HomeಮುಖಪುಟTMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ ಮೇಲ್ಮನೆ ಪ್ರವೇಶಿಸಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಟಿಎಂಸಿಗೆ ಹಾಗೂ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುಸ್ಮಿತಾ ದೇವ್, ಸುಖೇಂದು ಶೇಖರ್ ರಾಯ್ ಮತ್ತು ಪ್ರಕಾಶ್ ಚಿಕ್ ಬರೈಕ್ ಅವರು ಗುರುವಾರ ಅಧಿಕೃತವಾಗಿ ಕಮಲ ಪಾಳಯ ಸೇರಿದ್ದಾರೆ. ಅವರು ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ, ಅವರು ಖಾಲಿ ಮಾಡಿದ್ದ ಅದೇ ಮೂರು ಸ್ಥಾನಗಳ ಮುಂಬರುವ ಉಪಚುನಾವಣೆಗೆ ಬಿಜೆಪಿಯು ಅವರನ್ನೇ ತನ್ನ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ! ಈ ಸ್ಥಾನಗಳಿಗೆ ಜುಲೈ 24 ರಂದು ಮರುಚುನಾವಣೆ ನಡೆಯಲಿದೆ.

TMC ಯನ್ನು ಮುಗಿಸುವ ಬಿಜೆಪಿಯ ‘ಆಪರೇಷನ್’ ಇನ್ನೂ ಮುಗಿದಿಲ್ಲ ಎಂದು ದೆಹಲಿಯ ರಾಜಕೀಯ ಮೂಲಗಳು ತಿಳಿಸಿವೆ. ಮತ್ತೊಬ್ಬ ಟಿಎಂಸಿ ಸಂಸದೆ ರುಕ್ಮಿಣಿ ಮಲ್ಲಿಕ್ ಈಗಾಗಲೇ ಇಮೇಲ್ ಮೂಲಕ ರಾಜ್ಯಸಭಾ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದು, ಶೀಘ್ರದಲ್ಲೇ ಖುದ್ದಾಗಿ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ. ಇನ್ನುಳಿದ ಒಂಬತ್ತು ಟಿಎಂಸಿ ರಾಜ್ಯಸಭಾ ಸಂಸದರ ಪೈಕಿ ಇಬ್ಬರು ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.

TMC ನಾಯಕರು ಭ್ರಷ್ಟಾಚಾರ ಮತ್ತು ಗೂಂಡಾಗಿರಿಯಲ್ಲಿ ತೊಡಗಿದ್ದಾರೆ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂಬ ಬಿಜೆಪಿಯ ಸಾರ್ವಜನಿಕ ನಿಲುವಿಗೆ ಈ ಬೆಳವಣಿಗೆ ಸಂಪೂರ್ಣ ವಿರುದ್ಧವಾಗಿದೆ. ಆದರೆ, ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಇದನ್ನು “ಅಪವಾದ” ಎಂದು ಕರೆದು ಸಮರ್ಥಿಸಿಕೊಂಡಿದ್ದಾರೆ. ಅವರು ‘ಒಳ್ಳೆಯ ಟಿಎಂಸಿ ಮತ್ತು ಕೆಟ್ಟ ಟಿಎಂಸಿ’ ಎಂಬ ಹೊಸ ಸಿದ್ಧಾಂತವನ್ನು ಮಂಡಿಸಿದ್ದು, ‘ಭಾಲೋ’ (ಒಳ್ಳೆಯ) ಟಿಎಂಸಿ ನಾಯಕರನ್ನು ಪಕ್ಷಕ್ಕೆ ಕರೆತರಲು ನಮಗೆ ಯಾವುದೇ ಹಿಂಜರಿಕೆಯಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ, “ಇದು ಒಂದು ವಿಶಿಷ್ಟ ಪ್ರಕರಣವಾಗಿದ್ದು, ಪಕ್ಷದ ಹಳೆಯ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭ್ರಷ್ಟಾಚಾರದಲ್ಲಿ ಭಾಗಿಯಾದ ಟಿಎಂಸಿ ನಾಯಕರಿಗೆ ನಮ್ಮ ಪಕ್ಷದ ಬಾಗಿಲು ಎಂದಿಗೂ ಮುಚ್ಚಿರುತ್ತದೆ. ಆದರೆ, ಅಧಿಕಾರ ದುರ್ಬಳಕೆ ಮಾಡಿಕೊಳ್ಳದ ಮತ್ತು ಭ್ರಷ್ಟಾಚಾರ ರಹಿತ ನಾಯಕರು ಟಿಎಂಸಿ ವಿರುದ್ಧದ ಹೋರಾಟಕ್ಕೆ ಹಾಗೂ ಬಂಗಾಳದ ಮರುನಿರ್ಮಾಣಕ್ಕೆ ನಮ್ಮೊಂದಿಗೆ ಕೈಜೋಡಿಸಲು ಯಾವಾಗಲೂ ಮುಕ್ತ ಅವಕಾಶವಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆಯ ನಂತರ ತಮ್ಮ ಭವಿಷ್ಯದ ಬಗ್ಗೆ ಗೊಂದಲದಲ್ಲಿದ್ದ ವಿರೋಧ ಪಕ್ಷದ ನಾಯಕರಿಗೆ, ಬಿಜೆಪಿಗೆ ಬಂದರೆ ಕೇವಲ ಆಶ್ರಯ ಮಾತ್ರವಲ್ಲ, ತಕ್ಕ ಗೌರವ ಮತ್ತು ಸ್ಥಾನಮಾನವೂ ಸಿಗುತ್ತದೆ ಎಂಬ ಬಲವಾದ ಸಂದೇಶ ರವಾನೆಯಾದಂತಾಗಿದೆ.

ವಿಭಜನೆಗೂ ಮುನ್ನ ರಾಜ್ಯಸಭೆಯಲ್ಲಿ ಟಿಎಂಸಿ 13 ಸಂಸದರನ್ನು ಹೊಂದಿತ್ತು. ಕಾನೂನುಬದ್ಧವಾಗಿ ಪಕ್ಷ ಒಡೆದು ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳಿಸಲು ಕನಿಷ್ಠ 9 ಸಂಸದರ (ಮೂರನೇ ಎರಡರಷ್ಟು) ಅಗತ್ಯವಿತ್ತು. ಸದ್ಯಕ್ಕೆ ಆ ಸಂಖ್ಯೆ ಹೊಂದಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಹೊಸ ತಂತ್ರ ಅನುಸರಿಸಿದೆ. ಮೊದಲು ಸಂಸದರಿಂದ ರಾಜೀನಾಮೆ ಕೊಡಿಸುವುದು, ನಂತರ ತಮ್ಮದೇ ಚಿಹ್ನೆಯಡಿ ಅವರನ್ನು ಕಣಕ್ಕಿಳಿಸಿ ಗೆಲ್ಲಿಸುವುದು ಈ ಪ್ಲಾನ್. ಇದರಿಂದ ಟಿಎಂಸಿ ಬಲ ಕುಗ್ಗುವುದರ ಜೊತೆಗೆ ರಾಜ್ಯಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ಹೆಚ್ಚಾಗಲಿದೆ.

ಜುಲೈ 24 ರ ನಂತರ ರಾಜ್ಯಸಭೆಯಲ್ಲಿ ಬಿಜೆಪಿಯ ಸ್ವಂತ ಬಲ 117 ಕ್ಕೆ ಏರಲಿದ್ದು, ಇದು ಪಕ್ಷದ ಇತಿಹಾಸದಲ್ಲೇ ಗರಿಷ್ಠ ಸೀಟುಗಳಾಗಿವೆ. ಇದರೊಂದಿಗೆ ಬಿಜೆಪಿ ಸ್ವಂತ ಬಲದ ಸರಳ ಬಹುಮತಕ್ಕೆ (123) ಕೇವಲ ಆರು ಸ್ಥಾನಗಳಷ್ಟೇ ಬಾಕಿ ಇರಲಿದೆ. ನಾಮನಿರ್ದೇಶಿತ, ಪಕ್ಷೇತರರು ಹಾಗೂ ಮೈತ್ರಿಪಕ್ಷಗಳ (TDP, AIADMK, JDU, NCP ಇತ್ಯಾದಿ) ಬೆಂಬಲದೊಂದಿಗೆ ಎನ್‌ಡಿಎ (NDA) ಮೈತ್ರಿಕೂಟದ ಒಟ್ಟು ಬಲ 153 ಕ್ಕೆ ತಲುಪಲಿದ್ದು, ಮೂರನೇ ಎರಡರಷ್ಟು ಬಹುಮತಕ್ಕೆ (164) ಕೇವಲ 11 ಸ್ಥಾನಗಳಷ್ಟೇ ಬಾಕಿ ಉಳಿಯಲಿವೆ.

ಕೇವಲ ರಾಜ್ಯಸಭೆ ಮಾತ್ರವಲ್ಲದೇ, ಲೋಕಸಭೆಯಲ್ಲೂ ಟಿಎಂಸಿಯನ್ನು ಒಡೆಯಲು ಬಿಜೆಪಿ ಭಿನ್ನ ತಂತ್ರ ಹೂಡಿದೆ. ಪಕ್ಷದ 28 ಲೋಕಸಭಾ ಸಂಸದರ ಪೈಕಿ 20 ಸಂಸದರು ಈಗಾಗಲೇ ಮಮತಾ ನಾಯಕತ್ವದ ವಿರುದ್ಧ ಬಂಡಾಯ ಎದ್ದಿದ್ದಾರೆ. ಅವರು ‘ಎನ್‌ಸಿಪಿಐ’ (NCPI) ಎಂಬ ಅಷ್ಟಾಗಿ ಪರಿಚಿತವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ. ಇದಕ್ಕೆ ಈಗ ಲೋಕಸಭಾ ಸ್ಪೀಕರ್ ಅವರ ಅಧಿಕೃತ ಅನುಮೋದನೆ ಬಾಕಿಯಿದೆ.

ಮಮತಾ ಬ್ಯಾನರ್ಜಿ ಅವರಿಂದ ಟಿಎಂಸಿ ಪಕ್ಷವನ್ನೇ ಕಸಿದುಕೊಳ್ಳಲು ದೆಹಲಿಯಿಂದ ಕೋಲ್ಕತ್ತಾವರೆಗೆ ವ್ಯವಸ್ಥಿತ ಚಕ್ರವ್ಯೂಹ ರಚಿಸಲಾಗಿದೆ. ಕೋಲ್ಕತ್ತಾದಲ್ಲಿ 60 ಕ್ಕೂ ಹೆಚ್ಚು ಶಾಸಕರು ಋತಬ್ರತ ಬ್ಯಾನರ್ಜಿ ನೇತೃತ್ವದಲ್ಲಿ ಬಂಡಾಯ ಎದ್ದಿದ್ದು, ಅಲ್ಲಿನ ವಿಧಾನಸಭೆ ಸ್ಪೀಕರ್ ಈಗಾಗಲೇ ಋತಬ್ರತ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಗುರುತಿಸಿದ್ದಾರೆ! ಈ ಬಂಡಾಯ ಬಣವೇ ‘ನೈಜ ಟಿಎಂಸಿ’ ಎಂದು ಚುನಾವಣಾ ಆಯೋಗದ ಮುಂದೆ ಪಕ್ಷದ ಚಿಹ್ನೆಗಾಗಿ ಹಕ್ಕು ಮಂಡಿಸಿದೆ.

ಹೀಗಾಗಿ ದೀದಿ ಈಗ ಏಕಕಾಲದಲ್ಲಿ ಎರಡು ರೀತಿಯ ಕಠಿಣ ಕಾನೂನು ಹೋರಾಟ ನಡೆಸಬೇಕಿದೆ. ಮೊದಲನೆಯದ್ದು ತಮ್ಮದೇ ಬಣ ‘ನೈಜ ಟಿಎಂಸಿ’ ಮತ್ತು ಪಕ್ಷದ ಚಿಹ್ನೆ ತಮಗೆ ಸೇರಬೇಕು ಎಂದು ಚುನಾವಣಾ ಆಯೋಗದ ಮುಂದೆ ಸಾಬೀತುಪಡಿಸುವುದು. ಎರಡನೆಯದ್ದು ಪಕ್ಷಾಂತರ ನಿಷೇಧ ಕಾಯ್ದೆಯಡಿ ಲೋಕಸಭೆಯ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಮುಂದೆ ಹೋರಾಡುವುದು. ಆದರೆ ಸದ್ಯಕ್ಕೆ ಮಮತಾ ಬಳಲಿದಂತೆ ಕಾಣುತ್ತಿದ್ದು ಮುಂದೆ ಯಾವ ತೀರ್ಮಾನ ಕೈಗೊಳ್ಳುತ್ತಾರೋ ಕಾದು ನೋಡಬೇಕಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

    ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

    KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

    ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

    ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

    ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

    ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

    ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

    SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

    ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

    ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

    ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

    ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

    ‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

    ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

    ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

    ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

    ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

    ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...