Homeಕರ್ನಾಟಕಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

- Advertisement -
- Advertisement -

ದೇಶದ ಪ್ರಧಾನಿಯಾಗಿ ನಾಡಿನ ಗಮನ ಸೆಳೆದವರು ಎಚ್.ಡಿ.ದೇವೇಗೌಡರು. ಈ ಹಿಂದಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಮಕ್ಕಳಿಗೆ ಈ ವಿಶೇಷತೆಯನ್ನು ತಿಳಿಸುವ ನಿಟ್ಟಿನಲ್ಲಿ ಪಠ್ಯ ರೂಪಿಸಿತ್ತು. ಆದರೆ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಯನ್ನು ತೆಗೆದುಹಾಕುವ ಭರದಲ್ಲಿ ದೇವೇಗೌಡರ ಮಾಹಿತಿಯನ್ನೂ ತೆಗೆದುಹಾಕಿದೆ.

ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ‘ನಮ್ಮ ಕರ್ನಾಟಕ’ ಪಾಠವನ್ನು ಸೇರಿಸಲಾಗಿತ್ತು. ರಾಜ್ಯದ ಜಿಲ್ಲೆಗಳ ಪರಿಚಯದ ಜೊತೆಗೆ, ಕರ್ನಾಟಕದ ಅಸ್ಮಿತೆಗಳನ್ನು ಪುಟ್ಟ ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಈ ಪಠ್ಯದಲ್ಲಿ ಕತ್ತರಿಯಾಡಿಸಿರುವ ಚಕ್ರತೀರ್ಥ ಸಮಿತಿಗೆ ಹಲವು ಸಂಗತಿಗಳು ಅಪ್ರಸ್ತುತವೆನಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಠವನ್ನು ‘ನಮ್ಮ ಹೆಮ್ಮೆಯ ರಾಜ್ಯ- ಕರ್ನಾಟಕ’ ಎಂದು ಪರಿಷ್ಕರಣೆ ಮಾಡಿರುವ ನೂತನ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಗೆ ಕತ್ತರಿಹಾಕಿದೆ.

“ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಕಲಬುರಗಿ ವಿಭಾಗ, ಬೆಳಗಾವಿ ವಿಭಾಗ” ಎಂದು ವಿಭಾಗಿಸಿ, ಒಂದೊಂದು ವಿಭಾಗದ ಅಡಿಯಲ್ಲಿರುವ ಜಿಲ್ಲೆಗಳ ಪರಿಚಯವನ್ನು ಮಾಡಿಕೊಡಲಾಗಿತ್ತು. ಚಕ್ರತೀರ್ಥ ಸಮಿತಿಯು ಈ ವಿಭಾಗಗಳನ್ನು ಉಳಿಸಿದ್ದರೂ ಜಿಲ್ಲೆಗಳ ಮಾಹಿತಿಯನ್ನು ಕೈಬಿಟ್ಟಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಪರಿಚಯ ಮಾಡಿಕೊಡಲಾಗಿತ್ತು. ಇನ್ನುಳಿದ ಜಿಲ್ಲೆಗಳ ಪರಿಚಯವನ್ನು ಸಮಾಜವಿಜ್ಞಾನ ಭಾಗ-2ರ ಪಠ್ಯದಲ್ಲಿ ಮುಂದುವರಿಸಲಾಗಿತ್ತು.

(ಭಾಗ-2ರಲ್ಲಿ ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ- ಜಿಲ್ಲೆಗಳ ಪರಿಚಯ ಮಾಡಿಕೊಡಲಾಗಿದೆ.)

ಮೈಸೂರು ವಿಭಾಗದಲ್ಲಿತ್ತು ಹಾಸನ ಜಿಲ್ಲೆಯ ಪರಿಚಯ ದೇವೇಗೌಡ ಫೋಟೋ

ಹಾಸನ ಜಿಲ್ಲೆಯ ಪರಿಚಯ ಹೀಗೆ ಆರಂಭವಾಗುತ್ತದೆ: “ಹಾಸನಾಂಬ ದೇವಾಲಯದಿಂದ ಇದಕ್ಕೆ ಹಾಸನ ಎಂಬ ಹೆಸರು ಬಂದಿದೆ. ಈ ದೇವಾಲಯದ ಗರ್ಭಗುಡಿ ಬಾಗಿಲನ್ನು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯಲಾಗುತ್ತದೆ. ಈ ಜಿಲ್ಲೆಯಲ್ಲಿ ದೇವಾಲಯಗಳು ಹೊಯ್ಸಳ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿವೆ. ಗೊರುರು, ಮೊಸಳೆ, ಮುಂತಾದವು ಪ್ರಸಿದ್ಧ ಗ್ರಾಮಗಳು…”

ಕೊನೆಯಲ್ಲಿ, “ಕರ್ನಾಟದಿಂದ ಪ್ರಧಾನಿಯಾಗಿದ್ದ ಶ್ರೀ ಎಚ್.ಡಿ.ದೇವೇಗೌಡರು ಈ ಜಿಲ್ಲೆಯವರು” ಎಂದು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ. ಜೊತೆಗೆ ದೇವೇಗೌಡರ ಭಾವಚಿತ್ರವನ್ನು ನೀಡಲಾಗಿದೆ.

‘ಶಿವಮೊಗ್ಗ’ ಜಿಲ್ಲೆಯ ಪರಿಚಯದಲ್ಲಿತ್ತು ಕವಿಮನೆಯ ಚಿತ್ರ

ಶಿವಮೊಗ್ಗ ಜಿಲ್ಲೆಯ ಪರಿಚಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ರಾಷ್ಟ್ರಕವಿ ಕುವೆಂಪು ಅವರ ಕುರಿತ್ತಷ್ಟೇ ಅಲ್ಲದೇ ಕುಪ್ಪಳಿಯಲ್ಲಿರುವ ‘ಕವಿ ಮನೆ’ಯ ಭಾವಚಿತ್ರವನ್ನು ನೀಡಲಾಗಿತ್ತು.

ಇದನ್ನೂ ಓದಿರಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

“ಜ್ಞಾನಪೀಠ ಪ್ರಶಸ್ತಿ ಪಡೆದ ಇಬ್ಬರು  ಸಾಹಿತಿಗಳಾದ ರಾಷ್ಟ್ರಕವಿ ಕುವೆಂಪು ಮತ್ತು ಡಾ.ಯು.ಆರ್‌.ಅನಂತಮೂರ್ತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿಗೆ ಸೇರಿದವರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಾಡುಗಾರ ಶಿವಮೊಗ್ಗ ಸುಬ್ಬಣ್ಣನವರು ಈ ಜಿಲ್ಲೆಯವರು” ಎಂಬ ಮಾಹಿತಿ ಇತ್ತು.

ಸರ್‌. ಎಂ.ವಿ. ಫೋಟೋ ಎರಡು ಕಡೆ ಬಳಕೆ

ಒಂದೇ ಪಠ್ಯ ಪುಸ್ತಕದಲ್ಲಿ ಎರಡು ಕಡೆ ಸರ್‌.ಎಂ.ವಿಶ್ವೇಶ್ವರಯ್ಯನವರ ಫೋಟೋವನ್ನು ಚಕ್ರತೀರ್ಥ ಸಮಿತಿ ಬಳಸಿದೆ. ಬರಗೂರರ ಸಮಿತಿ ರಚಿಸಿದ ‘ನಮ್ಮ ಕರ್ನಾಟಕ’ ಪಾಠದಲ್ಲಿ ಉದ್ದಿಮೆಗಳ ಕುರಿತು ತಿಳಿಸುವಾಗ ಸರ್‌.ಎಂ.ವಿ. ಅವರ ಫೋಟೋ ಬಳಸಲಾಗಿತ್ತು. ಮೈಸೂರು ವಿಭಾಗದ ಪಠ್ಯದಲ್ಲಿ ಟಿಪ್ಪು ಸುಲ್ತಾನ ಫೋಟೋವನ್ನು ನೀಡಲಾಗಿತ್ತು. ಆದರೆ ‘ಮೈಸೂರು ವಿಭಾಗ’ದ ಪಾಠವನ್ನು ಉಳಿಸಿಕೊಂಡಿರುವ ಸಮಿತಿಯು ಮೈಸೂರಿನ ಚಾರಿತ್ರಿಕ ಹಿನ್ನಲೆಯನ್ನು ಪರಿಚಯಿಸುವಾಗ ಟಿಪ್ಪು ಫೋಟೋ ಕೈಬಿಟ್ಟು ಮತ್ತೆ ಸರ್‌.ಎಂ.ವಿ.ಫೋಟೋ ಬಳಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇನ್ನೆಂತಾ ವಿಷ ತುಂಬಿಕೊಂಡಿರಬೇಕು ಈ ಬ್ರಾಹ್ಮಣ್ಯ ವನ್ನ ವೈಭವೀಕರಿಸುವ ಪಠ್ಯ ಪರಿಸ್ಕರಣೆ ಅಧ್ಯಕ್ಷ,ಸದಸ್ಯರು ಮತ್ತು ಸಚಿವ,ನಾಚಿಕೆಯಾಗಬೇಕು ಇವರಿಗೆ.

  2. ಎಷ್ಟೂಂದು ಅಸಹ್ಯದ ಫ್ಯಾಶಿಸ್ಟ್ ಮನಸ್ಥಿತಿಯವರು ಈ ಸವರ್ಣ ಮನಸ್ಥಿತಿಯವರು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...