Homeಮುಖಪುಟಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್.ಪಾಟೀಲ್, ಉದ್ಯಮಿ ಶ್ರೀನಿವಾಸ್ ಭಟ್‌

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್.ಪಾಟೀಲ್, ಉದ್ಯಮಿ ಶ್ರೀನಿವಾಸ್ ಭಟ್‌

- Advertisement -
- Advertisement -

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, “ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಕಳೆದ ಚುನಾವಣೆಯಲ್ಲಿ ಕೇವಲ 1480 ಮತಗಳ ಅಂತರದಲ್ಲಿ ಸೋತಿದ್ದರು. ಕೆಎಸ್ಆರ್ ಟಿಸಿ ಚೇರ್ಮನ್ ಆಗಿದ್ದರು. ಇವರು ನಮ್ಮ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್, ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಿ ಎಲ್ಲ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ” ಎಂದು ವಿವರಿಸಿದರು.

“ಬಿಜೆಪಿಯ ಸಕ್ರಿಯ ನಾಯಕರಾದ ಜಿಲ್ಲಾ ಖಜಾಂಚಿಗಳಾದ ಉದ್ಯಮಿ ಶ್ರೀನಿವಾಸ್ ಭಟ್ ದಾತ್ರಿ ಅವರು ಕೂಡ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇವರು ಉತ್ತಮ ಸಂಘಟನಕಾರರಾಗಿದ್ದು, ಬಹಳ ಸೇವೆ ಮಾಡಿರುವ ಕುಟುಂಬದಿಂದ ಬಂದಿದ್ದಾರೆ. ಯಲ್ಲಾಪುರ ಕ್ಷೇತ್ರದ ಯುವಕರಲ್ಲಿ ಬಹಳ ಚಿರಪರಿಚಿತರಾಗಿದ್ದಾರೆ. ಅವರು ಕೂಡ ದೇಶಪಾಂಡೆ ಹಾಗೂ ನನ್ನನ್ನು ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಇವರು ಕೂಡ ಹಲವು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇವರು ಸಲ್ಲಿಸಿದ ಅರ್ಜಿ ಮೇಲೆ ನಾವೆಲ್ಲರೂ ಚರ್ಚೆ ಮಾಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ” ಎಂದರು.

“ಇನ್ನು ಬಹಳ ಅರ್ಜಿಗಳು ಬಾಕಿ ಇವೆ. ಇಂದು ಇನ್ನಿಬ್ಬರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾಗಿತ್ತು, ಅವರ ಆರೋಗ್ಯ ಸರಿ ಇಲ್ಲದ ಕಾರಣ ಸೇರ್ಪಡೆ ಕಾರ್ಯಕ್ರಮ ಮುಂದೂಡಿದ್ದೇವೆ. ಕೆಲವರು ಅಧಿವೇಶನ ಮುಗಿಯಲಿ ಎಂದು ಕಾಯುತ್ತಿದ್ದಾರೆ. ನಾವು ಮುಂದಿನ ದಿನಗಳಲ್ಲಿ ಪ್ರತಿವಾರ ಸಭೆ ಮಾಡಿ ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಈ ಮಧ್ಯೆ ನಮ್ಮ ಪ್ರವಾಸಗಳು ನಿಗಧಿಯಾಗಿವೆ. ಈ ಪ್ರವಾಸ ಸಂದರ್ಭದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

“ಡಿ.30 ರಂದು ಬಿಜಾಪುರದಲ್ಲಿ ಕೃಷ್ಣಾ ನದಿ ವಿಚಾರವಾಗಿ ಹೋರಾಟ ಮಾಡುತ್ತಿದ್ದೇವೆ. ಜ.2 ರಂದು ಮಹದಾಯಿ ವಿಚಾರದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡಲಿದ್ದೇವೆ. ಸರ್ಕಾರ ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ. ಜ.8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇನ್ನು ನಾನು ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿ ರಾಜ್ಯದ 20 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು” ಎಂದು ಹೇಳಿದರು.

“ಭಾರತ ಜೋಡೋ ಯಾತ್ರೆ ಸಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು. ಈ ಪ್ರವಾಸದ ನಂತರ 224 ಕ್ಷೇತ್ರಗಳಲ್ಲೂ ಪ್ರತ್ಯೇಕವಾಗಿ ಪ್ರವಾಸ ಮಾಡುತ್ತೇವೆ. ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಹಾಗೂ ದಕ್ಷಿಣ ಭಾಗದಲ್ಲಿ ನಾನು ಪ್ರವಾಸ ಮಾಡುತ್ತೇನೆ. ನಂತರ ಅವರು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮಾಡುತ್ತಾರೆ. ನಾನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೋಗುತ್ತೇನೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...