HomeಮುಖಪುಟManmohan Singh | ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿ ಏಮ್ಸ್‌ ಆಸ್ಪತ್ರೆಗೆ ದಾಖಲು

Manmohan Singh | ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿ ಏಮ್ಸ್‌ ಆಸ್ಪತ್ರೆಗೆ ದಾಖಲು

- Advertisement -
- Advertisement -

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ( Manmohan Singh ) ಅವರಿಗೆ ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನಲೆಯಲ್ಲಿ ಇಂದು ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರು ಕೆಳೆದ ಎಪ್ರಿಲ್‌ನ ಕೊರೊನಾ ಎರಡನೆ ಅಲೆಯ ಸಮಯದಲ್ಲಿ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ, ಚೇತರಿಸಿಕೊಂಡಿದ್ದರು.

ಎಐಸಿಸಿ ಕಾರ್ಯದರ್ಶಿ, ಸಂವಹನಗಳ ಉಸ್ತುವಾರಿ ಪ್ರಣವ್ ಝಾ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಾಮಾನ್ಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಆಧಾರರಹಿತ ವದಂತಿಗಳನ್ನು ಪ್ರಣವ್ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: ಕೊರೊನಾ ಬಗ್ಗೆ ಸಲಹೆ; ಮನಮೋಹನ್ ಸಿಂಗ್‌ ಅವರನ್ನು ಟ್ರೋಲ್ ಮಾಡಿದ ಕೇಂದ್ರ ಸರ್ಕಾರ!

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಆಧಾರರಹಿತ ವದಂತಿ ಹರಿದಾಡುತ್ತಿದೆ. ಅವರ ಸ್ಥಿತಿ ಸ್ಥಿರವಾಗಿದೆ. ಅವರು ರೊಟೀನ್ ಚೆಕಪ್​​ಗೆ ಒಳಗಾಗುತ್ತಿದ್ದಾರೆ. ಅಗತ್ಯ ಬಂದರೆ ಹೆಚ್ಚಿನ ಮಾಹಿತಿಗಳನ್ನು ನಾವು ಹಂಚಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಸುದ್ದಿ ಬರುತ್ತಿದ್ದಂತೆ, ಕಾಂಗ್ರೆಸ್‌ನ ಪ್ರಮುಖ ನಾಯಕರು ಟ್ವಿಟರ್‌ನಲ್ಲಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮನಮೋಹನ್ ಸಿಂಗ್ ಅವರ ಚೇತರಿಕೆಗಾಗಿ ಹಾರೈಸಿದ್ದಾರೆ.

“ಏಮ್ಸ್‌ಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥನೆ” ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಆರ್ಥಿಕ ಬೇನೆಯ ಹಿಂದಿನ ಕಾರಣ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬರೆದ ವಿಶೇಷ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...