Homeಮುಖಪುಟಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

- Advertisement -
- Advertisement -

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರು ದುಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರನ್ನು ದುಬೈನ ಅಮೆರಿಕನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ವಯಂಪ್ರೇರಿತ ದೇಶಭಷ್ಟರಾಗಿ ಹೊರಗುಳಿದಿದ್ದ ಅವರು ದೀರ್ಘ ಕಾಲದ ಅನಾರೋಗ್ಯದ ನಂತರ ನಿಧನರಾಗಿದ್ದಾರೆ.

1999ರಲ್ಲಿ ರಕ್ತರಹಿತ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ಬಳಿಕ ಸುಮಾರು ಒಂದು ದಶಕದ ಕಾಲ ಪಾಕಿಸ್ತಾನದಲ್ಲಿ ಮುಷರಫ್ ಆಡಳಿತ ನಡೆಸಿದರು.

ಅನೇಕ ವರ್ಷಗಳು ಅಧಿಕಾರದಲ್ಲಿದ್ದರು. ಅಲ್ ಖೈದಾ ಮತ್ತು ಇತರ ಉಗ್ರಗಾಮಿ ಇಸ್ಲಾಮಿಸ್ಟ್‌ಗಳು ಅವರನ್ನು ಕನಿಷ್ಠ ಮೂರು ಬಾರಿ ಕೊಲ್ಲಲು ಪತ್ನಿಸಿದ್ದರು.

ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ತೀವ್ರ ಮಿಲಿಟರಿ ಪ್ರಯೋಗವನ್ನು ಮಾಡಿದರು. ಅಲ್ ಖೈದಾ ಮತ್ತು ಅಫ್ಘಾನ್ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮಧ್ಯಪ್ರವೇಶಿಸಿದ್ದರಿಂದ ಮುಷರಫ್ ಆಡಳಿತ ಅವನತಿ ಹೊಂದಿತು.

1943ರಲ್ಲಿ ನವದೆಹಲಿಯಲ್ಲಿ ಜನಿಸಿದವರು ಮುಷರಫ್‌. ಅವರ ಕುಟುಂಬವು 1947ರಲ್ಲಿ ಪಾಕಿಸ್ತಾನಕ್ಕೆ ಸ್ಥಳಾಂತರಗೊಂಡಾಗ ಅವರಿಗೆ ಕೇವಲ 4 ವರ್ಷ ವಯಸ್ಸಾಗಿತ್ತು. ತಂದೆ ವಿದೇಶಾಂಗ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದರು, ಅವರ ತಾಯಿ ಶಿಕ್ಷಕಿಯಾಗಿದ್ದರು.

18ನೇ ವಯಸ್ಸಿನಲ್ಲಿ ಮುಷರಫ್‌ ಸೈನ್ಯಕ್ಕೆ ಸೇರಿದರು. ಅದರ ಮುಖ್ಯಸ್ಥರಾಗುವ ಮೊದಲು ಕಮಾಂಡೋ ಘಟಕವನ್ನು ಮುನ್ನಡೆಸಿದರು. ಭಾರತದ ಹಿಡಿತದಲ್ಲಿರುವ ಕಾಶ್ಮೀರದ ಪ್ರದೇಶಗಳನ್ನು ಆಕ್ರಮಿಸುವ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ್ದಕ್ಕಾಗಿ ಅವರನ್ನು ವಜಾಗೊಳಿಸಲು ಪ್ರಯತ್ನಿಸಿದ ಅಂದಿನ ಪ್ರಧಾನಿ ನವಾಜ್ ಷರೀಫ್ ಅವರನ್ನು ಪದಚ್ಯುತಗೊಳಿಸುವ ಮೂಲಕ ಮುಷರಫ್‌ ಅಧಿಕಾರವನ್ನು ಪಡೆದಿದ್ದರು.

ಮುಷರಫ್ ಅವರ ಅಧಿಕಾರವಧಿಯಲ್ಲಿ ವಿದೇಶಿ ಹೂಡಿಕೆಯು ಪ್ರವರ್ಧಮಾನಕ್ಕೆ ಬಂದಿತು. ಪಾಕಿಸ್ತಾನವು 7.5%ರಷ್ಟು ವಾರ್ಷಿಕ ಆರ್ಥಿಕ ಬೆಳವಣಿಗೆಯನ್ನು ಕಂಡಿತು. ಇದು ವಿಶ್ವ ಬ್ಯಾಂಕ್ ಮಾಹಿತಿಯ ಪ್ರಕಾರ ಸುಮಾರು ಮೂರು ದಶಕಗಳಲ್ಲಿ ಅತ್ಯಧಿಕ ಮಟ್ಟದ್ದಾಗಿ ಗುರುತಿಸಿಕೊಂಡಿದೆ.

ಅವರ ಅಧ್ಯಕ್ಷೀಯ ಅವಧಿಯ ಬಳಿಕ ನಿರಂಕುಶ ಆಡಳಿತ ಹೆಚ್ಚಿತು. 2006ರಲ್ಲಿ, ಬಲೂಚಿಸ್ತಾನ್ ಪ್ರಾಂತ್ಯದ ಬುಡಕಟ್ಟು ಮುಖ್ಯಸ್ಥನನ್ನು ಕೊಲ್ಲಲು ಮುಷರಫ್ ಮಿಲಿಟರಿ ಕ್ರಮಕ್ಕೆ ಆದೇಶಿಸಿದರು. ಇದು ಇಂದಿಗೂ ಶಸಸ್ತ್ರ ವಿಪ್ಲವಕ್ಕೆ ಕಾರಣವಾಗಿದೆ.

ನಂತರ 2007ರಲ್ಲಿ ಪ್ರತಿಪಕ್ಷದ ನಾಯಕಿ ಬೆನಜೀರ್ ಭುಟ್ಟೊ ಅವರನ್ನು ಹತ್ಯೆ ಮಾಡಿದ ಆತ್ಮಹತ್ಯಾ ದಾಳಿಯು ಹಿಂಸಾಚಾರವನ್ನು ಪ್ರಚೋದಿಸಿತು. ನ್ಯಾಯಾಂಗವನ್ನು ಬಲಪಡಿಸುವ ಪ್ರಯತ್ನಗಳು ಪ್ರತಿಭಟನೆಗಳಿಗೆ ಕಾರಣವಾಯಿತು. ಮುತ್ತಿಗೆ ಹಾಕಿದ ಮುಷರಫ್ ಚುನಾವಣೆಗಳನ್ನು ಮುಂದೂಡಿದರು. ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

2008ರಲ್ಲಿ 11 ವರ್ಷಗಳ ಬಳಿಕ ದೇಶದ ಮೊದಲ ಪ್ರಜಾಸತ್ತಾತ್ಮಕ ಚುನಾವಣೆಗಳು ನಡೆದವು. ಮುಷರಫ್ ಅವರ ಪಕ್ಷವು ಸೋತಿತು. ಸಂಸತ್ತಿನ ದೋಷಾರೋಪಣೆಯನ್ನು ಎದುರಿಸಿತು. ಮುಷರಫ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಲಂಡನ್‌ಗೆ ಪಲಾಯನ ಮಾಡಿದರು.

ಸಂಸತ್ತಿಗೆ ಸ್ಪರ್ಧಿಸಲು ಅವರು 2013 ರಲ್ಲಿ ಪಾಕಿಸ್ತಾನಕ್ಕೆ ಮರಳಿದರು. ಆದರೆ ತಕ್ಷಣವೇ ಅನರ್ಹಗೊಳಿಸಲಾಯಿತು. 2016ರಲ್ಲಿ ದುಬೈಗೆ ತೆರಳಲು ಅವಕಾಶ ನೀಡಲಾಗಿತ್ತು.

2007ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ನ್ಯಾಯಾಲಯವು 2019ರಲ್ಲಿ ಮುಷರಫ್‌ಗೆ ಮರಣದಂಡನೆ ವಿಧಿಸಿತು. ಆದರೆ ತೀರ್ಪನ್ನು ನಂತರ ರದ್ದುಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...