Homeಕರ್ನಾಟಕಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

- Advertisement -
- Advertisement -

ದೇಶದ ಪ್ರಧಾನಿಯಾಗಿ ನಾಡಿನ ಗಮನ ಸೆಳೆದವರು ಎಚ್.ಡಿ.ದೇವೇಗೌಡರು. ಈ ಹಿಂದಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಮಕ್ಕಳಿಗೆ ಈ ವಿಶೇಷತೆಯನ್ನು ತಿಳಿಸುವ ನಿಟ್ಟಿನಲ್ಲಿ ಪಠ್ಯ ರೂಪಿಸಿತ್ತು. ಆದರೆ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಯನ್ನು ತೆಗೆದುಹಾಕುವ ಭರದಲ್ಲಿ ದೇವೇಗೌಡರ ಮಾಹಿತಿಯನ್ನೂ ತೆಗೆದುಹಾಕಿದೆ.

ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ‘ನಮ್ಮ ಕರ್ನಾಟಕ’ ಪಾಠವನ್ನು ಸೇರಿಸಲಾಗಿತ್ತು. ರಾಜ್ಯದ ಜಿಲ್ಲೆಗಳ ಪರಿಚಯದ ಜೊತೆಗೆ, ಕರ್ನಾಟಕದ ಅಸ್ಮಿತೆಗಳನ್ನು ಪುಟ್ಟ ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಈ ಪಠ್ಯದಲ್ಲಿ ಕತ್ತರಿಯಾಡಿಸಿರುವ ಚಕ್ರತೀರ್ಥ ಸಮಿತಿಗೆ ಹಲವು ಸಂಗತಿಗಳು ಅಪ್ರಸ್ತುತವೆನಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಠವನ್ನು ‘ನಮ್ಮ ಹೆಮ್ಮೆಯ ರಾಜ್ಯ- ಕರ್ನಾಟಕ’ ಎಂದು ಪರಿಷ್ಕರಣೆ ಮಾಡಿರುವ ನೂತನ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಗೆ ಕತ್ತರಿಹಾಕಿದೆ.

“ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಕಲಬುರಗಿ ವಿಭಾಗ, ಬೆಳಗಾವಿ ವಿಭಾಗ” ಎಂದು ವಿಭಾಗಿಸಿ, ಒಂದೊಂದು ವಿಭಾಗದ ಅಡಿಯಲ್ಲಿರುವ ಜಿಲ್ಲೆಗಳ ಪರಿಚಯವನ್ನು ಮಾಡಿಕೊಡಲಾಗಿತ್ತು. ಚಕ್ರತೀರ್ಥ ಸಮಿತಿಯು ಈ ವಿಭಾಗಗಳನ್ನು ಉಳಿಸಿದ್ದರೂ ಜಿಲ್ಲೆಗಳ ಮಾಹಿತಿಯನ್ನು ಕೈಬಿಟ್ಟಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಪರಿಚಯ ಮಾಡಿಕೊಡಲಾಗಿತ್ತು. ಇನ್ನುಳಿದ ಜಿಲ್ಲೆಗಳ ಪರಿಚಯವನ್ನು ಸಮಾಜವಿಜ್ಞಾನ ಭಾಗ-2ರ ಪಠ್ಯದಲ್ಲಿ ಮುಂದುವರಿಸಲಾಗಿತ್ತು.

(ಭಾಗ-2ರಲ್ಲಿ ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ- ಜಿಲ್ಲೆಗಳ ಪರಿಚಯ ಮಾಡಿಕೊಡಲಾಗಿದೆ.)

ಮೈಸೂರು ವಿಭಾಗದಲ್ಲಿತ್ತು ಹಾಸನ ಜಿಲ್ಲೆಯ ಪರಿಚಯ ದೇವೇಗೌಡ ಫೋಟೋ

ಹಾಸನ ಜಿಲ್ಲೆಯ ಪರಿಚಯ ಹೀಗೆ ಆರಂಭವಾಗುತ್ತದೆ: “ಹಾಸನಾಂಬ ದೇವಾಲಯದಿಂದ ಇದಕ್ಕೆ ಹಾಸನ ಎಂಬ ಹೆಸರು ಬಂದಿದೆ. ಈ ದೇವಾಲಯದ ಗರ್ಭಗುಡಿ ಬಾಗಿಲನ್ನು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯಲಾಗುತ್ತದೆ. ಈ ಜಿಲ್ಲೆಯಲ್ಲಿ ದೇವಾಲಯಗಳು ಹೊಯ್ಸಳ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿವೆ. ಗೊರುರು, ಮೊಸಳೆ, ಮುಂತಾದವು ಪ್ರಸಿದ್ಧ ಗ್ರಾಮಗಳು…”

ಕೊನೆಯಲ್ಲಿ, “ಕರ್ನಾಟದಿಂದ ಪ್ರಧಾನಿಯಾಗಿದ್ದ ಶ್ರೀ ಎಚ್.ಡಿ.ದೇವೇಗೌಡರು ಈ ಜಿಲ್ಲೆಯವರು” ಎಂದು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ. ಜೊತೆಗೆ ದೇವೇಗೌಡರ ಭಾವಚಿತ್ರವನ್ನು ನೀಡಲಾಗಿದೆ.

‘ಶಿವಮೊಗ್ಗ’ ಜಿಲ್ಲೆಯ ಪರಿಚಯದಲ್ಲಿತ್ತು ಕವಿಮನೆಯ ಚಿತ್ರ

ಶಿವಮೊಗ್ಗ ಜಿಲ್ಲೆಯ ಪರಿಚಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ರಾಷ್ಟ್ರಕವಿ ಕುವೆಂಪು ಅವರ ಕುರಿತ್ತಷ್ಟೇ ಅಲ್ಲದೇ ಕುಪ್ಪಳಿಯಲ್ಲಿರುವ ‘ಕವಿ ಮನೆ’ಯ ಭಾವಚಿತ್ರವನ್ನು ನೀಡಲಾಗಿತ್ತು.

ಇದನ್ನೂ ಓದಿರಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

“ಜ್ಞಾನಪೀಠ ಪ್ರಶಸ್ತಿ ಪಡೆದ ಇಬ್ಬರು  ಸಾಹಿತಿಗಳಾದ ರಾಷ್ಟ್ರಕವಿ ಕುವೆಂಪು ಮತ್ತು ಡಾ.ಯು.ಆರ್‌.ಅನಂತಮೂರ್ತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿಗೆ ಸೇರಿದವರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಾಡುಗಾರ ಶಿವಮೊಗ್ಗ ಸುಬ್ಬಣ್ಣನವರು ಈ ಜಿಲ್ಲೆಯವರು” ಎಂಬ ಮಾಹಿತಿ ಇತ್ತು.

ಸರ್‌. ಎಂ.ವಿ. ಫೋಟೋ ಎರಡು ಕಡೆ ಬಳಕೆ

ಒಂದೇ ಪಠ್ಯ ಪುಸ್ತಕದಲ್ಲಿ ಎರಡು ಕಡೆ ಸರ್‌.ಎಂ.ವಿಶ್ವೇಶ್ವರಯ್ಯನವರ ಫೋಟೋವನ್ನು ಚಕ್ರತೀರ್ಥ ಸಮಿತಿ ಬಳಸಿದೆ. ಬರಗೂರರ ಸಮಿತಿ ರಚಿಸಿದ ‘ನಮ್ಮ ಕರ್ನಾಟಕ’ ಪಾಠದಲ್ಲಿ ಉದ್ದಿಮೆಗಳ ಕುರಿತು ತಿಳಿಸುವಾಗ ಸರ್‌.ಎಂ.ವಿ. ಅವರ ಫೋಟೋ ಬಳಸಲಾಗಿತ್ತು. ಮೈಸೂರು ವಿಭಾಗದ ಪಠ್ಯದಲ್ಲಿ ಟಿಪ್ಪು ಸುಲ್ತಾನ ಫೋಟೋವನ್ನು ನೀಡಲಾಗಿತ್ತು. ಆದರೆ ‘ಮೈಸೂರು ವಿಭಾಗ’ದ ಪಾಠವನ್ನು ಉಳಿಸಿಕೊಂಡಿರುವ ಸಮಿತಿಯು ಮೈಸೂರಿನ ಚಾರಿತ್ರಿಕ ಹಿನ್ನಲೆಯನ್ನು ಪರಿಚಯಿಸುವಾಗ ಟಿಪ್ಪು ಫೋಟೋ ಕೈಬಿಟ್ಟು ಮತ್ತೆ ಸರ್‌.ಎಂ.ವಿ.ಫೋಟೋ ಬಳಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇನ್ನೆಂತಾ ವಿಷ ತುಂಬಿಕೊಂಡಿರಬೇಕು ಈ ಬ್ರಾಹ್ಮಣ್ಯ ವನ್ನ ವೈಭವೀಕರಿಸುವ ಪಠ್ಯ ಪರಿಸ್ಕರಣೆ ಅಧ್ಯಕ್ಷ,ಸದಸ್ಯರು ಮತ್ತು ಸಚಿವ,ನಾಚಿಕೆಯಾಗಬೇಕು ಇವರಿಗೆ.

  2. ಎಷ್ಟೂಂದು ಅಸಹ್ಯದ ಫ್ಯಾಶಿಸ್ಟ್ ಮನಸ್ಥಿತಿಯವರು ಈ ಸವರ್ಣ ಮನಸ್ಥಿತಿಯವರು

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...