಿಕ ಅಜೆಂಡಾ ಈಡೇರಿಕೆಗೆ ಒಂದಿಷ್ಟು ಸಹಾಯವಾಗುತ್ತದೆ. ಮಗನನ್ನು ಶಿರಸಿಯಿಂದ ಶಾಸಕನಾಗಿಸುವ ಆಸೆ ಆಳ್ವಾ ಅವರದ್ದಾದರೆ, ಮುಂಬರುವ ಪಾರ್ಲಿಮೆಂಟ್ ಇಲೆಕ್ಷನ್‌ನಲ್ಲಿ ತಮ್ಮ ಮಗನನ್ನು ಸಂಸದನಾಗಿ ಮಾಡಬೇಕೆಂಬ ಯೋಜನೆಯಲ್ಲಿ ದೇಶಪಾಂಡೆಯಿದ್ದಾರೆ. ತಾನು ಡಿಸಿಸಿ ಅಧ್ಯಕ್ಷನಾದರೆ ಕಾರವಾರದಲ್ಲಿ ತನಗೆ ಎದುರಾಳಿಯಾಗಿರುವ ಅಸ್ನೋಟಿಕರ್ ಕಾಂಗ್ರೆಸ್ ಒಳಬರದಂತೆ ಶಾಶ್ವತವಾಗಿ ಕದ ಹಾಕಬಹುದೆಂಬ ಲೆಕ್ಕಾಚಾರ ಸೈಲ್‌ರದು. ಈ ಮೇಲಾಟದ ಮಧ್ಯದಲ್ಲಿ ನಿಂತ ನೀರಾಗಿರುವ ಜಿಲ್ಲಾ ಕಾಂಗ್ರೆಸ್ ರಾಜಕಾರಣ ಭೀಮಣ್ಣನಾಯ್ಕ್ ನಿರ್ಗಮನದಿಂದ ಹರಿಯಲು ಶುರುವಾಗಬಹುದೆಂಬ ಭಾವನೆ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರದಾಗಿದೆ.


ಇದನ್ನೂ ಓದಿ: ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...