Homeಮುಖಪುಟಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

- Advertisement -
- Advertisement -

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರು ದುಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರನ್ನು ದುಬೈನ ಅಮೆರಿಕನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ವಯಂಪ್ರೇರಿತ ದೇಶಭಷ್ಟರಾಗಿ ಹೊರಗುಳಿದಿದ್ದ ಅವರು ದೀರ್ಘ ಕಾಲದ ಅನಾರೋಗ್ಯದ ನಂತರ ನಿಧನರಾಗಿದ್ದಾರೆ.

1999ರಲ್ಲಿ ರಕ್ತರಹಿತ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ಬಳಿಕ ಸುಮಾರು ಒಂದು ದಶಕದ ಕಾಲ ಪಾಕಿಸ್ತಾನದಲ್ಲಿ ಮುಷರಫ್ ಆಡಳಿತ ನಡೆಸಿದರು.

ಅನೇಕ ವರ್ಷಗಳು ಅಧಿಕಾರದಲ್ಲಿದ್ದರು. ಅಲ್ ಖೈದಾ ಮತ್ತು ಇತರ ಉಗ್ರಗಾಮಿ ಇಸ್ಲಾಮಿಸ್ಟ್‌ಗಳು ಅವರನ್ನು ಕನಿಷ್ಠ ಮೂರು ಬಾರಿ ಕೊಲ್ಲಲು ಪತ್ನಿಸಿದ್ದರು.

ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ತೀವ್ರ ಮಿಲಿಟರಿ ಪ್ರಯೋಗವನ್ನು ಮಾಡಿದರು. ಅಲ್ ಖೈದಾ ಮತ್ತು ಅಫ್ಘಾನ್ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮಧ್ಯಪ್ರವೇಶಿಸಿದ್ದರಿಂದ ಮುಷರಫ್ ಆಡಳಿತ ಅವನತಿ ಹೊಂದಿತು.

1943ರಲ್ಲಿ ನವದೆಹಲಿಯಲ್ಲಿ ಜನಿಸಿದವರು ಮುಷರಫ್‌. ಅವರ ಕುಟುಂಬವು 1947ರಲ್ಲಿ ಪಾಕಿಸ್ತಾನಕ್ಕೆ ಸ್ಥಳಾಂತರಗೊಂಡಾಗ ಅವರಿಗೆ ಕೇವಲ 4 ವರ್ಷ ವಯಸ್ಸಾಗಿತ್ತು. ತಂದೆ ವಿದೇಶಾಂಗ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದರು, ಅವರ ತಾಯಿ ಶಿಕ್ಷಕಿಯಾಗಿದ್ದರು.

18ನೇ ವಯಸ್ಸಿನಲ್ಲಿ ಮುಷರಫ್‌ ಸೈನ್ಯಕ್ಕೆ ಸೇರಿದರು. ಅದರ ಮುಖ್ಯಸ್ಥರಾಗುವ ಮೊದಲು ಕಮಾಂಡೋ ಘಟಕವನ್ನು ಮುನ್ನಡೆಸಿದರು. ಭಾರತದ ಹಿಡಿತದಲ್ಲಿರುವ ಕಾಶ್ಮೀರದ ಪ್ರದೇಶಗಳನ್ನು ಆಕ್ರಮಿಸುವ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ್ದಕ್ಕಾಗಿ ಅವರನ್ನು ವಜಾಗೊಳಿಸಲು ಪ್ರಯತ್ನಿಸಿದ ಅಂದಿನ ಪ್ರಧಾನಿ ನವಾಜ್ ಷರೀಫ್ ಅವರನ್ನು ಪದಚ್ಯುತಗೊಳಿಸುವ ಮೂಲಕ ಮುಷರಫ್‌ ಅಧಿಕಾರವನ್ನು ಪಡೆದಿದ್ದರು.

ಮುಷರಫ್ ಅವರ ಅಧಿಕಾರವಧಿಯಲ್ಲಿ ವಿದೇಶಿ ಹೂಡಿಕೆಯು ಪ್ರವರ್ಧಮಾನಕ್ಕೆ ಬಂದಿತು. ಪಾಕಿಸ್ತಾನವು 7.5%ರಷ್ಟು ವಾರ್ಷಿಕ ಆರ್ಥಿಕ ಬೆಳವಣಿಗೆಯನ್ನು ಕಂಡಿತು. ಇದು ವಿಶ್ವ ಬ್ಯಾಂಕ್ ಮಾಹಿತಿಯ ಪ್ರಕಾರ ಸುಮಾರು ಮೂರು ದಶಕಗಳಲ್ಲಿ ಅತ್ಯಧಿಕ ಮಟ್ಟದ್ದಾಗಿ ಗುರುತಿಸಿಕೊಂಡಿದೆ.

ಅವರ ಅಧ್ಯಕ್ಷೀಯ ಅವಧಿಯ ಬಳಿಕ ನಿರಂಕುಶ ಆಡಳಿತ ಹೆಚ್ಚಿತು. 2006ರಲ್ಲಿ, ಬಲೂಚಿಸ್ತಾನ್ ಪ್ರಾಂತ್ಯದ ಬುಡಕಟ್ಟು ಮುಖ್ಯಸ್ಥನನ್ನು ಕೊಲ್ಲಲು ಮುಷರಫ್ ಮಿಲಿಟರಿ ಕ್ರಮಕ್ಕೆ ಆದೇಶಿಸಿದರು. ಇದು ಇಂದಿಗೂ ಶಸಸ್ತ್ರ ವಿಪ್ಲವಕ್ಕೆ ಕಾರಣವಾಗಿದೆ.

ನಂತರ 2007ರಲ್ಲಿ ಪ್ರತಿಪಕ್ಷದ ನಾಯಕಿ ಬೆನಜೀರ್ ಭುಟ್ಟೊ ಅವರನ್ನು ಹತ್ಯೆ ಮಾಡಿದ ಆತ್ಮಹತ್ಯಾ ದಾಳಿಯು ಹಿಂಸಾಚಾರವನ್ನು ಪ್ರಚೋದಿಸಿತು. ನ್ಯಾಯಾಂಗವನ್ನು ಬಲಪಡಿಸುವ ಪ್ರಯತ್ನಗಳು ಪ್ರತಿಭಟನೆಗಳಿಗೆ ಕಾರಣವಾಯಿತು. ಮುತ್ತಿಗೆ ಹಾಕಿದ ಮುಷರಫ್ ಚುನಾವಣೆಗಳನ್ನು ಮುಂದೂಡಿದರು. ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

2008ರಲ್ಲಿ 11 ವರ್ಷಗಳ ಬಳಿಕ ದೇಶದ ಮೊದಲ ಪ್ರಜಾಸತ್ತಾತ್ಮಕ ಚುನಾವಣೆಗಳು ನಡೆದವು. ಮುಷರಫ್ ಅವರ ಪಕ್ಷವು ಸೋತಿತು. ಸಂಸತ್ತಿನ ದೋಷಾರೋಪಣೆಯನ್ನು ಎದುರಿಸಿತು. ಮುಷರಫ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಲಂಡನ್‌ಗೆ ಪಲಾಯನ ಮಾಡಿದರು.

ಸಂಸತ್ತಿಗೆ ಸ್ಪರ್ಧಿಸಲು ಅವರು 2013 ರಲ್ಲಿ ಪಾಕಿಸ್ತಾನಕ್ಕೆ ಮರಳಿದರು. ಆದರೆ ತಕ್ಷಣವೇ ಅನರ್ಹಗೊಳಿಸಲಾಯಿತು. 2016ರಲ್ಲಿ ದುಬೈಗೆ ತೆರಳಲು ಅವಕಾಶ ನೀಡಲಾಗಿತ್ತು.

2007ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ನ್ಯಾಯಾಲಯವು 2019ರಲ್ಲಿ ಮುಷರಫ್‌ಗೆ ಮರಣದಂಡನೆ ವಿಧಿಸಿತು. ಆದರೆ ತೀರ್ಪನ್ನು ನಂತರ ರದ್ದುಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...