Homeಮುಖಪುಟ'ಕೇಸರಿಮಯ ಪಾಕಿಸ್ತಾನ’: ಭಾರತದಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಜೂಲಿಯೊ ರಿಬೇರೊ ಕಳವಳ

‘ಕೇಸರಿಮಯ ಪಾಕಿಸ್ತಾನ’: ಭಾರತದಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಜೂಲಿಯೊ ರಿಬೇರೊ ಕಳವಳ

- Advertisement -
- Advertisement -

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಜೂಲಿಯೊ ರಿಬೇರೊ ಅವರು ಗೋವಾದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆಯನ್ನು ನೀಡಿದ್ದರು. ಇದು ಬಿಜೆಪಿಯ ಟೀಕೆಗೆ ಕಾರಣವಾಗಿದೆ.

ಗೋವಾದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಾಜಿ ಪೊಲೀಸ್ ಕಮಿಷನರ್ ಜೂಲಿಯೊ ರಿಬೇರೊ, ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರು 2ನೇ ದರ್ಜೆಯ ಪ್ರಜೆಗಳಂತೆ ಭಯದಿಂದ ಬದುಕುತ್ತಿದ್ದಾರೆ. ಅದು ಇಲ್ಲಿ (ಭಾರತದಲ್ಲಿ) ಸಂಭವಿಸಬಹುದು. ಇದನ್ನೇ ನಾನು ಹೆದರುತ್ತೇನೆ ಎಂದು ಹೇಳಿದ್ದರು.

ಕ್ರಿಸ್‌ಮಸ್‌ ಹಿನ್ನೆಲೆ ದೆಹಲಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಸಂವಾದವನ್ನು ಉಲ್ಲೇಖಿಸಿದ ರಿಬೇರೊ, ಮೋದಿ ಅವರು ಕೇರಳದಲ್ಲಿ ಕ್ರಿಶ್ಚಿಯನ್ ಸಮುದಾಯವನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ. ಬಿಷಪ್‌ಗಳಲ್ಲಿ ಒಬ್ಬರು ಓಲೈಕೆಗೆ ಮಣಿದಿದ್ದಾರೆ. ಇತರರು ಬಹುಶಃ ಅವರನ್ನು ಹಿಂಬಾಲಿಸುತ್ತಾರೆ. ಮೋದಿ ಏನು ಮಾಡಲು ಪ್ರಯತ್ನಿಸುತ್ತಿದ್ದಾರೆಂದು ನೋಡೋಣ. ನಮ್ಮ ಸ್ನೇಹಿತರಲ್ಲಿ ಹೇಳಿದ ಹೆಚ್ಚಿನ ವಿಚಾರಗಳು ಅವರು ವೋಟಿಗಾಗಿ ಮಾತ್ರ ಹೇಳಿದ್ದು ಎಂದು ಅವರಿಗೆ ಅರ್ಥವಾಗತೊಡಗಿದೆ. ಅವರ ಕ್ರಿಸ್ಮಸ್ ಸಂದೇಶವು ಬಹುಶಃ ಹೃದಯದ ಬದಲಾವಣೆಯಾಗಿದೆ ಎಂದು ಭಾವಿಸಲಾಗಿದೆ. ಅದು ಆಗಿದ್ದರೆ ಒಳ್ಳೆಯದೇ ಆಗುತ್ತದೆ. ಆದರೆ ನನಗೆ ಸಂದೇಹವಿದೆ, ಏಕೆಂದರೆ ಇಡೀ ಉದ್ದೇಶವು ‘ಕೇಸರಿಮಯ ಪಾಕಿಸ್ತಾನ’ ಎಂದು ಹೇಳಿದ್ದಾರೆ.

ಜೂಲಿಯೊ ರಿಬೇರೊ ಹೇಳಿಕೆಗೆ ಬಿಜೆಪಿಯ ರಾಜ್ಯ ಘಟಕವು ಆಕ್ಷೇಪವನ್ನು ವ್ಯಕ್ತಪಡಿಸಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಗೋವಾ ಬಿಜೆಪಿಯ ವಕ್ತಾರ ಗಿರಿರಾಜ್ ಪೈ ವೆರ್ನೆಕರ್ ಅವರು ಜೂಲಿಯೊ ರಿಬೇರೊ ಅವರ ಹೇಳಿಕೆಗೆ ವಿರೋಧಿಸಿದ್ದಾರೆ. ಅವರ ಹೇಳಿಕೆಗಳನ್ನು ಆಧಾರ ರಹಿತ. ರಿಬೇರೊ ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗದ ಸರ್ಕಾರ ಅಧಿಕಾರದಲ್ಲಿ ಇರುವುದಕ್ಕೆ ಆಳವಾದ ದ್ವೇಷ ಮತ್ತು ಹತಾಶೆಯನ್ನು ಹೊಂದಿದ್ದಾರೆ. ಸರ್ಕಾರವನ್ನು ಕೀಳಾಗಿ ಕಾಣುವ ಪ್ರಯತ್ನದಲ್ಲಿ ದೇಶವನ್ನು ಕೀಳಾಗಿ ಕಾಣುವುದು ಮಾಜಿ ಪೋಲೀಸರಿಗೆ ತಕ್ಕುದಲ್ಲ ಎಂದು ಅವರು ಹೇಳಿದ್ದಾರೆ.

ರಿಬೇರೊ ಅವರು 1982ರಿಂದ 1986ರವರೆಗೆ ಮುಂಬೈ ಪೊಲೀಸ್ ಕಮಿಷನರ್ ಆಗಿದ್ದರು ಮತ್ತು ನಂತರ ಕೇಂದ್ರ ಮೀಸಲು ಪೊಲೀಸ್ ಪಡೆಯ ಡೈರೆಕ್ಟರ್ ಜನರಲ್ ಆಗಿದ್ದರು. ನಂತರ ಗುಜರಾತ್‌ನ  ಪೊಲೀಸ್‌ ನಿರ್ದೇಶಕರಾಗಿ ಕೆಲಸ ಮಾಡಿದ್ದರು. 1989ರಿಂದ 1993ರವರೆಗೆ ರೊಮೇನಿಯಾದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.

ಇದನ್ನು ಓದಿ: ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...