Homeಮುಖಪುಟವಿಚಾರಣೆ ಇಲ್ಲದೆ 1,000 ದಿನ ಜೈಲಿನಲ್ಲಿ ಪಿಎಫ್‌ಐ ಮಾಜಿ ಅಧ್ಯಕ್ಷ ಅಬೂಬಕರ್: ಆರೋಗ್ಯದ ಬಗ್ಗೆ ಕುಟುಂಬದ...

ವಿಚಾರಣೆ ಇಲ್ಲದೆ 1,000 ದಿನ ಜೈಲಿನಲ್ಲಿ ಪಿಎಫ್‌ಐ ಮಾಜಿ ಅಧ್ಯಕ್ಷ ಅಬೂಬಕರ್: ಆರೋಗ್ಯದ ಬಗ್ಗೆ ಕುಟುಂಬದ ಕಳವಳ

- Advertisement -
- Advertisement -

ಹೊಸದಿಲ್ಲಿ: ಭಾರತ ಸರ್ಕಾರದಿಂದ ಈಗ ನಿಷೇಧಿಸಲ್ಪಟ್ಟಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸ್ಥಾಪಕ ಅಧ್ಯಕ್ಷ ಎರಾಪ್ಪಂಗಲ್ ಅಬೂಬಕರ್ ಅವರು ಯಾವುದೇ ವಿಚಾರಣೆ ಇಲ್ಲದೆ 1000 ದಿನಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಅವರ ಕುಟುಂಬವು ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದೆ.

ಅಬೂಬಕರ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2022ರ ಸೆ.22ರಂದು ಅವರ ಮನೆಯಿಂದ ಬಂಧಿಸಿತ್ತು. ಆ ಸಮಯದಲ್ಲಿ ಅವರು ಅನ್ನನಾಳದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಾ ವಿಶ್ರಾಂತಿಯಲ್ಲಿದ್ದರು. ಅಂದೇ, 10 ರಾಜ್ಯಗಳಲ್ಲಿ ಸುಮಾರು 100 ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಲಾಗಿತ್ತು ಅಥವಾ ವಶಕ್ಕೆ ತೆಗೆದುಕೊಳ್ಳಲಾಗಿತ್ತು.

ನಂತರ, ಅದೇ ವರ್ಷ ಸೆಪ್ಟೆಂಬರ್ 28ರಂದು ಸರಕಾರವು ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ರೆಹಬ್ ಇಂಡಿಯಾ ಫೌಂಡೇಶನ್, ಅಖಿಲ ಭಾರತ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ಸ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ಕೇರಳದ ರೆಹಬ್ ಫೌಂಡೇಶನ್‌ಗಳನ್ನು ನಿಷೇಧಿಸಿತು.

73 ವರ್ಷದ ಈ ಮುಸ್ಲಿಂ ನಾಯಕ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಉಳಿದಿದ್ದಾರೆ. ಅವರ ವಿರುದ್ಧದ ತನಿಖೆ ಇನ್ನೂ ಬಾಕಿಯಿದೆ. ದೆಹಲಿ ಹೈಕೋರ್ಟ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯಗಳು ಈ ಹಿಂದೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿವೆ.

ಅವರಿಗೆ ಸೂಕ್ತವಾದ ಆಹಾರ ಲಭ್ಯವಿಲ್ಲದ ಕಾರಣ ದಿನದಿಂದ ದಿನಕ್ಕೆ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಅವರಿಗೆ ನೆನಪಿನ ಶಕ್ತಿಯೂ ಕಡಿಮೆಯಾಗುತ್ತಿದೆ ಎಂದು ಅಬೂಬಕರ್ ಅವರ ಪತ್ನಿ ಅಮಿನಾ ಅವರು ಮಕ್ತೂಬ್‌ಗೆ ನೀಡಿದ ಹೇಳಿಕೆಯಲ್ಲಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಅಬೂಬಕರ್ ಅವರ ಆರೋಗ್ಯ ಸ್ಥಿತಿಯನ್ನು ವಿವರವಾಗಿ ಪರಿಶೀಲಿಸಲು ಏಮ್ಸ್‌ನ 10 ವೈದ್ಯರನ್ನೊಳಗೊಂಡ ವೈದ್ಯಕೀಯ ಮಂಡಳಿಯನ್ನು ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಚಿಸಲಾಗಿತ್ತು. ಆದರೆ, ಕೇಂದ್ರ ಸಂಸ್ಥೆಗಳ ಹಸ್ತಕ್ಷೇಪದಿಂದಾಗಿ ಅವರ ನಿಜವಾದ ಆರೋಗ್ಯ ಸ್ಥಿತಿಯನ್ನು ಮರೆಮಾಚಿ ವರದಿಯನ್ನು ಸಲ್ಲಿಸಲಾಗಿದೆ ಎಂದು ಕುಟುಂಬವು ಆರೋಪಿಸಿದೆ.

ಕೇಂದ್ರ ಸಂಸ್ಥೆಗಳ ಈ ಪ್ರಭಾವದಿಂದಲೇ ಸುಪ್ರೀಂ ಕೋರ್ಟ್ ನಮ್ಮ ಪತಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದೇ ಕಾರಣಕ್ಕೆ, ಈ ವೈದ್ಯಕೀಯ ಮಂಡಳಿಯ ವರದಿಯನ್ನು ನಾವು ಒಪ್ಪುವುದಿಲ್ಲ ಎಂದು ಅಬೂಬಕರ್ ಅವರ ಪತ್ನಿ ಜೈಲು ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಅಲ್ಲದೇ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಕೋರಿ ಕೆಳ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ.

2020ರಲ್ಲಿ ಅಬೂಬಕರ್ ಅವರಿಗೆ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ನಡೆದ ನಂತರ, ಅವರು ತಮ್ಮ ಕುಟುಂಬ ಸದಸ್ಯರ ತೀವ್ರ ಆರೈಕೆಯಲ್ಲಿ ಮನೆಯಲ್ಲೇ ಉಳಿದಿದ್ದರು.

ಪ್ರಸ್ತುತ, ಅವರು ಅಧಿಕ ರಕ್ತದೊತ್ತಡ, ಇಡಿಯೋಪಥಿಕ್ ಪಾರ್ಕಿನ್ಸನ್ ರೋಗ, ಕರೋನರಿ ಆರ್ಟರಿ ಡಿಸೀಸ್, ಅನ್ನನಾಳದ ಕ್ಯಾನ್ಸರ್‌ನ ಶಸ್ತ್ರಚಿಕಿತ್ಸೆ ನಂತರದ ಸ್ಥಿತಿ ಮತ್ತು ಹಾನಿಕರವಲ್ಲದ ಪ್ರಾಸ್ಟಾಟಿಕ್ ಹೈಪರ್ಪ್ಲಾಸಿಯಾದಂತಹ ವಿವಿಧ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರ ಪತ್ನಿ ಮಾಹಿತಿ ಹೇಳಿದ್ದಾರೆ.

ಜೈಲಿನಲ್ಲಿಯೇ ಮರಣ ಹೊಂದಿದ ಫಾದರ್ ಸ್ಟಾನ್ ಸ್ವಾಮಿಯವರ ದುರಂತ ಪರಿಸ್ಥಿತಿ ನನ್ನ ಪತಿಗೂ ಬರಬಹುದು ಎಂದು ನಾವೆಲ್ಲರೂ ಭಯಪಡುತ್ತಿದ್ದೇವೆ. ಅವರ ಹದಗೆಟ್ಟ ಆರೋಗ್ಯ ಸ್ಥಿತಿ ಮತ್ತು ಮಾನವೀಯ ನೆಲೆಯ ಮೇಲೆ ಅವರಿಗೆ ಜಾಮೀನು ನೀಡುವುದು ಅತ್ಯಗತ್ಯವಾಗಿದೆ ಎಂದು ಅಮಿನಾ ಒತ್ತಾಯಿಸಿದ್ದಾರೆ.

ಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...