Homeಮುಖಪುಟಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್.ಪಾಟೀಲ್, ಉದ್ಯಮಿ ಶ್ರೀನಿವಾಸ್ ಭಟ್‌

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್.ಪಾಟೀಲ್, ಉದ್ಯಮಿ ಶ್ರೀನಿವಾಸ್ ಭಟ್‌

- Advertisement -
- Advertisement -

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, “ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಕಳೆದ ಚುನಾವಣೆಯಲ್ಲಿ ಕೇವಲ 1480 ಮತಗಳ ಅಂತರದಲ್ಲಿ ಸೋತಿದ್ದರು. ಕೆಎಸ್ಆರ್ ಟಿಸಿ ಚೇರ್ಮನ್ ಆಗಿದ್ದರು. ಇವರು ನಮ್ಮ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್, ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಿ ಎಲ್ಲ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ” ಎಂದು ವಿವರಿಸಿದರು.

“ಬಿಜೆಪಿಯ ಸಕ್ರಿಯ ನಾಯಕರಾದ ಜಿಲ್ಲಾ ಖಜಾಂಚಿಗಳಾದ ಉದ್ಯಮಿ ಶ್ರೀನಿವಾಸ್ ಭಟ್ ದಾತ್ರಿ ಅವರು ಕೂಡ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇವರು ಉತ್ತಮ ಸಂಘಟನಕಾರರಾಗಿದ್ದು, ಬಹಳ ಸೇವೆ ಮಾಡಿರುವ ಕುಟುಂಬದಿಂದ ಬಂದಿದ್ದಾರೆ. ಯಲ್ಲಾಪುರ ಕ್ಷೇತ್ರದ ಯುವಕರಲ್ಲಿ ಬಹಳ ಚಿರಪರಿಚಿತರಾಗಿದ್ದಾರೆ. ಅವರು ಕೂಡ ದೇಶಪಾಂಡೆ ಹಾಗೂ ನನ್ನನ್ನು ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಇವರು ಕೂಡ ಹಲವು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇವರು ಸಲ್ಲಿಸಿದ ಅರ್ಜಿ ಮೇಲೆ ನಾವೆಲ್ಲರೂ ಚರ್ಚೆ ಮಾಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ” ಎಂದರು.

“ಇನ್ನು ಬಹಳ ಅರ್ಜಿಗಳು ಬಾಕಿ ಇವೆ. ಇಂದು ಇನ್ನಿಬ್ಬರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾಗಿತ್ತು, ಅವರ ಆರೋಗ್ಯ ಸರಿ ಇಲ್ಲದ ಕಾರಣ ಸೇರ್ಪಡೆ ಕಾರ್ಯಕ್ರಮ ಮುಂದೂಡಿದ್ದೇವೆ. ಕೆಲವರು ಅಧಿವೇಶನ ಮುಗಿಯಲಿ ಎಂದು ಕಾಯುತ್ತಿದ್ದಾರೆ. ನಾವು ಮುಂದಿನ ದಿನಗಳಲ್ಲಿ ಪ್ರತಿವಾರ ಸಭೆ ಮಾಡಿ ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಈ ಮಧ್ಯೆ ನಮ್ಮ ಪ್ರವಾಸಗಳು ನಿಗಧಿಯಾಗಿವೆ. ಈ ಪ್ರವಾಸ ಸಂದರ್ಭದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

“ಡಿ.30 ರಂದು ಬಿಜಾಪುರದಲ್ಲಿ ಕೃಷ್ಣಾ ನದಿ ವಿಚಾರವಾಗಿ ಹೋರಾಟ ಮಾಡುತ್ತಿದ್ದೇವೆ. ಜ.2 ರಂದು ಮಹದಾಯಿ ವಿಚಾರದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡಲಿದ್ದೇವೆ. ಸರ್ಕಾರ ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ. ಜ.8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇನ್ನು ನಾನು ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿ ರಾಜ್ಯದ 20 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು” ಎಂದು ಹೇಳಿದರು.

“ಭಾರತ ಜೋಡೋ ಯಾತ್ರೆ ಸಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು. ಈ ಪ್ರವಾಸದ ನಂತರ 224 ಕ್ಷೇತ್ರಗಳಲ್ಲೂ ಪ್ರತ್ಯೇಕವಾಗಿ ಪ್ರವಾಸ ಮಾಡುತ್ತೇವೆ. ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಹಾಗೂ ದಕ್ಷಿಣ ಭಾಗದಲ್ಲಿ ನಾನು ಪ್ರವಾಸ ಮಾಡುತ್ತೇನೆ. ನಂತರ ಅವರು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮಾಡುತ್ತಾರೆ. ನಾನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೋಗುತ್ತೇನೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...