Homeಮುಖಪುಟಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ: 30 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್‌ಗೆ ಜಾಮೀನು

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ: 30 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್‌ಗೆ ಜಾಮೀನು

- Advertisement -
- Advertisement -

1991ರಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಎ.ಜಿ. ಪೆರಾರಿವಾಲನ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

“ಅರ್ಜಿದಾರರು 30 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು, ಕೇಂದ್ರದ ತೀವ್ರ ವಿರೋಧದ ನಡುವೆಯೂ ಜಾಮೀನಿನ ಮೇಲೆ ಬಿಡುಗಡೆಯಾಗಲು ಅರ್ಹರು ಎಂದು ಪರಿಗಣಿಸಲಾಗಿದೆ. ಪೆರೋಲ್‌ನಲ್ಲಿ ಹೊರಬಂದಾಗ ಅವರ ವಿರುದ್ಧ ಯಾವುದೇ ದೂರು ಇಲ್ಲ” ಎಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠವು ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ಎ.ಜಿ. ಪೆರಾರಿವಾಲನ್‌ಗೆ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ 2014 ರಲ್ಲಿ ಪರಿವರ್ತಿಸಲಾಗಿದೆ. ಅಪರಾಧಿಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ಚೆನ್ನೈ ಬಳಿಯ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗುವಂತೆ ಷರತ್ತು ವಿಧಿಸಿ ಸೂಚಿಸಿದೆ.

ಇದನ್ನೂ ಓದಿ: ಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ ತಂದ ಛತ್ತೀಸ್‌ಗಢ ಸಿಎಂ!

ಮಲ್ಟಿ ಡಿಸಿಪ್ಲಿನರಿ ಮಾನಿಟರಿಂಗ್ ಏಜೆನ್ಸಿಯ (MDMA) ತನಿಖೆ ಪೂರ್ಣಗೊಳ್ಳುವವರೆಗೆ ತನ್ನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಪೆರಾರಿವಾಲನ್ (47) ಕೋರಿದ್ದರು. 2016 ರಲ್ಲಿ, ಅವರು ಶಿಕ್ಷೆಯನ್ನು ಬದಲಾಯಿಸುವಂತೆ ಕೋರಿ ತಮ್ಮ ಮನವಿಯನ್ನು ನಿರಾಕರಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ವಿಶೇಷ ರಜೆ ಅರ್ಜಿಯನ್ನು ಸಲ್ಲಿಸಿದ್ದರು.

ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ನಡೆಯುತ್ತಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂನ (ಎಲ್‌ಟಿಟಿಇ) ಸದಸ್ಯೆ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯವರನ್ನು ಹತ್ಯೆಗೈದಿದ್ದರು. ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಧನು ಸೇರಿದಂತೆ ಹದಿನಾಲ್ಕು ಮಂದಿ ಸಾವನ್ನಪ್ಪಿದ್ದರು. ಗಾಂಧಿಯವರ ಹತ್ಯೆಯು ಭಾರತದ ಮೊದಲ ಆತ್ಮಹತ್ಯಾ ಬಾಂಬ್ ದಾಳಿ ಪ್ರಕರಣವಾಗಿದೆ.

ಪ್ರಕರಣದಲ್ಲಿ ಪೆರಾರಿವಾಲನ್, ಮುರುಗನ್, ಸಂತಮ್ ಮತ್ತು ನಳಿನಿ ಎಂಬ ನಾಲ್ವರು ಅಪರಾಧಿಗಳು ಶಿಕ್ಷೆ ಒಳಪಟ್ಟಿದ್ದರು. ಏಪ್ರಿಲ್ 2000 ರಲ್ಲಿ, ತಮಿಳುನಾಡು ರಾಜ್ಯಪಾಲರು ರಾಜ್ಯ ಸರ್ಕಾರದ ಶಿಫಾರಸು ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಮತ್ತು ರಾಜೀವ್ ಗಾಂಧಿಯವರ ಪತ್ನಿ ಸೋನಿಯಾ ಗಾಂಧಿಯವರ ಮನವಿಯ ಆಧಾರದ ಮೇಲೆ ಅಪರಾಧಿ ನಳಿನಿಯ ಶಿಕ್ಷೆಯನ್ನು ಕಡಿಮೆಗೊಳಿಸಿದ್ದರು. ಫೆಬ್ರವರಿ 18, 2014 ರಂದು, ಸುಪ್ರೀಂ ಕೋರ್ಟ್ ಪೆರಾರಿವಾಲನ್ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತು.

ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪೆರಾರಿವಾಲನ್ ಅವರ ತಾಯಿ ಅರ್ಪುತಮ್ಮ ಅಮ್ಮಲ್ ಅವರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಹಿರಿಯ ವಕೀಲರಾದ ರಾಕೇಶ್ ದ್ವಿವೇದಿ ಮತ್ತು ಗೋಪಾಲ್ ಶಂಕರನಾರಾಯಣನ್ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....