Homeಮುಖಪುಟಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

- Advertisement -
- Advertisement -

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರು ದುಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರನ್ನು ದುಬೈನ ಅಮೆರಿಕನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ವಯಂಪ್ರೇರಿತ ದೇಶಭಷ್ಟರಾಗಿ ಹೊರಗುಳಿದಿದ್ದ ಅವರು ದೀರ್ಘ ಕಾಲದ ಅನಾರೋಗ್ಯದ ನಂತರ ನಿಧನರಾಗಿದ್ದಾರೆ.

1999ರಲ್ಲಿ ರಕ್ತರಹಿತ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ಬಳಿಕ ಸುಮಾರು ಒಂದು ದಶಕದ ಕಾಲ ಪಾಕಿಸ್ತಾನದಲ್ಲಿ ಮುಷರಫ್ ಆಡಳಿತ ನಡೆಸಿದರು.

ಅನೇಕ ವರ್ಷಗಳು ಅಧಿಕಾರದಲ್ಲಿದ್ದರು. ಅಲ್ ಖೈದಾ ಮತ್ತು ಇತರ ಉಗ್ರಗಾಮಿ ಇಸ್ಲಾಮಿಸ್ಟ್‌ಗಳು ಅವರನ್ನು ಕನಿಷ್ಠ ಮೂರು ಬಾರಿ ಕೊಲ್ಲಲು ಪತ್ನಿಸಿದ್ದರು.

ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ತೀವ್ರ ಮಿಲಿಟರಿ ಪ್ರಯೋಗವನ್ನು ಮಾಡಿದರು. ಅಲ್ ಖೈದಾ ಮತ್ತು ಅಫ್ಘಾನ್ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮಧ್ಯಪ್ರವೇಶಿಸಿದ್ದರಿಂದ ಮುಷರಫ್ ಆಡಳಿತ ಅವನತಿ ಹೊಂದಿತು.

1943ರಲ್ಲಿ ನವದೆಹಲಿಯಲ್ಲಿ ಜನಿಸಿದವರು ಮುಷರಫ್‌. ಅವರ ಕುಟುಂಬವು 1947ರಲ್ಲಿ ಪಾಕಿಸ್ತಾನಕ್ಕೆ ಸ್ಥಳಾಂತರಗೊಂಡಾಗ ಅವರಿಗೆ ಕೇವಲ 4 ವರ್ಷ ವಯಸ್ಸಾಗಿತ್ತು. ತಂದೆ ವಿದೇಶಾಂಗ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದರು, ಅವರ ತಾಯಿ ಶಿಕ್ಷಕಿಯಾಗಿದ್ದರು.

18ನೇ ವಯಸ್ಸಿನಲ್ಲಿ ಮುಷರಫ್‌ ಸೈನ್ಯಕ್ಕೆ ಸೇರಿದರು. ಅದರ ಮುಖ್ಯಸ್ಥರಾಗುವ ಮೊದಲು ಕಮಾಂಡೋ ಘಟಕವನ್ನು ಮುನ್ನಡೆಸಿದರು. ಭಾರತದ ಹಿಡಿತದಲ್ಲಿರುವ ಕಾಶ್ಮೀರದ ಪ್ರದೇಶಗಳನ್ನು ಆಕ್ರಮಿಸುವ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ್ದಕ್ಕಾಗಿ ಅವರನ್ನು ವಜಾಗೊಳಿಸಲು ಪ್ರಯತ್ನಿಸಿದ ಅಂದಿನ ಪ್ರಧಾನಿ ನವಾಜ್ ಷರೀಫ್ ಅವರನ್ನು ಪದಚ್ಯುತಗೊಳಿಸುವ ಮೂಲಕ ಮುಷರಫ್‌ ಅಧಿಕಾರವನ್ನು ಪಡೆದಿದ್ದರು.

ಮುಷರಫ್ ಅವರ ಅಧಿಕಾರವಧಿಯಲ್ಲಿ ವಿದೇಶಿ ಹೂಡಿಕೆಯು ಪ್ರವರ್ಧಮಾನಕ್ಕೆ ಬಂದಿತು. ಪಾಕಿಸ್ತಾನವು 7.5%ರಷ್ಟು ವಾರ್ಷಿಕ ಆರ್ಥಿಕ ಬೆಳವಣಿಗೆಯನ್ನು ಕಂಡಿತು. ಇದು ವಿಶ್ವ ಬ್ಯಾಂಕ್ ಮಾಹಿತಿಯ ಪ್ರಕಾರ ಸುಮಾರು ಮೂರು ದಶಕಗಳಲ್ಲಿ ಅತ್ಯಧಿಕ ಮಟ್ಟದ್ದಾಗಿ ಗುರುತಿಸಿಕೊಂಡಿದೆ.

ಅವರ ಅಧ್ಯಕ್ಷೀಯ ಅವಧಿಯ ಬಳಿಕ ನಿರಂಕುಶ ಆಡಳಿತ ಹೆಚ್ಚಿತು. 2006ರಲ್ಲಿ, ಬಲೂಚಿಸ್ತಾನ್ ಪ್ರಾಂತ್ಯದ ಬುಡಕಟ್ಟು ಮುಖ್ಯಸ್ಥನನ್ನು ಕೊಲ್ಲಲು ಮುಷರಫ್ ಮಿಲಿಟರಿ ಕ್ರಮಕ್ಕೆ ಆದೇಶಿಸಿದರು. ಇದು ಇಂದಿಗೂ ಶಸಸ್ತ್ರ ವಿಪ್ಲವಕ್ಕೆ ಕಾರಣವಾಗಿದೆ.

ನಂತರ 2007ರಲ್ಲಿ ಪ್ರತಿಪಕ್ಷದ ನಾಯಕಿ ಬೆನಜೀರ್ ಭುಟ್ಟೊ ಅವರನ್ನು ಹತ್ಯೆ ಮಾಡಿದ ಆತ್ಮಹತ್ಯಾ ದಾಳಿಯು ಹಿಂಸಾಚಾರವನ್ನು ಪ್ರಚೋದಿಸಿತು. ನ್ಯಾಯಾಂಗವನ್ನು ಬಲಪಡಿಸುವ ಪ್ರಯತ್ನಗಳು ಪ್ರತಿಭಟನೆಗಳಿಗೆ ಕಾರಣವಾಯಿತು. ಮುತ್ತಿಗೆ ಹಾಕಿದ ಮುಷರಫ್ ಚುನಾವಣೆಗಳನ್ನು ಮುಂದೂಡಿದರು. ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

2008ರಲ್ಲಿ 11 ವರ್ಷಗಳ ಬಳಿಕ ದೇಶದ ಮೊದಲ ಪ್ರಜಾಸತ್ತಾತ್ಮಕ ಚುನಾವಣೆಗಳು ನಡೆದವು. ಮುಷರಫ್ ಅವರ ಪಕ್ಷವು ಸೋತಿತು. ಸಂಸತ್ತಿನ ದೋಷಾರೋಪಣೆಯನ್ನು ಎದುರಿಸಿತು. ಮುಷರಫ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಲಂಡನ್‌ಗೆ ಪಲಾಯನ ಮಾಡಿದರು.

ಸಂಸತ್ತಿಗೆ ಸ್ಪರ್ಧಿಸಲು ಅವರು 2013 ರಲ್ಲಿ ಪಾಕಿಸ್ತಾನಕ್ಕೆ ಮರಳಿದರು. ಆದರೆ ತಕ್ಷಣವೇ ಅನರ್ಹಗೊಳಿಸಲಾಯಿತು. 2016ರಲ್ಲಿ ದುಬೈಗೆ ತೆರಳಲು ಅವಕಾಶ ನೀಡಲಾಗಿತ್ತು.

2007ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ನ್ಯಾಯಾಲಯವು 2019ರಲ್ಲಿ ಮುಷರಫ್‌ಗೆ ಮರಣದಂಡನೆ ವಿಧಿಸಿತು. ಆದರೆ ತೀರ್ಪನ್ನು ನಂತರ ರದ್ದುಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...