Homeಕರ್ನಾಟಕಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

- Advertisement -
- Advertisement -

ದೇಶದ ಪ್ರಧಾನಿಯಾಗಿ ನಾಡಿನ ಗಮನ ಸೆಳೆದವರು ಎಚ್.ಡಿ.ದೇವೇಗೌಡರು. ಈ ಹಿಂದಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಮಕ್ಕಳಿಗೆ ಈ ವಿಶೇಷತೆಯನ್ನು ತಿಳಿಸುವ ನಿಟ್ಟಿನಲ್ಲಿ ಪಠ್ಯ ರೂಪಿಸಿತ್ತು. ಆದರೆ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಯನ್ನು ತೆಗೆದುಹಾಕುವ ಭರದಲ್ಲಿ ದೇವೇಗೌಡರ ಮಾಹಿತಿಯನ್ನೂ ತೆಗೆದುಹಾಕಿದೆ.

ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ‘ನಮ್ಮ ಕರ್ನಾಟಕ’ ಪಾಠವನ್ನು ಸೇರಿಸಲಾಗಿತ್ತು. ರಾಜ್ಯದ ಜಿಲ್ಲೆಗಳ ಪರಿಚಯದ ಜೊತೆಗೆ, ಕರ್ನಾಟಕದ ಅಸ್ಮಿತೆಗಳನ್ನು ಪುಟ್ಟ ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಈ ಪಠ್ಯದಲ್ಲಿ ಕತ್ತರಿಯಾಡಿಸಿರುವ ಚಕ್ರತೀರ್ಥ ಸಮಿತಿಗೆ ಹಲವು ಸಂಗತಿಗಳು ಅಪ್ರಸ್ತುತವೆನಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಠವನ್ನು ‘ನಮ್ಮ ಹೆಮ್ಮೆಯ ರಾಜ್ಯ- ಕರ್ನಾಟಕ’ ಎಂದು ಪರಿಷ್ಕರಣೆ ಮಾಡಿರುವ ನೂತನ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಗೆ ಕತ್ತರಿಹಾಕಿದೆ.

“ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಕಲಬುರಗಿ ವಿಭಾಗ, ಬೆಳಗಾವಿ ವಿಭಾಗ” ಎಂದು ವಿಭಾಗಿಸಿ, ಒಂದೊಂದು ವಿಭಾಗದ ಅಡಿಯಲ್ಲಿರುವ ಜಿಲ್ಲೆಗಳ ಪರಿಚಯವನ್ನು ಮಾಡಿಕೊಡಲಾಗಿತ್ತು. ಚಕ್ರತೀರ್ಥ ಸಮಿತಿಯು ಈ ವಿಭಾಗಗಳನ್ನು ಉಳಿಸಿದ್ದರೂ ಜಿಲ್ಲೆಗಳ ಮಾಹಿತಿಯನ್ನು ಕೈಬಿಟ್ಟಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಪರಿಚಯ ಮಾಡಿಕೊಡಲಾಗಿತ್ತು. ಇನ್ನುಳಿದ ಜಿಲ್ಲೆಗಳ ಪರಿಚಯವನ್ನು ಸಮಾಜವಿಜ್ಞಾನ ಭಾಗ-2ರ ಪಠ್ಯದಲ್ಲಿ ಮುಂದುವರಿಸಲಾಗಿತ್ತು.

(ಭಾಗ-2ರಲ್ಲಿ ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ- ಜಿಲ್ಲೆಗಳ ಪರಿಚಯ ಮಾಡಿಕೊಡಲಾಗಿದೆ.)

ಮೈಸೂರು ವಿಭಾಗದಲ್ಲಿತ್ತು ಹಾಸನ ಜಿಲ್ಲೆಯ ಪರಿಚಯ ದೇವೇಗೌಡ ಫೋಟೋ

ಹಾಸನ ಜಿಲ್ಲೆಯ ಪರಿಚಯ ಹೀಗೆ ಆರಂಭವಾಗುತ್ತದೆ: “ಹಾಸನಾಂಬ ದೇವಾಲಯದಿಂದ ಇದಕ್ಕೆ ಹಾಸನ ಎಂಬ ಹೆಸರು ಬಂದಿದೆ. ಈ ದೇವಾಲಯದ ಗರ್ಭಗುಡಿ ಬಾಗಿಲನ್ನು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯಲಾಗುತ್ತದೆ. ಈ ಜಿಲ್ಲೆಯಲ್ಲಿ ದೇವಾಲಯಗಳು ಹೊಯ್ಸಳ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿವೆ. ಗೊರುರು, ಮೊಸಳೆ, ಮುಂತಾದವು ಪ್ರಸಿದ್ಧ ಗ್ರಾಮಗಳು…”

ಕೊನೆಯಲ್ಲಿ, “ಕರ್ನಾಟದಿಂದ ಪ್ರಧಾನಿಯಾಗಿದ್ದ ಶ್ರೀ ಎಚ್.ಡಿ.ದೇವೇಗೌಡರು ಈ ಜಿಲ್ಲೆಯವರು” ಎಂದು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ. ಜೊತೆಗೆ ದೇವೇಗೌಡರ ಭಾವಚಿತ್ರವನ್ನು ನೀಡಲಾಗಿದೆ.

‘ಶಿವಮೊಗ್ಗ’ ಜಿಲ್ಲೆಯ ಪರಿಚಯದಲ್ಲಿತ್ತು ಕವಿಮನೆಯ ಚಿತ್ರ

ಶಿವಮೊಗ್ಗ ಜಿಲ್ಲೆಯ ಪರಿಚಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ರಾಷ್ಟ್ರಕವಿ ಕುವೆಂಪು ಅವರ ಕುರಿತ್ತಷ್ಟೇ ಅಲ್ಲದೇ ಕುಪ್ಪಳಿಯಲ್ಲಿರುವ ‘ಕವಿ ಮನೆ’ಯ ಭಾವಚಿತ್ರವನ್ನು ನೀಡಲಾಗಿತ್ತು.

ಇದನ್ನೂ ಓದಿರಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

“ಜ್ಞಾನಪೀಠ ಪ್ರಶಸ್ತಿ ಪಡೆದ ಇಬ್ಬರು  ಸಾಹಿತಿಗಳಾದ ರಾಷ್ಟ್ರಕವಿ ಕುವೆಂಪು ಮತ್ತು ಡಾ.ಯು.ಆರ್‌.ಅನಂತಮೂರ್ತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿಗೆ ಸೇರಿದವರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಾಡುಗಾರ ಶಿವಮೊಗ್ಗ ಸುಬ್ಬಣ್ಣನವರು ಈ ಜಿಲ್ಲೆಯವರು” ಎಂಬ ಮಾಹಿತಿ ಇತ್ತು.

ಸರ್‌. ಎಂ.ವಿ. ಫೋಟೋ ಎರಡು ಕಡೆ ಬಳಕೆ

ಒಂದೇ ಪಠ್ಯ ಪುಸ್ತಕದಲ್ಲಿ ಎರಡು ಕಡೆ ಸರ್‌.ಎಂ.ವಿಶ್ವೇಶ್ವರಯ್ಯನವರ ಫೋಟೋವನ್ನು ಚಕ್ರತೀರ್ಥ ಸಮಿತಿ ಬಳಸಿದೆ. ಬರಗೂರರ ಸಮಿತಿ ರಚಿಸಿದ ‘ನಮ್ಮ ಕರ್ನಾಟಕ’ ಪಾಠದಲ್ಲಿ ಉದ್ದಿಮೆಗಳ ಕುರಿತು ತಿಳಿಸುವಾಗ ಸರ್‌.ಎಂ.ವಿ. ಅವರ ಫೋಟೋ ಬಳಸಲಾಗಿತ್ತು. ಮೈಸೂರು ವಿಭಾಗದ ಪಠ್ಯದಲ್ಲಿ ಟಿಪ್ಪು ಸುಲ್ತಾನ ಫೋಟೋವನ್ನು ನೀಡಲಾಗಿತ್ತು. ಆದರೆ ‘ಮೈಸೂರು ವಿಭಾಗ’ದ ಪಾಠವನ್ನು ಉಳಿಸಿಕೊಂಡಿರುವ ಸಮಿತಿಯು ಮೈಸೂರಿನ ಚಾರಿತ್ರಿಕ ಹಿನ್ನಲೆಯನ್ನು ಪರಿಚಯಿಸುವಾಗ ಟಿಪ್ಪು ಫೋಟೋ ಕೈಬಿಟ್ಟು ಮತ್ತೆ ಸರ್‌.ಎಂ.ವಿ.ಫೋಟೋ ಬಳಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇನ್ನೆಂತಾ ವಿಷ ತುಂಬಿಕೊಂಡಿರಬೇಕು ಈ ಬ್ರಾಹ್ಮಣ್ಯ ವನ್ನ ವೈಭವೀಕರಿಸುವ ಪಠ್ಯ ಪರಿಸ್ಕರಣೆ ಅಧ್ಯಕ್ಷ,ಸದಸ್ಯರು ಮತ್ತು ಸಚಿವ,ನಾಚಿಕೆಯಾಗಬೇಕು ಇವರಿಗೆ.

  2. ಎಷ್ಟೂಂದು ಅಸಹ್ಯದ ಫ್ಯಾಶಿಸ್ಟ್ ಮನಸ್ಥಿತಿಯವರು ಈ ಸವರ್ಣ ಮನಸ್ಥಿತಿಯವರು

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...