Homeಮುಖಪುಟಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಸೇರಿದಂತೆ 54 ಮಂದಿ ರಾಜ್ಯಸಭಾ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಇಂದು ನಿವೃತ್ತರಾಗಿದ್ದಾರೆ.

ಅಕ್ಟೋಬರ್ 1991ರಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮೊದಲ ಬಾರಿಗೆ ಸಂಸತ್ತಿನ ಸದಸ್ಯರಾಗಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ನೇಮಕಗೊಂಡಿದ್ದರು. ನಂತರ ಅವರು 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಅವರ ನಿವೃತ್ತಿ “ಯುಗ ಅಂತ್ಯ” ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಕಾಂಗ್ರೆಸ್ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆ, MGNREGA ಯೋಜನೆಗಾಗಿ ಸಿಂಗ್ ಅವರನ್ನು ಪ್ರಶಂಸಿದ್ದಾರೆ. ದೇಶ ಮತ್ತು ವಿಶೇಷವಾಗಿ ಗ್ರಾಮೀಣ ಬಡವರು ಮಾಜಿ ಪ್ರಧಾನಿಯನ್ನು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ, ಅವರು MGNREGA ಮೂಲಕ ಗ್ರಾಮೀಣ ಬಡವರಿಗೆ ಜೀವನೋಪಾಯವನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಪ್ರಧಾನಿ ಮಾತನಾಡುವಾಗಲೆಲ್ಲಾ ಇಡೀ ಜಗತ್ತು ಅವರ ಮಾತನ್ನು ಕೇಳುತ್ತದೆ ಎಂದು ಅಧ್ಯಕ್ಷ ಒಬಾಮಾ ನಿಮ್ಮ ಬಗ್ಗೆ ಪ್ರಸ್ತಾಪಿಸಿದ್ದು ನನಗೆ ನೆನಪಿದೆ ಎಂದು ಖರ್ಗೆ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಂತರ ನೀವು ಇಂದು ರಾಜ್ಯಸಭೆಯಿಂದ ನಿವೃತ್ತರಾಗುತ್ತಿದ್ದಂತೆ, ಒಂದು ಯುಗವು ಕೊನೆಗೊಳ್ಳುತ್ತದೆ. ಕೆಲವೇ ಜನರು ನಿಮ್ಮಂತೆ ಹೆಚ್ಚು ಸಮರ್ಪಣಾ ಮತ್ತು ಹೆಚ್ಚು ಶ್ರದ್ಧೆಯಿಂದ ನಮ್ಮ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಬಹುದು. ವೈಯಕ್ತಿಕವಾಗಿ, ನಿಮ್ಮ ಸಚಿವ ಸಂಪುಟದ ಭಾಗವಾಗಿರುವುದು ನನಗೆ ಒಂದು ವಿಶೇಷವಾಗಿದೆ. ಕಳೆದ 10 ವರ್ಷಗಳಲ್ಲಿ, ನಾನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕನಾಗಿದ್ದಾಗ ನೀವು ನನಗೆ ಪ್ರಮುಖ ಸಲಹೆಗಾರರಾಗಿದ್ದೀರಿ, ನಾನು ನಿಮ್ಮನ್ನು ಗೌರವಿಸುತ್ತೇನೆ. ಕಳೆದ ಕೆಲವು ವರ್ಷಗಳಿಂದ ನೀವು ವೈಯಕ್ತಿಕ ಅನಾನುಕೂಲತೆಗಳ ನಡುವೆಯೂ ಕಾಂಗ್ರೆಸ್ ಪಕ್ಷಕ್ಕೆ ಲಭ್ಯವಾಗುವಂತೆ ಮಾಡಿದ್ದೀರಿ. ಇದಕ್ಕಾಗಿ ಪಕ್ಷ ಮತ್ತು ನಾನು ಸದಾ ಕೃತಜ್ಞರಾಗಿರುತ್ತೇವೆ ಎಂದು ಹೇಳಿದ್ದಾರೆ.

ಸೋನಿಯಾಗಾಂಧಿ ಮೊದಲ ಬಾರಿಗೆ ರಾಜಸ್ಥಾನದಿಂದ ರಾಜ್ಯಸಭೆ ಪ್ರವೇಶಿಸುತ್ತಿದ್ದು, 91 ವರ್ಷ ವಯಸ್ಸಿನ ಸಿಂಗ್ ತಮ್ಮ ಅಧಿಕಾರಾವಧಿಯನ್ನು ಏಪ್ರಿಲ್ 3ರಂದು ಕೊನೆಗೊಳಿಸುತ್ತಿದ್ದಂತೆಯೇ ಆ ಸ್ಥಾನವನ್ನು ಸೋನಿಯಾ ಗಾಂಧಿ ತುಂಬಲಿದ್ದಾರೆ.

ಇದನ್ನು ಓದಿ: ಮೋದಿ ಆಡಳಿತದಲ್ಲಿ ‘ಭ್ರಷ್ಟಾಚಾರ’ದ ತನಿಖೆ ಎದುರಿಸುತ್ತಿದ್ದ 25 ವಿರೋಧ ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆ, ಆ ಬಳಿಕ ನೆನೆಗುದಿಗೆ ಬಿದ್ದ ಹೆಚ್ಚಿನ ಪ್ರಕರಣಗಳು……

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...