Homeಮುಖಪುಟಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರಿದ ಟಿಎಂಸಿಯ ಹಿರಿಯ ಶಾಸಕ

ಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರಿದ ಟಿಎಂಸಿಯ ಹಿರಿಯ ಶಾಸಕ

ಪಶ್ಚಿಮ ಬಂಗಾಳದಿಂದ ಪಟ್ಟಿ ಹೋಗುತ್ತಿದೆ. ಅದರಂತೆ ಇಡಿ ದಾಳಿ ನಡೆಯುತ್ತಿದೆ ಎಂದ ಟಿಎಂಸಿ

- Advertisement -
- Advertisement -

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ)ದಿಂದ ಚುನಾವಣೆಗೆ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿದ್ದ ತಪಸ್ ರಾಯ್ ಬುಧವಾರ (ಮಾ.6) ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕೊಲ್ಕತ್ತಾದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಂದಾರ್ ಅವರು ತಪಸ್ ರಾಯ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

“ಟಿಎಂಸಿಯ ದುರಾಡಳಿತ ಮತ್ತು ದೌರ್ಜನ್ಯದ ವಿರುದ್ಧ ಹೋರಾಡಲು ನಾನು ಇಂದು ಬಿಜೆಪಿಗೆ ಸೇರಿದ್ದೇನೆ” ಎಂದು ಪಕ್ಷ ಸೇರ್ಪಡೆ ಬಳಿಕ ತಪಸ್ ರಾಯ್ ಹೇಳಿದ್ದಾರೆ.

“ಮುನ್ಸಿಪಲ್ ಉದ್ಯೋಗ ಹಗರಣ ಪ್ರಕರಣ ಸಂಬಂಧ ಜನವರಿ 12ರಂದು ತನ್ನ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು. ಆಗ ಟಿಎಂಸಿ ಪಕ್ಷ ನನ್ನ ಸಹಾಯಕ್ಕೆ ಬಂದಿಲ್ಲ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮೌನ ವಹಿಸಿದ್ದರು” ಎಂದು ತಪಸ್ ರಾಯ್ ವಾಗ್ದಾಳಿ ನಡೆಸಿದ್ದಾರೆ.

“ತನ್ನ ವೈಯುಕ್ತಿಕ ಲಾಭಕ್ಕಾಗಿ ತತ್ವ ಸಿದ್ದಾಂತಗಳನ್ನು ಮರೆತು ತಪಸ್ ರಾಯ್ ಟಿಎಂಸಿ ತೊರೆದಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಪಕ್ಷವನ್ನು ತೊರೆದ ತಪಸ್ ರಾಯ್ ಅವರಂತಹ ದೇಶ ದ್ರೋಹಿಗಳನ್ನು ಬಂಗಾಳದ ಜನರು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಟಿಎಂಸಿ ನಾಯಕ ಸಂತಾನು ಸೇನ್ ಹೇಳಿದ್ದಾರೆ.

ಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರ್ಪಡೆ:

ಮುನ್ಸಿಪಲ್ ಉದ್ಯೋಗ ಹಗರಣ ಪ್ರಕರಣ ಸಂಬಂಧ ಜನವರಿ 12ರಂದು ತಪಸ್ ರಾಯ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದರು. ಅದೇ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಕಳ್ಳರ ಮನೆಗಳ ಮೇಲೆ ಇಡಿ ದಾಳಿ ನಡೆಯಲಿವೆ. ಬಂಗಾಳದ ಯುವಕರು ಮತ್ತು ಇತರ ಜನರು ಅವರು ಕಂಬಿ ಹಿಂದೆ ಹೋಗಬೇಕೆಂದು ಬಯಸುತ್ತಿದ್ದಾರೆ ಎಂದು ಹೇಳಿದ್ದರು.

ತಪಸ್ ರಾಯ್ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ. ಪಶ್ಚಿಮ ಬಂಗಾಳದಿಂದ ದೆಹಲಿ ಪಟ್ಟಿ ಹೋಗುತ್ತಿದೆ. ಆ ಪಟ್ಟಿ ಪ್ರಕಾರ ಬಿಜೆಪಿ ಹೇಳಿದಂತೆ ಇಡಿ ದಾಳಿ ನಡೆಸುತ್ತಿದೆ ಎಂದು ಜನವರಿ 12ರಂದು ಟಿಎಂಸಿ ಆರೋಪಿಸಿತ್ತು.

ಈ ನಡುವೆ ಮಾರ್ಚ್ 4ರಂದು ತಪಸ್ ರಾಯ್ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸುವೇಂದು ಅಧಿಕಾರಿ, “ತಪಸ್ ರಾಯ್ ನಮ್ಮ ರಾಜ್ಯದ ಅತ್ಯಂತ ಹಿರಿಯ ನಾಯಕ. ಅವರು ಮಾಜಿ ಮಂತ್ರಿ ಮತ್ತು 4- 5 ಬಾರಿ ಶಾಸಕರಾದವರು. ಪಕ್ಷಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ” ಎಂದಿದ್ದರು.

ನಿನ್ನೆ (ಮಾರ್ಚ್ 6) ತಪಸ್ ರಾಯ್ ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜನವರಿ 12ರಂದು ಸುವೇಂದು ಅಧಿಕಾರಿ ಇಡಿ ದಾಳಿಯಾಗಲಿದೆ ಎಂದು ಹೇಳಿದ ಬೆನ್ನಲ್ಲೇ ತಪಸ್ ರಾಯ್ ಮನೆ ಇಡಿ ದಾಳಿ ನಡೆದಿರುವುದು ಮತ್ತು ತಪಸ್ ರಾಯ್ ಅನ್ನು ಪರೋಕ್ಷವಾಗಿ ಕಳ್ಳ ಎಂದು ಸಂಭೋಂದಿಸಿದ್ದ ಸುವೇಂದು ಅಧಿಕಾರಿ, ಅವರು ಟಿಎಂಸಿಗೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಲು ಮುಂದಾದಾಗ ತಪಸ್ ರಾಯ್ ಹಿರಿಯ ನಾಯಕ ಎಂದು ಹೊಗಳಿರುವುದು ಇಲ್ಲಿ ಗಮನಾರ್ಹ ಸಂಗತಿ.

ಏನಿದು ಮುನ್ಸಿಪಲ್ ನೇಮಕಾತಿ ಹಗರಣ? 

ಜನವರಿ 12ರಂದು ತಪಸ್ ರಾಯ್ ಮತ್ತು ಇತರ ಇಬ್ಬರು ಟಿಎಂಸಿ ನಾಯಕರ ಮನೆ ಮೇಲೆ ಇಡಿ ದಾಳಿ ಮಾಡಿತ್ತು. ಮುನ್ಸಿಪಲ್ ನೇಮಕಾತಿ ಹಗರಣ ಎಂದು ಹೇಳಲಾಗುವ, ಸ್ಥಳೀಯ ಸಂಸ್ಥೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿತ್ತು.

ಶಾಲಾ ನೇಮಕಾತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಮುನ್ಸಿಪಲ್ ನೇಮಕಾತಿ ಹಗರಣವನ್ನು ಇಡಿ ಬಯಲಿಗೆಳೆದಿತ್ತು. ಇದು ಸುಮಾರು 200 ಕೋಟಿ ಮೌಲ್ಯದ ಅವ್ಯವಹಾರ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...