Homeಮುಖಪುಟಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರಿದ ಟಿಎಂಸಿಯ ಹಿರಿಯ ಶಾಸಕ

ಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರಿದ ಟಿಎಂಸಿಯ ಹಿರಿಯ ಶಾಸಕ

ಪಶ್ಚಿಮ ಬಂಗಾಳದಿಂದ ಪಟ್ಟಿ ಹೋಗುತ್ತಿದೆ. ಅದರಂತೆ ಇಡಿ ದಾಳಿ ನಡೆಯುತ್ತಿದೆ ಎಂದ ಟಿಎಂಸಿ

- Advertisement -
- Advertisement -

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ)ದಿಂದ ಚುನಾವಣೆಗೆ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿದ್ದ ತಪಸ್ ರಾಯ್ ಬುಧವಾರ (ಮಾ.6) ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕೊಲ್ಕತ್ತಾದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಂದಾರ್ ಅವರು ತಪಸ್ ರಾಯ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

“ಟಿಎಂಸಿಯ ದುರಾಡಳಿತ ಮತ್ತು ದೌರ್ಜನ್ಯದ ವಿರುದ್ಧ ಹೋರಾಡಲು ನಾನು ಇಂದು ಬಿಜೆಪಿಗೆ ಸೇರಿದ್ದೇನೆ” ಎಂದು ಪಕ್ಷ ಸೇರ್ಪಡೆ ಬಳಿಕ ತಪಸ್ ರಾಯ್ ಹೇಳಿದ್ದಾರೆ.

“ಮುನ್ಸಿಪಲ್ ಉದ್ಯೋಗ ಹಗರಣ ಪ್ರಕರಣ ಸಂಬಂಧ ಜನವರಿ 12ರಂದು ತನ್ನ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು. ಆಗ ಟಿಎಂಸಿ ಪಕ್ಷ ನನ್ನ ಸಹಾಯಕ್ಕೆ ಬಂದಿಲ್ಲ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮೌನ ವಹಿಸಿದ್ದರು” ಎಂದು ತಪಸ್ ರಾಯ್ ವಾಗ್ದಾಳಿ ನಡೆಸಿದ್ದಾರೆ.

“ತನ್ನ ವೈಯುಕ್ತಿಕ ಲಾಭಕ್ಕಾಗಿ ತತ್ವ ಸಿದ್ದಾಂತಗಳನ್ನು ಮರೆತು ತಪಸ್ ರಾಯ್ ಟಿಎಂಸಿ ತೊರೆದಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಪಕ್ಷವನ್ನು ತೊರೆದ ತಪಸ್ ರಾಯ್ ಅವರಂತಹ ದೇಶ ದ್ರೋಹಿಗಳನ್ನು ಬಂಗಾಳದ ಜನರು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಟಿಎಂಸಿ ನಾಯಕ ಸಂತಾನು ಸೇನ್ ಹೇಳಿದ್ದಾರೆ.

ಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರ್ಪಡೆ:

ಮುನ್ಸಿಪಲ್ ಉದ್ಯೋಗ ಹಗರಣ ಪ್ರಕರಣ ಸಂಬಂಧ ಜನವರಿ 12ರಂದು ತಪಸ್ ರಾಯ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದರು. ಅದೇ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಕಳ್ಳರ ಮನೆಗಳ ಮೇಲೆ ಇಡಿ ದಾಳಿ ನಡೆಯಲಿವೆ. ಬಂಗಾಳದ ಯುವಕರು ಮತ್ತು ಇತರ ಜನರು ಅವರು ಕಂಬಿ ಹಿಂದೆ ಹೋಗಬೇಕೆಂದು ಬಯಸುತ್ತಿದ್ದಾರೆ ಎಂದು ಹೇಳಿದ್ದರು.

ತಪಸ್ ರಾಯ್ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ. ಪಶ್ಚಿಮ ಬಂಗಾಳದಿಂದ ದೆಹಲಿ ಪಟ್ಟಿ ಹೋಗುತ್ತಿದೆ. ಆ ಪಟ್ಟಿ ಪ್ರಕಾರ ಬಿಜೆಪಿ ಹೇಳಿದಂತೆ ಇಡಿ ದಾಳಿ ನಡೆಸುತ್ತಿದೆ ಎಂದು ಜನವರಿ 12ರಂದು ಟಿಎಂಸಿ ಆರೋಪಿಸಿತ್ತು.

ಈ ನಡುವೆ ಮಾರ್ಚ್ 4ರಂದು ತಪಸ್ ರಾಯ್ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸುವೇಂದು ಅಧಿಕಾರಿ, “ತಪಸ್ ರಾಯ್ ನಮ್ಮ ರಾಜ್ಯದ ಅತ್ಯಂತ ಹಿರಿಯ ನಾಯಕ. ಅವರು ಮಾಜಿ ಮಂತ್ರಿ ಮತ್ತು 4- 5 ಬಾರಿ ಶಾಸಕರಾದವರು. ಪಕ್ಷಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ” ಎಂದಿದ್ದರು.

ನಿನ್ನೆ (ಮಾರ್ಚ್ 6) ತಪಸ್ ರಾಯ್ ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜನವರಿ 12ರಂದು ಸುವೇಂದು ಅಧಿಕಾರಿ ಇಡಿ ದಾಳಿಯಾಗಲಿದೆ ಎಂದು ಹೇಳಿದ ಬೆನ್ನಲ್ಲೇ ತಪಸ್ ರಾಯ್ ಮನೆ ಇಡಿ ದಾಳಿ ನಡೆದಿರುವುದು ಮತ್ತು ತಪಸ್ ರಾಯ್ ಅನ್ನು ಪರೋಕ್ಷವಾಗಿ ಕಳ್ಳ ಎಂದು ಸಂಭೋಂದಿಸಿದ್ದ ಸುವೇಂದು ಅಧಿಕಾರಿ, ಅವರು ಟಿಎಂಸಿಗೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಲು ಮುಂದಾದಾಗ ತಪಸ್ ರಾಯ್ ಹಿರಿಯ ನಾಯಕ ಎಂದು ಹೊಗಳಿರುವುದು ಇಲ್ಲಿ ಗಮನಾರ್ಹ ಸಂಗತಿ.

ಏನಿದು ಮುನ್ಸಿಪಲ್ ನೇಮಕಾತಿ ಹಗರಣ? 

ಜನವರಿ 12ರಂದು ತಪಸ್ ರಾಯ್ ಮತ್ತು ಇತರ ಇಬ್ಬರು ಟಿಎಂಸಿ ನಾಯಕರ ಮನೆ ಮೇಲೆ ಇಡಿ ದಾಳಿ ಮಾಡಿತ್ತು. ಮುನ್ಸಿಪಲ್ ನೇಮಕಾತಿ ಹಗರಣ ಎಂದು ಹೇಳಲಾಗುವ, ಸ್ಥಳೀಯ ಸಂಸ್ಥೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿತ್ತು.

ಶಾಲಾ ನೇಮಕಾತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಮುನ್ಸಿಪಲ್ ನೇಮಕಾತಿ ಹಗರಣವನ್ನು ಇಡಿ ಬಯಲಿಗೆಳೆದಿತ್ತು. ಇದು ಸುಮಾರು 200 ಕೋಟಿ ಮೌಲ್ಯದ ಅವ್ಯವಹಾರ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...