Homeಕರ್ನಾಟಕಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ; ದುಡಿಕಿನ ತೀರ್ಮಾನ ಎಂದ ಕಾಂಗ್ರೆಸ್

ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ; ದುಡಿಕಿನ ತೀರ್ಮಾನ ಎಂದ ಕಾಂಗ್ರೆಸ್

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಾಗುತ್ತಿದ್ದು, ನಿರೀಕ್ಷೆಯಂತೆ ನಾಯಕರುಗಳ ಪಕ್ಷಾಂತರಗಳು ಪ್ರಾರಂಭವಾಗಿದೆ. ಈ ನಡುವೆ ಕಾಂಗ್ರೆಸ್‌ನ ಹಿರಿಯ ನಾಯಕ, ತುಮಕೂರಿನ ಮಾಜಿ ಸಂಸದ ಎಸ್‌.ಪಿ. ಮುದ್ದಹನುಮೇಗೌಡ ಅವರು ಗುರುವಾರ ಬಿಜೆಪಿಗೆ ಸೇರಿದ್ದಾರೆ.

ಮುದ್ದಹನುಮೇಗೌಡ ಅವರ ಜೊತಗೆ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್. ಅನಿಲ್‌ಕುಮಾರ್, ನಟ ಶಶಿಕುಮಾರ್ ಸೇರಿದಂತೆ ಹಲವರು ಜನರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಗೆ ಸೇರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುದ್ದಹನುಮೆಗೌಡ ಅವರು ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದು, ನ್ಯಾಯಧೀಶರಾಗಿ ಕೂಡಾ ಸೇವೆ ಸಲ್ಲಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿದ್ದ ಕಾರಣಕ್ಕೆ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನು ಹೆಚ್.ಡಿ. ದೇವೇಗೌಡರಿಗೆ ಕಾಂಗ್ರೆಸ್ ಬಿಟ್ಟುಕೊಟ್ಟಿತ್ತು. ಹೀಗಾಗಿ ಮುದ್ಧಹನುಮೆಗೌಡ ಅವರು ಕಾಂಗ್ರೆಸ್ ಜೊತೆಗೆ ಮುನಿಸಿಕೊಂಡಿದ್ದರು.

ತಮ್ಮ ಪಕ್ಷದ ಹಿರಿಯ ನಾಯಕನ ನಿರ್ಗಮನದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮುದ್ದಹನುಮೆಗೌಡ ಅವರು ಸ್ವಲ್ಪ ದುಡಿಕಿ ತೀಮಾನ ತೆಗೆದುಕೊಂಡಿದ್ದು, ಒಂದು ವೇಳೆ ಪಕ್ಷದಲ್ಲೆ ಇರುತ್ತಿದ್ದರೆ ಪಕ್ಷದಿಂದ ಅವರಿಗೆ ಈ ಬಾರಿ ಅವಕಾಶ ಸಿಗುತ್ತಿತ್ತು ಎಂದು ಹೇಳಿದೆ.

ಇದನ್ನೂಓದಿ: ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್ ಮೌರ್ಯ ಅವರು, “ಮುದ್ದಹನುಮೆಗೌಡರು ತಮ್ಮ ತೀರ್ಮಾನ ತೆಗೆದುಕೊಳ್ಳಲು ಸ್ವತಂತ್ರರಿದ್ದಾರೆ. ಆದರೆ ಅವರು ಬಿಜೆಪಿಗೆ ಹೋಗಿರುವುದು ಅವರು ನಂಬಿರುವಂತಹ ತತ್ವ ಸಿದ್ದಾಂತಗಳಿಗೆ ತದ್ವಿರುದ್ಧವಾಗಿದೆ. ಅಷ್ಟೆ ಅಲ್ಲದೆ ಬಿಜೆಪಿ ಅವರನ್ನು ಯಾವ ರೀತಿಯಲ್ಲಿ ನಡೆಸಿಕೊಳ್ಳುತ್ತದೆ ಎಂಬುವುದು ಕೂಡಾ ನಮಗೆ ಅನುಮಾನವಿದೆ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲಾ ರೀತಿಯ ಅವಕಾಶಗಳನ್ನು ನೀಡಿತ್ತು. ಅವರು ಇನ್ನೊಂದು ಸ್ವಲ್ಪ ತಾಳ್ಮೆಯಿಂದ ಇರಬೇಕಾಗಿತ್ತು ಎನ್ನುವುದು ನಮ್ಮ ನಿರೀಕ್ಷೆಯಾಗಿತ್ತು” ಎಂದು ಹೇಳಿದರು.

ಚುನಾವಣೆ ಸಮಯದಲ್ಲಿ ಪಕ್ಷದ ಹಿರಿಯ ನಾಯಕ ವಿರೋಧಿ ಪಕ್ಷಕ್ಕೆ ಸೇರಿದರೆ ಪಕ್ಷ ಅದನ್ನು ಹೇಗೆ ಸರಿತೂಗಿಸುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ನಿಕೇತ್‌ ರಾಜ್, “ಬಂದದ್ದೆಲ್ಲವೂ ಬರಲಿ, ಭಗವಂತನ ದಯೆಯೊಂದಿರಲಿ ಎಂಬ ಮಾತಿನಂತೆ ಕಾಂಗ್ರೆಸ್‌ ಪಕ್ಷವಿದೆ. ಪಕ್ಷ ಬಿಟ್ಟು ಹೋಗುವವರನ್ನು ಯಾರೂ ತಡೆಹಾಕಿ ನಿಲ್ಲಿಸಲು ಆಗುವುದಿಲ್ಲ. ಪಕ್ಷ ಬಿಟ್ಟು ಹೋಗುವವರು ಹೇಗೆ ಇದ್ದಾರೋ ಹಾಗೆಯೆ, ಪಕ್ಷಕ್ಕೆ ಸೇರುವವರ ಸಂಖ್ಯೆ ಕೂಡಾ ಹೆಚ್ಚಾಗಿದೆ” ಎಂದು ಹೇಳಿದರು.

“ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರಕ್ಕೆ ಅತ್ಯುತ್ತಮ ಅಭ್ಯರ್ಥಿ ಸಿಕ್ಕಿದ್ದು, ಜೆಡಿಎಸ್‌ ಎಮ್‌ಎಲ್‌ಸಿ ಬೆಮಲ್ ಕಾಂತರಾಜ್ ಸಿದ್ದರಾಗುತ್ತಿದ್ದಾರೆ. ಗುಬ್ಬಿ ಕ್ಷೇತ್ರದ ಶಾಸಕರು ಕೂಡಾ ಕಾಂಗ್ರೆಸ್ ಸೇರಲು ಸಿದ್ದರಾಗುತ್ತಿದ್ದಾರೆ. ಇದೇ ರೀತಿ ತುಮಕೂರು ಜಿಲ್ಲೆಯಾದ್ಯಂತ ಬಿಜೆಪಿ ಮತ್ತು ಜೆಡಿಎಸ್‌ನ ಹಾಲಿ ಶಾಸಕರಿಂದ ಹಿಡಿದು ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಸೇರಲು ತಯಾರಾಗುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ದೃತಿಗೆಡುವುದಿಲ್ಲ” ಎಂದು ನಿಕೇತ್ ರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂಓದಿ: ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ಬಿಜೆಪಿ ನಾಯಕರ ಸೂಚನೆ ಮೇರೆಗೆ ತಮ್ಮ ನಿವೃತ್ತಿಯ ನಂತರ ಕೊರಟಗೆರೆ ಕ್ಷೇತ್ರದಲ್ಲಿ ಚುನಾವಣೆಗೆ ಪೂರ್ವ ತಯಾರಿ ನಡೆಸಿದ್ದ ಅನಿಲ್‌ಕುಮಾರ್, ಈಗ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಅವರು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಕೊರಟಗೆರೆ ಕ್ಷೇತ್ರದಲ್ಲಿ ಅನಿಲ್‌ಕುಮಾರ್ 2023ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತ ಎನ್ನಲಾಗುತ್ತಿದೆ.

ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ನಟ ಶಶಿಕುಮಾರ್ ಅವರು ಕಳೆದ ಚುನಾವಣೆಯಲ್ಲಿ ಜೆಡಿಎಸ್ ಸೇರಿದ್ದರು; ಇದೀಗ ಬಿಜೆಪಿ ಸೇರಿದ್ದಾರೆ. ಇಷ್ಟೆ ಅಲ್ಲದೆ ಸೇವಾ ದಳದ ರಾಜ್ಯ ಉಪಾಧ್ಯಕ್ಷ ಹನುಮಂತರಾವ್ ಜವಳಿ, ರಮೇಶ ಮುನಿಯಪ್ಪ, ಜಿ. ವೆಂಕಟಾಚಲಯ್ಯ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...