Homeಅಂತರಾಷ್ಟ್ರೀಯಆಕ್ಸ್‌ಫರ್ಡ್ ಕುಲಪತಿ ಹುದ್ದೆಗೆ ಜೈಲಿನಿಂದಲೇ ಅರ್ಜಿ ಸಲ್ಲಿಸಿದ ಇಮ್ರಾನ್ ಖಾನ್

ಆಕ್ಸ್‌ಫರ್ಡ್ ಕುಲಪತಿ ಹುದ್ದೆಗೆ ಜೈಲಿನಿಂದಲೇ ಅರ್ಜಿ ಸಲ್ಲಿಸಿದ ಇಮ್ರಾನ್ ಖಾನ್

- Advertisement -
- Advertisement -

ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಬ್ರಿಟನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಪಕ್ಷ ಹೇಳಿದೆ.

ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಲಂಡನ್ ಮೂಲದ ವಕ್ತಾರ ಸಯದ್ ಝುಲ್ಫಿಕರ್ ಬುಖಾರಿ, ಅರ್ಜಿ ಸಲ್ಲಿಸಲು ಖಾನ್ ತಮ್ಮ ತಂಡಕ್ಕೆ ಸೂಚಿಸಿರುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

“ಇದು ಔಪಚಾರಿಕ ಹುದ್ದೆಯಾಗಿದೆ. ಆದರೆ ಅತ್ಯಂತ ಪ್ರತಿಷ್ಠೆ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಇಮ್ರಾನ್ ಖಾನ್ ಆಕ್ಸ್‌ಫರ್ಡ್‌ನಿಂದ ಕೇಳಿ ಬರುತ್ತಿರುವ ಜನಪ್ರಿಯ ಹೆಸರುಗಳಲ್ಲಿ ಒಂದಾಗಿದೆ. ಅವರನ್ನು ಕುಲಪತಿಯಾಗಿ ನೋಡುವುದು ದೊಡ್ಡ ವಿಷಯ ಎಂದು ಝುಲ್ಫಿಕರ್ ಬುಖಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ವೆಬ್‌ಸೈಟ್ ಪ್ರಕಾರ, ಕುಲಪತಿಗಳ 10 ವರ್ಷಗಳ ಅವಧಿಯ ಅಭ್ಯರ್ಥಿಗಳ ಪಟ್ಟಿಯನ್ನು ಅಕ್ಟೋಬರ್‌ನಲ್ಲಿ ಸಾರ್ವಜನಿಕಗೊಳಿಸಲಾಗುವುದು, ಮತದಾನವನ್ನು ಅದೇ ತಿಂಗಳಾಂತ್ಯಕ್ಕೆ ನಿಗದಿಪಡಿಸಲಾಗಿದೆ.

ಇತರ ಪ್ರಮುಖ ಅರ್ಜಿದಾರರಲ್ಲಿ ಬ್ರಿಟನ್‌ನ ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಲಿಯಂ ಹೇಗ್ ಮತ್ತು ಮಾಜಿ ಇಯು ಟ್ರೇಡ್ ಕಮಿಷನರ್ ಪೀಟರ್ ಮ್ಯಾಂಡೆಲ್ಸನ್ ಸೇರಿದ್ದಾರೆ ಎಂದು ಬ್ರಿಟಿಷ್ ಮಾಧ್ಯಮಗಳು ತಿಳಿಸಿವೆ.

ಫೆಬ್ರವರಿಯಲ್ಲಿ, ಹಾಂಗ್ ಕಾಂಗ್‌ನ ಕೊನೆಯ ಬ್ರಿಟಿಷ್ ಗವರ್ನರ್ ಕ್ರಿಸ್ ಪ್ಯಾಟನ್ ಆಕ್ಸ್‌ಫರ್ಡ್‌ನ ಕುಲಪತಿ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರವನ್ನು ಪ್ರಕಟಿಸಿದ್ದರು.

ಇಮ್ರಾನ್ ಖಾನ್ 1975ರಲ್ಲಿ ಆಕ್ಸ್‌ಫರ್ಡ್‌ನಿಂದ ತತ್ವಶಾಸ್ತ್ರ, ರಾಜಕೀಯ ಮತ್ತು ಅರ್ಥಶಾಸ್ತ್ರದಲ್ಲಿ ಪದವಿ ಪಡೆದರು. ಅವರು ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ಬ್ರಿಟಿಷ್ ಗಾಸಿಪ್ ನಿಯತಕಾಲಿಕೆಗಳಲ್ಲಿ ಆಗಾಗ್ಗೆ ಸುದ್ದಿಯಾಗುತ್ತಿದ್ದರು.

ಖಾನ್ ಅವರು 2018 ರಿಂದ 2022 ರವರೆಗೆ ಪಾಕಿಸ್ತಾನದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.  ಭ್ರಷ್ಟಾಚಾರದಿಂದ ಹಿಡಿದು ಹಿಂಸಾಚಾರವನ್ನು ಪ್ರಚೋದಿಸುವವರೆಗಿನ ಆರೋಪದಲ್ಲಿ ಕಳೆದ ಒಂದು ವರ್ಷದಿಂದ ಖಾನ್ ಜೈಲುವಾಸ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ : ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯತೆ ತಳ್ಳಿ ಹಾಕಿದ ಸ್ಟಾಲಿನ್; ಆದರೆ ರಾಜನಾಥ್ ಸಿಂಗ್ ಗುಣಗಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...