Homeಮುಖಪುಟವಿಚಾರಣೆ ಇಲ್ಲದೆ 1,000 ದಿನ ಜೈಲಿನಲ್ಲಿ ಪಿಎಫ್‌ಐ ಮಾಜಿ ಅಧ್ಯಕ್ಷ ಅಬೂಬಕರ್: ಆರೋಗ್ಯದ ಬಗ್ಗೆ ಕುಟುಂಬದ...

ವಿಚಾರಣೆ ಇಲ್ಲದೆ 1,000 ದಿನ ಜೈಲಿನಲ್ಲಿ ಪಿಎಫ್‌ಐ ಮಾಜಿ ಅಧ್ಯಕ್ಷ ಅಬೂಬಕರ್: ಆರೋಗ್ಯದ ಬಗ್ಗೆ ಕುಟುಂಬದ ಕಳವಳ

- Advertisement -
- Advertisement -

ಹೊಸದಿಲ್ಲಿ: ಭಾರತ ಸರ್ಕಾರದಿಂದ ಈಗ ನಿಷೇಧಿಸಲ್ಪಟ್ಟಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸ್ಥಾಪಕ ಅಧ್ಯಕ್ಷ ಎರಾಪ್ಪಂಗಲ್ ಅಬೂಬಕರ್ ಅವರು ಯಾವುದೇ ವಿಚಾರಣೆ ಇಲ್ಲದೆ 1000 ದಿನಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಅವರ ಕುಟುಂಬವು ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದೆ.

ಅಬೂಬಕರ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2022ರ ಸೆ.22ರಂದು ಅವರ ಮನೆಯಿಂದ ಬಂಧಿಸಿತ್ತು. ಆ ಸಮಯದಲ್ಲಿ ಅವರು ಅನ್ನನಾಳದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಾ ವಿಶ್ರಾಂತಿಯಲ್ಲಿದ್ದರು. ಅಂದೇ, 10 ರಾಜ್ಯಗಳಲ್ಲಿ ಸುಮಾರು 100 ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಲಾಗಿತ್ತು ಅಥವಾ ವಶಕ್ಕೆ ತೆಗೆದುಕೊಳ್ಳಲಾಗಿತ್ತು.

ನಂತರ, ಅದೇ ವರ್ಷ ಸೆಪ್ಟೆಂಬರ್ 28ರಂದು ಸರಕಾರವು ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ರೆಹಬ್ ಇಂಡಿಯಾ ಫೌಂಡೇಶನ್, ಅಖಿಲ ಭಾರತ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ಸ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ಕೇರಳದ ರೆಹಬ್ ಫೌಂಡೇಶನ್‌ಗಳನ್ನು ನಿಷೇಧಿಸಿತು.

73 ವರ್ಷದ ಈ ಮುಸ್ಲಿಂ ನಾಯಕ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಉಳಿದಿದ್ದಾರೆ. ಅವರ ವಿರುದ್ಧದ ತನಿಖೆ ಇನ್ನೂ ಬಾಕಿಯಿದೆ. ದೆಹಲಿ ಹೈಕೋರ್ಟ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯಗಳು ಈ ಹಿಂದೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿವೆ.

ಅವರಿಗೆ ಸೂಕ್ತವಾದ ಆಹಾರ ಲಭ್ಯವಿಲ್ಲದ ಕಾರಣ ದಿನದಿಂದ ದಿನಕ್ಕೆ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಅವರಿಗೆ ನೆನಪಿನ ಶಕ್ತಿಯೂ ಕಡಿಮೆಯಾಗುತ್ತಿದೆ ಎಂದು ಅಬೂಬಕರ್ ಅವರ ಪತ್ನಿ ಅಮಿನಾ ಅವರು ಮಕ್ತೂಬ್‌ಗೆ ನೀಡಿದ ಹೇಳಿಕೆಯಲ್ಲಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಅಬೂಬಕರ್ ಅವರ ಆರೋಗ್ಯ ಸ್ಥಿತಿಯನ್ನು ವಿವರವಾಗಿ ಪರಿಶೀಲಿಸಲು ಏಮ್ಸ್‌ನ 10 ವೈದ್ಯರನ್ನೊಳಗೊಂಡ ವೈದ್ಯಕೀಯ ಮಂಡಳಿಯನ್ನು ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಚಿಸಲಾಗಿತ್ತು. ಆದರೆ, ಕೇಂದ್ರ ಸಂಸ್ಥೆಗಳ ಹಸ್ತಕ್ಷೇಪದಿಂದಾಗಿ ಅವರ ನಿಜವಾದ ಆರೋಗ್ಯ ಸ್ಥಿತಿಯನ್ನು ಮರೆಮಾಚಿ ವರದಿಯನ್ನು ಸಲ್ಲಿಸಲಾಗಿದೆ ಎಂದು ಕುಟುಂಬವು ಆರೋಪಿಸಿದೆ.

ಕೇಂದ್ರ ಸಂಸ್ಥೆಗಳ ಈ ಪ್ರಭಾವದಿಂದಲೇ ಸುಪ್ರೀಂ ಕೋರ್ಟ್ ನಮ್ಮ ಪತಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದೇ ಕಾರಣಕ್ಕೆ, ಈ ವೈದ್ಯಕೀಯ ಮಂಡಳಿಯ ವರದಿಯನ್ನು ನಾವು ಒಪ್ಪುವುದಿಲ್ಲ ಎಂದು ಅಬೂಬಕರ್ ಅವರ ಪತ್ನಿ ಜೈಲು ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಅಲ್ಲದೇ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಕೋರಿ ಕೆಳ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ.

2020ರಲ್ಲಿ ಅಬೂಬಕರ್ ಅವರಿಗೆ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ನಡೆದ ನಂತರ, ಅವರು ತಮ್ಮ ಕುಟುಂಬ ಸದಸ್ಯರ ತೀವ್ರ ಆರೈಕೆಯಲ್ಲಿ ಮನೆಯಲ್ಲೇ ಉಳಿದಿದ್ದರು.

ಪ್ರಸ್ತುತ, ಅವರು ಅಧಿಕ ರಕ್ತದೊತ್ತಡ, ಇಡಿಯೋಪಥಿಕ್ ಪಾರ್ಕಿನ್ಸನ್ ರೋಗ, ಕರೋನರಿ ಆರ್ಟರಿ ಡಿಸೀಸ್, ಅನ್ನನಾಳದ ಕ್ಯಾನ್ಸರ್‌ನ ಶಸ್ತ್ರಚಿಕಿತ್ಸೆ ನಂತರದ ಸ್ಥಿತಿ ಮತ್ತು ಹಾನಿಕರವಲ್ಲದ ಪ್ರಾಸ್ಟಾಟಿಕ್ ಹೈಪರ್ಪ್ಲಾಸಿಯಾದಂತಹ ವಿವಿಧ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರ ಪತ್ನಿ ಮಾಹಿತಿ ಹೇಳಿದ್ದಾರೆ.

ಜೈಲಿನಲ್ಲಿಯೇ ಮರಣ ಹೊಂದಿದ ಫಾದರ್ ಸ್ಟಾನ್ ಸ್ವಾಮಿಯವರ ದುರಂತ ಪರಿಸ್ಥಿತಿ ನನ್ನ ಪತಿಗೂ ಬರಬಹುದು ಎಂದು ನಾವೆಲ್ಲರೂ ಭಯಪಡುತ್ತಿದ್ದೇವೆ. ಅವರ ಹದಗೆಟ್ಟ ಆರೋಗ್ಯ ಸ್ಥಿತಿ ಮತ್ತು ಮಾನವೀಯ ನೆಲೆಯ ಮೇಲೆ ಅವರಿಗೆ ಜಾಮೀನು ನೀಡುವುದು ಅತ್ಯಗತ್ಯವಾಗಿದೆ ಎಂದು ಅಮಿನಾ ಒತ್ತಾಯಿಸಿದ್ದಾರೆ.

ಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...