Homeಮುಖಪುಟ'ಕೇಸರಿಮಯ ಪಾಕಿಸ್ತಾನ’: ಭಾರತದಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಜೂಲಿಯೊ ರಿಬೇರೊ ಕಳವಳ

‘ಕೇಸರಿಮಯ ಪಾಕಿಸ್ತಾನ’: ಭಾರತದಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಜೂಲಿಯೊ ರಿಬೇರೊ ಕಳವಳ

- Advertisement -
- Advertisement -

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಜೂಲಿಯೊ ರಿಬೇರೊ ಅವರು ಗೋವಾದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆಯನ್ನು ನೀಡಿದ್ದರು. ಇದು ಬಿಜೆಪಿಯ ಟೀಕೆಗೆ ಕಾರಣವಾಗಿದೆ.

ಗೋವಾದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಾಜಿ ಪೊಲೀಸ್ ಕಮಿಷನರ್ ಜೂಲಿಯೊ ರಿಬೇರೊ, ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರು 2ನೇ ದರ್ಜೆಯ ಪ್ರಜೆಗಳಂತೆ ಭಯದಿಂದ ಬದುಕುತ್ತಿದ್ದಾರೆ. ಅದು ಇಲ್ಲಿ (ಭಾರತದಲ್ಲಿ) ಸಂಭವಿಸಬಹುದು. ಇದನ್ನೇ ನಾನು ಹೆದರುತ್ತೇನೆ ಎಂದು ಹೇಳಿದ್ದರು.

ಕ್ರಿಸ್‌ಮಸ್‌ ಹಿನ್ನೆಲೆ ದೆಹಲಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಸಂವಾದವನ್ನು ಉಲ್ಲೇಖಿಸಿದ ರಿಬೇರೊ, ಮೋದಿ ಅವರು ಕೇರಳದಲ್ಲಿ ಕ್ರಿಶ್ಚಿಯನ್ ಸಮುದಾಯವನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ. ಬಿಷಪ್‌ಗಳಲ್ಲಿ ಒಬ್ಬರು ಓಲೈಕೆಗೆ ಮಣಿದಿದ್ದಾರೆ. ಇತರರು ಬಹುಶಃ ಅವರನ್ನು ಹಿಂಬಾಲಿಸುತ್ತಾರೆ. ಮೋದಿ ಏನು ಮಾಡಲು ಪ್ರಯತ್ನಿಸುತ್ತಿದ್ದಾರೆಂದು ನೋಡೋಣ. ನಮ್ಮ ಸ್ನೇಹಿತರಲ್ಲಿ ಹೇಳಿದ ಹೆಚ್ಚಿನ ವಿಚಾರಗಳು ಅವರು ವೋಟಿಗಾಗಿ ಮಾತ್ರ ಹೇಳಿದ್ದು ಎಂದು ಅವರಿಗೆ ಅರ್ಥವಾಗತೊಡಗಿದೆ. ಅವರ ಕ್ರಿಸ್ಮಸ್ ಸಂದೇಶವು ಬಹುಶಃ ಹೃದಯದ ಬದಲಾವಣೆಯಾಗಿದೆ ಎಂದು ಭಾವಿಸಲಾಗಿದೆ. ಅದು ಆಗಿದ್ದರೆ ಒಳ್ಳೆಯದೇ ಆಗುತ್ತದೆ. ಆದರೆ ನನಗೆ ಸಂದೇಹವಿದೆ, ಏಕೆಂದರೆ ಇಡೀ ಉದ್ದೇಶವು ‘ಕೇಸರಿಮಯ ಪಾಕಿಸ್ತಾನ’ ಎಂದು ಹೇಳಿದ್ದಾರೆ.

ಜೂಲಿಯೊ ರಿಬೇರೊ ಹೇಳಿಕೆಗೆ ಬಿಜೆಪಿಯ ರಾಜ್ಯ ಘಟಕವು ಆಕ್ಷೇಪವನ್ನು ವ್ಯಕ್ತಪಡಿಸಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಗೋವಾ ಬಿಜೆಪಿಯ ವಕ್ತಾರ ಗಿರಿರಾಜ್ ಪೈ ವೆರ್ನೆಕರ್ ಅವರು ಜೂಲಿಯೊ ರಿಬೇರೊ ಅವರ ಹೇಳಿಕೆಗೆ ವಿರೋಧಿಸಿದ್ದಾರೆ. ಅವರ ಹೇಳಿಕೆಗಳನ್ನು ಆಧಾರ ರಹಿತ. ರಿಬೇರೊ ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗದ ಸರ್ಕಾರ ಅಧಿಕಾರದಲ್ಲಿ ಇರುವುದಕ್ಕೆ ಆಳವಾದ ದ್ವೇಷ ಮತ್ತು ಹತಾಶೆಯನ್ನು ಹೊಂದಿದ್ದಾರೆ. ಸರ್ಕಾರವನ್ನು ಕೀಳಾಗಿ ಕಾಣುವ ಪ್ರಯತ್ನದಲ್ಲಿ ದೇಶವನ್ನು ಕೀಳಾಗಿ ಕಾಣುವುದು ಮಾಜಿ ಪೋಲೀಸರಿಗೆ ತಕ್ಕುದಲ್ಲ ಎಂದು ಅವರು ಹೇಳಿದ್ದಾರೆ.

ರಿಬೇರೊ ಅವರು 1982ರಿಂದ 1986ರವರೆಗೆ ಮುಂಬೈ ಪೊಲೀಸ್ ಕಮಿಷನರ್ ಆಗಿದ್ದರು ಮತ್ತು ನಂತರ ಕೇಂದ್ರ ಮೀಸಲು ಪೊಲೀಸ್ ಪಡೆಯ ಡೈರೆಕ್ಟರ್ ಜನರಲ್ ಆಗಿದ್ದರು. ನಂತರ ಗುಜರಾತ್‌ನ  ಪೊಲೀಸ್‌ ನಿರ್ದೇಶಕರಾಗಿ ಕೆಲಸ ಮಾಡಿದ್ದರು. 1989ರಿಂದ 1993ರವರೆಗೆ ರೊಮೇನಿಯಾದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.

ಇದನ್ನು ಓದಿ: ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...