Homeಕರ್ನಾಟಕಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

- Advertisement -
- Advertisement -

ದೇಶದ ಪ್ರಧಾನಿಯಾಗಿ ನಾಡಿನ ಗಮನ ಸೆಳೆದವರು ಎಚ್.ಡಿ.ದೇವೇಗೌಡರು. ಈ ಹಿಂದಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಮಕ್ಕಳಿಗೆ ಈ ವಿಶೇಷತೆಯನ್ನು ತಿಳಿಸುವ ನಿಟ್ಟಿನಲ್ಲಿ ಪಠ್ಯ ರೂಪಿಸಿತ್ತು. ಆದರೆ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಯನ್ನು ತೆಗೆದುಹಾಕುವ ಭರದಲ್ಲಿ ದೇವೇಗೌಡರ ಮಾಹಿತಿಯನ್ನೂ ತೆಗೆದುಹಾಕಿದೆ.

ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ‘ನಮ್ಮ ಕರ್ನಾಟಕ’ ಪಾಠವನ್ನು ಸೇರಿಸಲಾಗಿತ್ತು. ರಾಜ್ಯದ ಜಿಲ್ಲೆಗಳ ಪರಿಚಯದ ಜೊತೆಗೆ, ಕರ್ನಾಟಕದ ಅಸ್ಮಿತೆಗಳನ್ನು ಪುಟ್ಟ ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಈ ಪಠ್ಯದಲ್ಲಿ ಕತ್ತರಿಯಾಡಿಸಿರುವ ಚಕ್ರತೀರ್ಥ ಸಮಿತಿಗೆ ಹಲವು ಸಂಗತಿಗಳು ಅಪ್ರಸ್ತುತವೆನಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಠವನ್ನು ‘ನಮ್ಮ ಹೆಮ್ಮೆಯ ರಾಜ್ಯ- ಕರ್ನಾಟಕ’ ಎಂದು ಪರಿಷ್ಕರಣೆ ಮಾಡಿರುವ ನೂತನ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಗೆ ಕತ್ತರಿಹಾಕಿದೆ.

“ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಕಲಬುರಗಿ ವಿಭಾಗ, ಬೆಳಗಾವಿ ವಿಭಾಗ” ಎಂದು ವಿಭಾಗಿಸಿ, ಒಂದೊಂದು ವಿಭಾಗದ ಅಡಿಯಲ್ಲಿರುವ ಜಿಲ್ಲೆಗಳ ಪರಿಚಯವನ್ನು ಮಾಡಿಕೊಡಲಾಗಿತ್ತು. ಚಕ್ರತೀರ್ಥ ಸಮಿತಿಯು ಈ ವಿಭಾಗಗಳನ್ನು ಉಳಿಸಿದ್ದರೂ ಜಿಲ್ಲೆಗಳ ಮಾಹಿತಿಯನ್ನು ಕೈಬಿಟ್ಟಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಪರಿಚಯ ಮಾಡಿಕೊಡಲಾಗಿತ್ತು. ಇನ್ನುಳಿದ ಜಿಲ್ಲೆಗಳ ಪರಿಚಯವನ್ನು ಸಮಾಜವಿಜ್ಞಾನ ಭಾಗ-2ರ ಪಠ್ಯದಲ್ಲಿ ಮುಂದುವರಿಸಲಾಗಿತ್ತು.

(ಭಾಗ-2ರಲ್ಲಿ ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ- ಜಿಲ್ಲೆಗಳ ಪರಿಚಯ ಮಾಡಿಕೊಡಲಾಗಿದೆ.)

ಮೈಸೂರು ವಿಭಾಗದಲ್ಲಿತ್ತು ಹಾಸನ ಜಿಲ್ಲೆಯ ಪರಿಚಯ ದೇವೇಗೌಡ ಫೋಟೋ

ಹಾಸನ ಜಿಲ್ಲೆಯ ಪರಿಚಯ ಹೀಗೆ ಆರಂಭವಾಗುತ್ತದೆ: “ಹಾಸನಾಂಬ ದೇವಾಲಯದಿಂದ ಇದಕ್ಕೆ ಹಾಸನ ಎಂಬ ಹೆಸರು ಬಂದಿದೆ. ಈ ದೇವಾಲಯದ ಗರ್ಭಗುಡಿ ಬಾಗಿಲನ್ನು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯಲಾಗುತ್ತದೆ. ಈ ಜಿಲ್ಲೆಯಲ್ಲಿ ದೇವಾಲಯಗಳು ಹೊಯ್ಸಳ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿವೆ. ಗೊರುರು, ಮೊಸಳೆ, ಮುಂತಾದವು ಪ್ರಸಿದ್ಧ ಗ್ರಾಮಗಳು…”

ಕೊನೆಯಲ್ಲಿ, “ಕರ್ನಾಟದಿಂದ ಪ್ರಧಾನಿಯಾಗಿದ್ದ ಶ್ರೀ ಎಚ್.ಡಿ.ದೇವೇಗೌಡರು ಈ ಜಿಲ್ಲೆಯವರು” ಎಂದು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ. ಜೊತೆಗೆ ದೇವೇಗೌಡರ ಭಾವಚಿತ್ರವನ್ನು ನೀಡಲಾಗಿದೆ.

‘ಶಿವಮೊಗ್ಗ’ ಜಿಲ್ಲೆಯ ಪರಿಚಯದಲ್ಲಿತ್ತು ಕವಿಮನೆಯ ಚಿತ್ರ

ಶಿವಮೊಗ್ಗ ಜಿಲ್ಲೆಯ ಪರಿಚಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ರಾಷ್ಟ್ರಕವಿ ಕುವೆಂಪು ಅವರ ಕುರಿತ್ತಷ್ಟೇ ಅಲ್ಲದೇ ಕುಪ್ಪಳಿಯಲ್ಲಿರುವ ‘ಕವಿ ಮನೆ’ಯ ಭಾವಚಿತ್ರವನ್ನು ನೀಡಲಾಗಿತ್ತು.

ಇದನ್ನೂ ಓದಿರಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

“ಜ್ಞಾನಪೀಠ ಪ್ರಶಸ್ತಿ ಪಡೆದ ಇಬ್ಬರು  ಸಾಹಿತಿಗಳಾದ ರಾಷ್ಟ್ರಕವಿ ಕುವೆಂಪು ಮತ್ತು ಡಾ.ಯು.ಆರ್‌.ಅನಂತಮೂರ್ತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿಗೆ ಸೇರಿದವರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಾಡುಗಾರ ಶಿವಮೊಗ್ಗ ಸುಬ್ಬಣ್ಣನವರು ಈ ಜಿಲ್ಲೆಯವರು” ಎಂಬ ಮಾಹಿತಿ ಇತ್ತು.

ಸರ್‌. ಎಂ.ವಿ. ಫೋಟೋ ಎರಡು ಕಡೆ ಬಳಕೆ

ಒಂದೇ ಪಠ್ಯ ಪುಸ್ತಕದಲ್ಲಿ ಎರಡು ಕಡೆ ಸರ್‌.ಎಂ.ವಿಶ್ವೇಶ್ವರಯ್ಯನವರ ಫೋಟೋವನ್ನು ಚಕ್ರತೀರ್ಥ ಸಮಿತಿ ಬಳಸಿದೆ. ಬರಗೂರರ ಸಮಿತಿ ರಚಿಸಿದ ‘ನಮ್ಮ ಕರ್ನಾಟಕ’ ಪಾಠದಲ್ಲಿ ಉದ್ದಿಮೆಗಳ ಕುರಿತು ತಿಳಿಸುವಾಗ ಸರ್‌.ಎಂ.ವಿ. ಅವರ ಫೋಟೋ ಬಳಸಲಾಗಿತ್ತು. ಮೈಸೂರು ವಿಭಾಗದ ಪಠ್ಯದಲ್ಲಿ ಟಿಪ್ಪು ಸುಲ್ತಾನ ಫೋಟೋವನ್ನು ನೀಡಲಾಗಿತ್ತು. ಆದರೆ ‘ಮೈಸೂರು ವಿಭಾಗ’ದ ಪಾಠವನ್ನು ಉಳಿಸಿಕೊಂಡಿರುವ ಸಮಿತಿಯು ಮೈಸೂರಿನ ಚಾರಿತ್ರಿಕ ಹಿನ್ನಲೆಯನ್ನು ಪರಿಚಯಿಸುವಾಗ ಟಿಪ್ಪು ಫೋಟೋ ಕೈಬಿಟ್ಟು ಮತ್ತೆ ಸರ್‌.ಎಂ.ವಿ.ಫೋಟೋ ಬಳಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇನ್ನೆಂತಾ ವಿಷ ತುಂಬಿಕೊಂಡಿರಬೇಕು ಈ ಬ್ರಾಹ್ಮಣ್ಯ ವನ್ನ ವೈಭವೀಕರಿಸುವ ಪಠ್ಯ ಪರಿಸ್ಕರಣೆ ಅಧ್ಯಕ್ಷ,ಸದಸ್ಯರು ಮತ್ತು ಸಚಿವ,ನಾಚಿಕೆಯಾಗಬೇಕು ಇವರಿಗೆ.

  2. ಎಷ್ಟೂಂದು ಅಸಹ್ಯದ ಫ್ಯಾಶಿಸ್ಟ್ ಮನಸ್ಥಿತಿಯವರು ಈ ಸವರ್ಣ ಮನಸ್ಥಿತಿಯವರು

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...