HomeಮುಖಪುಟTMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ ಮೇಲ್ಮನೆ ಪ್ರವೇಶಿಸಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಟಿಎಂಸಿಗೆ ಹಾಗೂ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುಸ್ಮಿತಾ ದೇವ್, ಸುಖೇಂದು ಶೇಖರ್ ರಾಯ್ ಮತ್ತು ಪ್ರಕಾಶ್ ಚಿಕ್ ಬರೈಕ್ ಅವರು ಗುರುವಾರ ಅಧಿಕೃತವಾಗಿ ಕಮಲ ಪಾಳಯ ಸೇರಿದ್ದಾರೆ. ಅವರು ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ, ಅವರು ಖಾಲಿ ಮಾಡಿದ್ದ ಅದೇ ಮೂರು ಸ್ಥಾನಗಳ ಮುಂಬರುವ ಉಪಚುನಾವಣೆಗೆ ಬಿಜೆಪಿಯು ಅವರನ್ನೇ ತನ್ನ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ! ಈ ಸ್ಥಾನಗಳಿಗೆ ಜುಲೈ 24 ರಂದು ಮರುಚುನಾವಣೆ ನಡೆಯಲಿದೆ.

TMC ಯನ್ನು ಮುಗಿಸುವ ಬಿಜೆಪಿಯ ‘ಆಪರೇಷನ್’ ಇನ್ನೂ ಮುಗಿದಿಲ್ಲ ಎಂದು ದೆಹಲಿಯ ರಾಜಕೀಯ ಮೂಲಗಳು ತಿಳಿಸಿವೆ. ಮತ್ತೊಬ್ಬ ಟಿಎಂಸಿ ಸಂಸದೆ ರುಕ್ಮಿಣಿ ಮಲ್ಲಿಕ್ ಈಗಾಗಲೇ ಇಮೇಲ್ ಮೂಲಕ ರಾಜ್ಯಸಭಾ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದು, ಶೀಘ್ರದಲ್ಲೇ ಖುದ್ದಾಗಿ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ. ಇನ್ನುಳಿದ ಒಂಬತ್ತು ಟಿಎಂಸಿ ರಾಜ್ಯಸಭಾ ಸಂಸದರ ಪೈಕಿ ಇಬ್ಬರು ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.

TMC ನಾಯಕರು ಭ್ರಷ್ಟಾಚಾರ ಮತ್ತು ಗೂಂಡಾಗಿರಿಯಲ್ಲಿ ತೊಡಗಿದ್ದಾರೆ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂಬ ಬಿಜೆಪಿಯ ಸಾರ್ವಜನಿಕ ನಿಲುವಿಗೆ ಈ ಬೆಳವಣಿಗೆ ಸಂಪೂರ್ಣ ವಿರುದ್ಧವಾಗಿದೆ. ಆದರೆ, ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಇದನ್ನು “ಅಪವಾದ” ಎಂದು ಕರೆದು ಸಮರ್ಥಿಸಿಕೊಂಡಿದ್ದಾರೆ. ಅವರು ‘ಒಳ್ಳೆಯ ಟಿಎಂಸಿ ಮತ್ತು ಕೆಟ್ಟ ಟಿಎಂಸಿ’ ಎಂಬ ಹೊಸ ಸಿದ್ಧಾಂತವನ್ನು ಮಂಡಿಸಿದ್ದು, ‘ಭಾಲೋ’ (ಒಳ್ಳೆಯ) ಟಿಎಂಸಿ ನಾಯಕರನ್ನು ಪಕ್ಷಕ್ಕೆ ಕರೆತರಲು ನಮಗೆ ಯಾವುದೇ ಹಿಂಜರಿಕೆಯಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ, “ಇದು ಒಂದು ವಿಶಿಷ್ಟ ಪ್ರಕರಣವಾಗಿದ್ದು, ಪಕ್ಷದ ಹಳೆಯ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭ್ರಷ್ಟಾಚಾರದಲ್ಲಿ ಭಾಗಿಯಾದ ಟಿಎಂಸಿ ನಾಯಕರಿಗೆ ನಮ್ಮ ಪಕ್ಷದ ಬಾಗಿಲು ಎಂದಿಗೂ ಮುಚ್ಚಿರುತ್ತದೆ. ಆದರೆ, ಅಧಿಕಾರ ದುರ್ಬಳಕೆ ಮಾಡಿಕೊಳ್ಳದ ಮತ್ತು ಭ್ರಷ್ಟಾಚಾರ ರಹಿತ ನಾಯಕರು ಟಿಎಂಸಿ ವಿರುದ್ಧದ ಹೋರಾಟಕ್ಕೆ ಹಾಗೂ ಬಂಗಾಳದ ಮರುನಿರ್ಮಾಣಕ್ಕೆ ನಮ್ಮೊಂದಿಗೆ ಕೈಜೋಡಿಸಲು ಯಾವಾಗಲೂ ಮುಕ್ತ ಅವಕಾಶವಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆಯ ನಂತರ ತಮ್ಮ ಭವಿಷ್ಯದ ಬಗ್ಗೆ ಗೊಂದಲದಲ್ಲಿದ್ದ ವಿರೋಧ ಪಕ್ಷದ ನಾಯಕರಿಗೆ, ಬಿಜೆಪಿಗೆ ಬಂದರೆ ಕೇವಲ ಆಶ್ರಯ ಮಾತ್ರವಲ್ಲ, ತಕ್ಕ ಗೌರವ ಮತ್ತು ಸ್ಥಾನಮಾನವೂ ಸಿಗುತ್ತದೆ ಎಂಬ ಬಲವಾದ ಸಂದೇಶ ರವಾನೆಯಾದಂತಾಗಿದೆ.

ವಿಭಜನೆಗೂ ಮುನ್ನ ರಾಜ್ಯಸಭೆಯಲ್ಲಿ ಟಿಎಂಸಿ 13 ಸಂಸದರನ್ನು ಹೊಂದಿತ್ತು. ಕಾನೂನುಬದ್ಧವಾಗಿ ಪಕ್ಷ ಒಡೆದು ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳಿಸಲು ಕನಿಷ್ಠ 9 ಸಂಸದರ (ಮೂರನೇ ಎರಡರಷ್ಟು) ಅಗತ್ಯವಿತ್ತು. ಸದ್ಯಕ್ಕೆ ಆ ಸಂಖ್ಯೆ ಹೊಂದಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಹೊಸ ತಂತ್ರ ಅನುಸರಿಸಿದೆ. ಮೊದಲು ಸಂಸದರಿಂದ ರಾಜೀನಾಮೆ ಕೊಡಿಸುವುದು, ನಂತರ ತಮ್ಮದೇ ಚಿಹ್ನೆಯಡಿ ಅವರನ್ನು ಕಣಕ್ಕಿಳಿಸಿ ಗೆಲ್ಲಿಸುವುದು ಈ ಪ್ಲಾನ್. ಇದರಿಂದ ಟಿಎಂಸಿ ಬಲ ಕುಗ್ಗುವುದರ ಜೊತೆಗೆ ರಾಜ್ಯಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ಹೆಚ್ಚಾಗಲಿದೆ.

ಜುಲೈ 24 ರ ನಂತರ ರಾಜ್ಯಸಭೆಯಲ್ಲಿ ಬಿಜೆಪಿಯ ಸ್ವಂತ ಬಲ 117 ಕ್ಕೆ ಏರಲಿದ್ದು, ಇದು ಪಕ್ಷದ ಇತಿಹಾಸದಲ್ಲೇ ಗರಿಷ್ಠ ಸೀಟುಗಳಾಗಿವೆ. ಇದರೊಂದಿಗೆ ಬಿಜೆಪಿ ಸ್ವಂತ ಬಲದ ಸರಳ ಬಹುಮತಕ್ಕೆ (123) ಕೇವಲ ಆರು ಸ್ಥಾನಗಳಷ್ಟೇ ಬಾಕಿ ಇರಲಿದೆ. ನಾಮನಿರ್ದೇಶಿತ, ಪಕ್ಷೇತರರು ಹಾಗೂ ಮೈತ್ರಿಪಕ್ಷಗಳ (TDP, AIADMK, JDU, NCP ಇತ್ಯಾದಿ) ಬೆಂಬಲದೊಂದಿಗೆ ಎನ್‌ಡಿಎ (NDA) ಮೈತ್ರಿಕೂಟದ ಒಟ್ಟು ಬಲ 153 ಕ್ಕೆ ತಲುಪಲಿದ್ದು, ಮೂರನೇ ಎರಡರಷ್ಟು ಬಹುಮತಕ್ಕೆ (164) ಕೇವಲ 11 ಸ್ಥಾನಗಳಷ್ಟೇ ಬಾಕಿ ಉಳಿಯಲಿವೆ.

ಕೇವಲ ರಾಜ್ಯಸಭೆ ಮಾತ್ರವಲ್ಲದೇ, ಲೋಕಸಭೆಯಲ್ಲೂ ಟಿಎಂಸಿಯನ್ನು ಒಡೆಯಲು ಬಿಜೆಪಿ ಭಿನ್ನ ತಂತ್ರ ಹೂಡಿದೆ. ಪಕ್ಷದ 28 ಲೋಕಸಭಾ ಸಂಸದರ ಪೈಕಿ 20 ಸಂಸದರು ಈಗಾಗಲೇ ಮಮತಾ ನಾಯಕತ್ವದ ವಿರುದ್ಧ ಬಂಡಾಯ ಎದ್ದಿದ್ದಾರೆ. ಅವರು ‘ಎನ್‌ಸಿಪಿಐ’ (NCPI) ಎಂಬ ಅಷ್ಟಾಗಿ ಪರಿಚಿತವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ. ಇದಕ್ಕೆ ಈಗ ಲೋಕಸಭಾ ಸ್ಪೀಕರ್ ಅವರ ಅಧಿಕೃತ ಅನುಮೋದನೆ ಬಾಕಿಯಿದೆ.

ಮಮತಾ ಬ್ಯಾನರ್ಜಿ ಅವರಿಂದ ಟಿಎಂಸಿ ಪಕ್ಷವನ್ನೇ ಕಸಿದುಕೊಳ್ಳಲು ದೆಹಲಿಯಿಂದ ಕೋಲ್ಕತ್ತಾವರೆಗೆ ವ್ಯವಸ್ಥಿತ ಚಕ್ರವ್ಯೂಹ ರಚಿಸಲಾಗಿದೆ. ಕೋಲ್ಕತ್ತಾದಲ್ಲಿ 60 ಕ್ಕೂ ಹೆಚ್ಚು ಶಾಸಕರು ಋತಬ್ರತ ಬ್ಯಾನರ್ಜಿ ನೇತೃತ್ವದಲ್ಲಿ ಬಂಡಾಯ ಎದ್ದಿದ್ದು, ಅಲ್ಲಿನ ವಿಧಾನಸಭೆ ಸ್ಪೀಕರ್ ಈಗಾಗಲೇ ಋತಬ್ರತ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಗುರುತಿಸಿದ್ದಾರೆ! ಈ ಬಂಡಾಯ ಬಣವೇ ‘ನೈಜ ಟಿಎಂಸಿ’ ಎಂದು ಚುನಾವಣಾ ಆಯೋಗದ ಮುಂದೆ ಪಕ್ಷದ ಚಿಹ್ನೆಗಾಗಿ ಹಕ್ಕು ಮಂಡಿಸಿದೆ.

ಹೀಗಾಗಿ ದೀದಿ ಈಗ ಏಕಕಾಲದಲ್ಲಿ ಎರಡು ರೀತಿಯ ಕಠಿಣ ಕಾನೂನು ಹೋರಾಟ ನಡೆಸಬೇಕಿದೆ. ಮೊದಲನೆಯದ್ದು ತಮ್ಮದೇ ಬಣ ‘ನೈಜ ಟಿಎಂಸಿ’ ಮತ್ತು ಪಕ್ಷದ ಚಿಹ್ನೆ ತಮಗೆ ಸೇರಬೇಕು ಎಂದು ಚುನಾವಣಾ ಆಯೋಗದ ಮುಂದೆ ಸಾಬೀತುಪಡಿಸುವುದು. ಎರಡನೆಯದ್ದು ಪಕ್ಷಾಂತರ ನಿಷೇಧ ಕಾಯ್ದೆಯಡಿ ಲೋಕಸಭೆಯ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಮುಂದೆ ಹೋರಾಡುವುದು. ಆದರೆ ಸದ್ಯಕ್ಕೆ ಮಮತಾ ಬಳಲಿದಂತೆ ಕಾಣುತ್ತಿದ್ದು ಮುಂದೆ ಯಾವ ತೀರ್ಮಾನ ಕೈಗೊಳ್ಳುತ್ತಾರೋ ಕಾದು ನೋಡಬೇಕಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

    ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

    ‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

    ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

    ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

    ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

    ‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

    ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

    ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

    ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

    SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

    ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

    ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

    ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

    ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

    ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

    ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

    ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

    ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...