Homeಮುಖಪುಟಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ: 30 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್‌ಗೆ ಜಾಮೀನು

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ: 30 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್‌ಗೆ ಜಾಮೀನು

- Advertisement -
- Advertisement -

1991ರಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಎ.ಜಿ. ಪೆರಾರಿವಾಲನ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

“ಅರ್ಜಿದಾರರು 30 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು, ಕೇಂದ್ರದ ತೀವ್ರ ವಿರೋಧದ ನಡುವೆಯೂ ಜಾಮೀನಿನ ಮೇಲೆ ಬಿಡುಗಡೆಯಾಗಲು ಅರ್ಹರು ಎಂದು ಪರಿಗಣಿಸಲಾಗಿದೆ. ಪೆರೋಲ್‌ನಲ್ಲಿ ಹೊರಬಂದಾಗ ಅವರ ವಿರುದ್ಧ ಯಾವುದೇ ದೂರು ಇಲ್ಲ” ಎಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠವು ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ಎ.ಜಿ. ಪೆರಾರಿವಾಲನ್‌ಗೆ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ 2014 ರಲ್ಲಿ ಪರಿವರ್ತಿಸಲಾಗಿದೆ. ಅಪರಾಧಿಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ಚೆನ್ನೈ ಬಳಿಯ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗುವಂತೆ ಷರತ್ತು ವಿಧಿಸಿ ಸೂಚಿಸಿದೆ.

ಇದನ್ನೂ ಓದಿ: ಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ ತಂದ ಛತ್ತೀಸ್‌ಗಢ ಸಿಎಂ!

ಮಲ್ಟಿ ಡಿಸಿಪ್ಲಿನರಿ ಮಾನಿಟರಿಂಗ್ ಏಜೆನ್ಸಿಯ (MDMA) ತನಿಖೆ ಪೂರ್ಣಗೊಳ್ಳುವವರೆಗೆ ತನ್ನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಪೆರಾರಿವಾಲನ್ (47) ಕೋರಿದ್ದರು. 2016 ರಲ್ಲಿ, ಅವರು ಶಿಕ್ಷೆಯನ್ನು ಬದಲಾಯಿಸುವಂತೆ ಕೋರಿ ತಮ್ಮ ಮನವಿಯನ್ನು ನಿರಾಕರಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ವಿಶೇಷ ರಜೆ ಅರ್ಜಿಯನ್ನು ಸಲ್ಲಿಸಿದ್ದರು.

ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ನಡೆಯುತ್ತಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂನ (ಎಲ್‌ಟಿಟಿಇ) ಸದಸ್ಯೆ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯವರನ್ನು ಹತ್ಯೆಗೈದಿದ್ದರು. ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಧನು ಸೇರಿದಂತೆ ಹದಿನಾಲ್ಕು ಮಂದಿ ಸಾವನ್ನಪ್ಪಿದ್ದರು. ಗಾಂಧಿಯವರ ಹತ್ಯೆಯು ಭಾರತದ ಮೊದಲ ಆತ್ಮಹತ್ಯಾ ಬಾಂಬ್ ದಾಳಿ ಪ್ರಕರಣವಾಗಿದೆ.

ಪ್ರಕರಣದಲ್ಲಿ ಪೆರಾರಿವಾಲನ್, ಮುರುಗನ್, ಸಂತಮ್ ಮತ್ತು ನಳಿನಿ ಎಂಬ ನಾಲ್ವರು ಅಪರಾಧಿಗಳು ಶಿಕ್ಷೆ ಒಳಪಟ್ಟಿದ್ದರು. ಏಪ್ರಿಲ್ 2000 ರಲ್ಲಿ, ತಮಿಳುನಾಡು ರಾಜ್ಯಪಾಲರು ರಾಜ್ಯ ಸರ್ಕಾರದ ಶಿಫಾರಸು ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಮತ್ತು ರಾಜೀವ್ ಗಾಂಧಿಯವರ ಪತ್ನಿ ಸೋನಿಯಾ ಗಾಂಧಿಯವರ ಮನವಿಯ ಆಧಾರದ ಮೇಲೆ ಅಪರಾಧಿ ನಳಿನಿಯ ಶಿಕ್ಷೆಯನ್ನು ಕಡಿಮೆಗೊಳಿಸಿದ್ದರು. ಫೆಬ್ರವರಿ 18, 2014 ರಂದು, ಸುಪ್ರೀಂ ಕೋರ್ಟ್ ಪೆರಾರಿವಾಲನ್ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತು.

ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪೆರಾರಿವಾಲನ್ ಅವರ ತಾಯಿ ಅರ್ಪುತಮ್ಮ ಅಮ್ಮಲ್ ಅವರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಹಿರಿಯ ವಕೀಲರಾದ ರಾಕೇಶ್ ದ್ವಿವೇದಿ ಮತ್ತು ಗೋಪಾಲ್ ಶಂಕರನಾರಾಯಣನ್ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...