Homeಮುಖಪುಟ'ಕೇಸರಿಮಯ ಪಾಕಿಸ್ತಾನ’: ಭಾರತದಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಜೂಲಿಯೊ ರಿಬೇರೊ ಕಳವಳ

‘ಕೇಸರಿಮಯ ಪಾಕಿಸ್ತಾನ’: ಭಾರತದಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಜೂಲಿಯೊ ರಿಬೇರೊ ಕಳವಳ

- Advertisement -
- Advertisement -

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಜೂಲಿಯೊ ರಿಬೇರೊ ಅವರು ಗೋವಾದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆಯನ್ನು ನೀಡಿದ್ದರು. ಇದು ಬಿಜೆಪಿಯ ಟೀಕೆಗೆ ಕಾರಣವಾಗಿದೆ.

ಗೋವಾದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಾಜಿ ಪೊಲೀಸ್ ಕಮಿಷನರ್ ಜೂಲಿಯೊ ರಿಬೇರೊ, ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರು 2ನೇ ದರ್ಜೆಯ ಪ್ರಜೆಗಳಂತೆ ಭಯದಿಂದ ಬದುಕುತ್ತಿದ್ದಾರೆ. ಅದು ಇಲ್ಲಿ (ಭಾರತದಲ್ಲಿ) ಸಂಭವಿಸಬಹುದು. ಇದನ್ನೇ ನಾನು ಹೆದರುತ್ತೇನೆ ಎಂದು ಹೇಳಿದ್ದರು.

ಕ್ರಿಸ್‌ಮಸ್‌ ಹಿನ್ನೆಲೆ ದೆಹಲಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಸಂವಾದವನ್ನು ಉಲ್ಲೇಖಿಸಿದ ರಿಬೇರೊ, ಮೋದಿ ಅವರು ಕೇರಳದಲ್ಲಿ ಕ್ರಿಶ್ಚಿಯನ್ ಸಮುದಾಯವನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ. ಬಿಷಪ್‌ಗಳಲ್ಲಿ ಒಬ್ಬರು ಓಲೈಕೆಗೆ ಮಣಿದಿದ್ದಾರೆ. ಇತರರು ಬಹುಶಃ ಅವರನ್ನು ಹಿಂಬಾಲಿಸುತ್ತಾರೆ. ಮೋದಿ ಏನು ಮಾಡಲು ಪ್ರಯತ್ನಿಸುತ್ತಿದ್ದಾರೆಂದು ನೋಡೋಣ. ನಮ್ಮ ಸ್ನೇಹಿತರಲ್ಲಿ ಹೇಳಿದ ಹೆಚ್ಚಿನ ವಿಚಾರಗಳು ಅವರು ವೋಟಿಗಾಗಿ ಮಾತ್ರ ಹೇಳಿದ್ದು ಎಂದು ಅವರಿಗೆ ಅರ್ಥವಾಗತೊಡಗಿದೆ. ಅವರ ಕ್ರಿಸ್ಮಸ್ ಸಂದೇಶವು ಬಹುಶಃ ಹೃದಯದ ಬದಲಾವಣೆಯಾಗಿದೆ ಎಂದು ಭಾವಿಸಲಾಗಿದೆ. ಅದು ಆಗಿದ್ದರೆ ಒಳ್ಳೆಯದೇ ಆಗುತ್ತದೆ. ಆದರೆ ನನಗೆ ಸಂದೇಹವಿದೆ, ಏಕೆಂದರೆ ಇಡೀ ಉದ್ದೇಶವು ‘ಕೇಸರಿಮಯ ಪಾಕಿಸ್ತಾನ’ ಎಂದು ಹೇಳಿದ್ದಾರೆ.

ಜೂಲಿಯೊ ರಿಬೇರೊ ಹೇಳಿಕೆಗೆ ಬಿಜೆಪಿಯ ರಾಜ್ಯ ಘಟಕವು ಆಕ್ಷೇಪವನ್ನು ವ್ಯಕ್ತಪಡಿಸಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಗೋವಾ ಬಿಜೆಪಿಯ ವಕ್ತಾರ ಗಿರಿರಾಜ್ ಪೈ ವೆರ್ನೆಕರ್ ಅವರು ಜೂಲಿಯೊ ರಿಬೇರೊ ಅವರ ಹೇಳಿಕೆಗೆ ವಿರೋಧಿಸಿದ್ದಾರೆ. ಅವರ ಹೇಳಿಕೆಗಳನ್ನು ಆಧಾರ ರಹಿತ. ರಿಬೇರೊ ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗದ ಸರ್ಕಾರ ಅಧಿಕಾರದಲ್ಲಿ ಇರುವುದಕ್ಕೆ ಆಳವಾದ ದ್ವೇಷ ಮತ್ತು ಹತಾಶೆಯನ್ನು ಹೊಂದಿದ್ದಾರೆ. ಸರ್ಕಾರವನ್ನು ಕೀಳಾಗಿ ಕಾಣುವ ಪ್ರಯತ್ನದಲ್ಲಿ ದೇಶವನ್ನು ಕೀಳಾಗಿ ಕಾಣುವುದು ಮಾಜಿ ಪೋಲೀಸರಿಗೆ ತಕ್ಕುದಲ್ಲ ಎಂದು ಅವರು ಹೇಳಿದ್ದಾರೆ.

ರಿಬೇರೊ ಅವರು 1982ರಿಂದ 1986ರವರೆಗೆ ಮುಂಬೈ ಪೊಲೀಸ್ ಕಮಿಷನರ್ ಆಗಿದ್ದರು ಮತ್ತು ನಂತರ ಕೇಂದ್ರ ಮೀಸಲು ಪೊಲೀಸ್ ಪಡೆಯ ಡೈರೆಕ್ಟರ್ ಜನರಲ್ ಆಗಿದ್ದರು. ನಂತರ ಗುಜರಾತ್‌ನ  ಪೊಲೀಸ್‌ ನಿರ್ದೇಶಕರಾಗಿ ಕೆಲಸ ಮಾಡಿದ್ದರು. 1989ರಿಂದ 1993ರವರೆಗೆ ರೊಮೇನಿಯಾದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.

ಇದನ್ನು ಓದಿ: ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...