Homeಮುಖಪುಟಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆಂದು ಸಂಭ್ರಮಿಸುವವರಿಗೆ ಆರ್‌ಬಿಐ ಮಾಜಿ ಗವರ್ನರ್ ಎಚ್ಚರಿಕೆ

ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆಂದು ಸಂಭ್ರಮಿಸುವವರಿಗೆ ಆರ್‌ಬಿಐ ಮಾಜಿ ಗವರ್ನರ್ ಎಚ್ಚರಿಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವಂತೆ 2029ರ ವೇಳೆಗೆ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳವಣಿಗೆಯಾಗುತ್ತದೆ ಎಂಬುವುದು ಸಂಭ್ರಮಿಸುವ ವಿಚಾರವಲ್ಲ ಎಂದು ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್ ಡಿ ಸುಬ್ಬರಾವ್ ಎಚ್ಚರಿಕೆ ನೀಡಿದ್ದಾರೆ.

ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ಡಿ ಸುಬ್ಬರಾವ್ ಅವರು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಾ, ಆದಾಗ್ಯೂ, ಭಾರತದ ಅಪಾರ ಜನಸಂಖ್ಯೆಯು ಅದರ ಆರ್ಥಿಕ ಗಾತ್ರಕ್ಕೆ ಕೊಡುಗೆ ನೀಡುವುದರಿಂದ, ಈ ಮೈಲಿಗಲ್ಲನ್ನು ಮುಟ್ಟಿದರೂ ದೇಶವು ಬಡತನದಲ್ಲಿ ಉಳಿಯುವ ಸಾಧ್ಯತೆಯಿದೆ ಎಂದು ಸುಬ್ಬರಾವ್ ಒತ್ತಿ ಹೇಳಿದರು.

ಭಾರತವು ಜಾಗತಿಕವಾಗಿ ಐದನೇ-ಅತಿದೊಡ್ಡ ಆರ್ಥಿಕತೆಯಾಗಿದೆ. GDP 4 ಟ್ರಿಲಿಯನ್ಇದೆ. ಆದರೆ ಕಡಿಮೆ ತಲಾ ಆದಾಯ ಕಡಿಮೆ ಅಂದರೆ 2,600 ಇದ್ದು, ಅಂತರಾಷ್ಟ್ರೀಯವಾಗಿ 139ನೇ ಸ್ಥಾನದಲ್ಲಿದೆ. ಇದಲ್ಲದೆ ಬ್ರಿಕ್ಸ್ ಮತ್ತು ಜಿ-20 ಸದಸ್ಯ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತವು ಕಡಿಮೆ ಶ್ರೀಮಂತ ರಾಷ್ಟ್ರವಾಗಿದೆ ಎಂದು ಹೇಳಿದ್ದಾರೆ.

ನನ್ನ ದೃಷ್ಟಿಯಲ್ಲಿ, ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆ ಎನ್ನುವುದು ಅಸಾಧ್ಯವಲ್ಲ, ಆದರೆ ಇದನ್ನು ಆಚರಣೆ ಮಾಡಬಾರದು. ಏಕೆಂದರೆ ನಾವು 1.40 ಶತಕೋಟಿ ಜನರಿರುವುದರಿಂದ ನಾವು ದೊಡ್ಡ ಆರ್ಥಿಕತೆಯಾಗಿದ್ದೇವೆ ಮತ್ತು ಜನರು ಉತ್ಪಾದನೆಯ ಭಾಗವಾಗಿದ್ದಾರೆ. ಆದ್ದರಿಂದ ನಾವು ದೊಡ್ಡ ಆರ್ಥಿಕತೆ ಏಕೆಂದರೆ ನಮ್ಮಲ್ಲಿ ಜನರಿದ್ದಾರೆ, ಆದರೆ ನಮ್ಮ ದೇಶ ಬಡ ದೇಶವಾಗಿದೆ ಎಂದು ಸುಬ್ಬರಾವ್ ಹೇಳಿದ್ದಾರೆ.

ಸುಬ್ಬರಾವ್ ಅವರು ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಮತ್ತು ಪ್ರಯೋಜನಗಳ ಸಮಾನ ವಿತರಣೆಯ ಅಗತ್ಯವನ್ನು ಒತ್ತಿ ಹೇಳಿದರು. ಹೆಚ್ಚುವರಿಯಾಗಿ, 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕೆಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಅವರು ನೆನಪಿಸಿಕೊಂಡಿದ್ದಾರೆ, ಈ ಗುರಿಯನ್ನು ಸಾಧಿಸಲು ಕಾನೂನಿನ ನಿಯಮ, ಹೊಣೆಗಾರಿಕೆ ಮತ್ತು ಸ್ವತಂತ್ರ ಸಂಸ್ಥೆಗಳ ಅಗತ್ಯತೆಗಳನ್ನು ಒತ್ತಿ ಹೇಳಿದ್ದಾರೆ.

ಇದನ್ನು ಓದಿ: ಕೇಂದ್ರಿಯ ವಿವಿ ಹಾಸ್ಟೆಲ್‌ಗೆ ‘ಸ್ವಾತಂತ್ರ ಹೋರಾಟಗಾರ್ತಿ’ಯ ಹೆಸರು ಕೈಬಿಟ್ಟು ‘ಆರೆಸ್ಸೆಸ್‌ ನಾಯಕಿ’ಯ ಹೆಸರು ನಾಮಕರಣ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...