HomeಮುಖಪುಟTMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ ಮೇಲ್ಮನೆ ಪ್ರವೇಶಿಸಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಟಿಎಂಸಿಗೆ ಹಾಗೂ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುಸ್ಮಿತಾ ದೇವ್, ಸುಖೇಂದು ಶೇಖರ್ ರಾಯ್ ಮತ್ತು ಪ್ರಕಾಶ್ ಚಿಕ್ ಬರೈಕ್ ಅವರು ಗುರುವಾರ ಅಧಿಕೃತವಾಗಿ ಕಮಲ ಪಾಳಯ ಸೇರಿದ್ದಾರೆ. ಅವರು ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ, ಅವರು ಖಾಲಿ ಮಾಡಿದ್ದ ಅದೇ ಮೂರು ಸ್ಥಾನಗಳ ಮುಂಬರುವ ಉಪಚುನಾವಣೆಗೆ ಬಿಜೆಪಿಯು ಅವರನ್ನೇ ತನ್ನ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ! ಈ ಸ್ಥಾನಗಳಿಗೆ ಜುಲೈ 24 ರಂದು ಮರುಚುನಾವಣೆ ನಡೆಯಲಿದೆ.

TMC ಯನ್ನು ಮುಗಿಸುವ ಬಿಜೆಪಿಯ ‘ಆಪರೇಷನ್’ ಇನ್ನೂ ಮುಗಿದಿಲ್ಲ ಎಂದು ದೆಹಲಿಯ ರಾಜಕೀಯ ಮೂಲಗಳು ತಿಳಿಸಿವೆ. ಮತ್ತೊಬ್ಬ ಟಿಎಂಸಿ ಸಂಸದೆ ರುಕ್ಮಿಣಿ ಮಲ್ಲಿಕ್ ಈಗಾಗಲೇ ಇಮೇಲ್ ಮೂಲಕ ರಾಜ್ಯಸಭಾ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದು, ಶೀಘ್ರದಲ್ಲೇ ಖುದ್ದಾಗಿ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ. ಇನ್ನುಳಿದ ಒಂಬತ್ತು ಟಿಎಂಸಿ ರಾಜ್ಯಸಭಾ ಸಂಸದರ ಪೈಕಿ ಇಬ್ಬರು ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.

TMC ನಾಯಕರು ಭ್ರಷ್ಟಾಚಾರ ಮತ್ತು ಗೂಂಡಾಗಿರಿಯಲ್ಲಿ ತೊಡಗಿದ್ದಾರೆ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂಬ ಬಿಜೆಪಿಯ ಸಾರ್ವಜನಿಕ ನಿಲುವಿಗೆ ಈ ಬೆಳವಣಿಗೆ ಸಂಪೂರ್ಣ ವಿರುದ್ಧವಾಗಿದೆ. ಆದರೆ, ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಇದನ್ನು “ಅಪವಾದ” ಎಂದು ಕರೆದು ಸಮರ್ಥಿಸಿಕೊಂಡಿದ್ದಾರೆ. ಅವರು ‘ಒಳ್ಳೆಯ ಟಿಎಂಸಿ ಮತ್ತು ಕೆಟ್ಟ ಟಿಎಂಸಿ’ ಎಂಬ ಹೊಸ ಸಿದ್ಧಾಂತವನ್ನು ಮಂಡಿಸಿದ್ದು, ‘ಭಾಲೋ’ (ಒಳ್ಳೆಯ) ಟಿಎಂಸಿ ನಾಯಕರನ್ನು ಪಕ್ಷಕ್ಕೆ ಕರೆತರಲು ನಮಗೆ ಯಾವುದೇ ಹಿಂಜರಿಕೆಯಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ, “ಇದು ಒಂದು ವಿಶಿಷ್ಟ ಪ್ರಕರಣವಾಗಿದ್ದು, ಪಕ್ಷದ ಹಳೆಯ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭ್ರಷ್ಟಾಚಾರದಲ್ಲಿ ಭಾಗಿಯಾದ ಟಿಎಂಸಿ ನಾಯಕರಿಗೆ ನಮ್ಮ ಪಕ್ಷದ ಬಾಗಿಲು ಎಂದಿಗೂ ಮುಚ್ಚಿರುತ್ತದೆ. ಆದರೆ, ಅಧಿಕಾರ ದುರ್ಬಳಕೆ ಮಾಡಿಕೊಳ್ಳದ ಮತ್ತು ಭ್ರಷ್ಟಾಚಾರ ರಹಿತ ನಾಯಕರು ಟಿಎಂಸಿ ವಿರುದ್ಧದ ಹೋರಾಟಕ್ಕೆ ಹಾಗೂ ಬಂಗಾಳದ ಮರುನಿರ್ಮಾಣಕ್ಕೆ ನಮ್ಮೊಂದಿಗೆ ಕೈಜೋಡಿಸಲು ಯಾವಾಗಲೂ ಮುಕ್ತ ಅವಕಾಶವಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆಯ ನಂತರ ತಮ್ಮ ಭವಿಷ್ಯದ ಬಗ್ಗೆ ಗೊಂದಲದಲ್ಲಿದ್ದ ವಿರೋಧ ಪಕ್ಷದ ನಾಯಕರಿಗೆ, ಬಿಜೆಪಿಗೆ ಬಂದರೆ ಕೇವಲ ಆಶ್ರಯ ಮಾತ್ರವಲ್ಲ, ತಕ್ಕ ಗೌರವ ಮತ್ತು ಸ್ಥಾನಮಾನವೂ ಸಿಗುತ್ತದೆ ಎಂಬ ಬಲವಾದ ಸಂದೇಶ ರವಾನೆಯಾದಂತಾಗಿದೆ.

ವಿಭಜನೆಗೂ ಮುನ್ನ ರಾಜ್ಯಸಭೆಯಲ್ಲಿ ಟಿಎಂಸಿ 13 ಸಂಸದರನ್ನು ಹೊಂದಿತ್ತು. ಕಾನೂನುಬದ್ಧವಾಗಿ ಪಕ್ಷ ಒಡೆದು ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳಿಸಲು ಕನಿಷ್ಠ 9 ಸಂಸದರ (ಮೂರನೇ ಎರಡರಷ್ಟು) ಅಗತ್ಯವಿತ್ತು. ಸದ್ಯಕ್ಕೆ ಆ ಸಂಖ್ಯೆ ಹೊಂದಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಹೊಸ ತಂತ್ರ ಅನುಸರಿಸಿದೆ. ಮೊದಲು ಸಂಸದರಿಂದ ರಾಜೀನಾಮೆ ಕೊಡಿಸುವುದು, ನಂತರ ತಮ್ಮದೇ ಚಿಹ್ನೆಯಡಿ ಅವರನ್ನು ಕಣಕ್ಕಿಳಿಸಿ ಗೆಲ್ಲಿಸುವುದು ಈ ಪ್ಲಾನ್. ಇದರಿಂದ ಟಿಎಂಸಿ ಬಲ ಕುಗ್ಗುವುದರ ಜೊತೆಗೆ ರಾಜ್ಯಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ಹೆಚ್ಚಾಗಲಿದೆ.

ಜುಲೈ 24 ರ ನಂತರ ರಾಜ್ಯಸಭೆಯಲ್ಲಿ ಬಿಜೆಪಿಯ ಸ್ವಂತ ಬಲ 117 ಕ್ಕೆ ಏರಲಿದ್ದು, ಇದು ಪಕ್ಷದ ಇತಿಹಾಸದಲ್ಲೇ ಗರಿಷ್ಠ ಸೀಟುಗಳಾಗಿವೆ. ಇದರೊಂದಿಗೆ ಬಿಜೆಪಿ ಸ್ವಂತ ಬಲದ ಸರಳ ಬಹುಮತಕ್ಕೆ (123) ಕೇವಲ ಆರು ಸ್ಥಾನಗಳಷ್ಟೇ ಬಾಕಿ ಇರಲಿದೆ. ನಾಮನಿರ್ದೇಶಿತ, ಪಕ್ಷೇತರರು ಹಾಗೂ ಮೈತ್ರಿಪಕ್ಷಗಳ (TDP, AIADMK, JDU, NCP ಇತ್ಯಾದಿ) ಬೆಂಬಲದೊಂದಿಗೆ ಎನ್‌ಡಿಎ (NDA) ಮೈತ್ರಿಕೂಟದ ಒಟ್ಟು ಬಲ 153 ಕ್ಕೆ ತಲುಪಲಿದ್ದು, ಮೂರನೇ ಎರಡರಷ್ಟು ಬಹುಮತಕ್ಕೆ (164) ಕೇವಲ 11 ಸ್ಥಾನಗಳಷ್ಟೇ ಬಾಕಿ ಉಳಿಯಲಿವೆ.

ಕೇವಲ ರಾಜ್ಯಸಭೆ ಮಾತ್ರವಲ್ಲದೇ, ಲೋಕಸಭೆಯಲ್ಲೂ ಟಿಎಂಸಿಯನ್ನು ಒಡೆಯಲು ಬಿಜೆಪಿ ಭಿನ್ನ ತಂತ್ರ ಹೂಡಿದೆ. ಪಕ್ಷದ 28 ಲೋಕಸಭಾ ಸಂಸದರ ಪೈಕಿ 20 ಸಂಸದರು ಈಗಾಗಲೇ ಮಮತಾ ನಾಯಕತ್ವದ ವಿರುದ್ಧ ಬಂಡಾಯ ಎದ್ದಿದ್ದಾರೆ. ಅವರು ‘ಎನ್‌ಸಿಪಿಐ’ (NCPI) ಎಂಬ ಅಷ್ಟಾಗಿ ಪರಿಚಿತವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ. ಇದಕ್ಕೆ ಈಗ ಲೋಕಸಭಾ ಸ್ಪೀಕರ್ ಅವರ ಅಧಿಕೃತ ಅನುಮೋದನೆ ಬಾಕಿಯಿದೆ.

ಮಮತಾ ಬ್ಯಾನರ್ಜಿ ಅವರಿಂದ ಟಿಎಂಸಿ ಪಕ್ಷವನ್ನೇ ಕಸಿದುಕೊಳ್ಳಲು ದೆಹಲಿಯಿಂದ ಕೋಲ್ಕತ್ತಾವರೆಗೆ ವ್ಯವಸ್ಥಿತ ಚಕ್ರವ್ಯೂಹ ರಚಿಸಲಾಗಿದೆ. ಕೋಲ್ಕತ್ತಾದಲ್ಲಿ 60 ಕ್ಕೂ ಹೆಚ್ಚು ಶಾಸಕರು ಋತಬ್ರತ ಬ್ಯಾನರ್ಜಿ ನೇತೃತ್ವದಲ್ಲಿ ಬಂಡಾಯ ಎದ್ದಿದ್ದು, ಅಲ್ಲಿನ ವಿಧಾನಸಭೆ ಸ್ಪೀಕರ್ ಈಗಾಗಲೇ ಋತಬ್ರತ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಗುರುತಿಸಿದ್ದಾರೆ! ಈ ಬಂಡಾಯ ಬಣವೇ ‘ನೈಜ ಟಿಎಂಸಿ’ ಎಂದು ಚುನಾವಣಾ ಆಯೋಗದ ಮುಂದೆ ಪಕ್ಷದ ಚಿಹ್ನೆಗಾಗಿ ಹಕ್ಕು ಮಂಡಿಸಿದೆ.

ಹೀಗಾಗಿ ದೀದಿ ಈಗ ಏಕಕಾಲದಲ್ಲಿ ಎರಡು ರೀತಿಯ ಕಠಿಣ ಕಾನೂನು ಹೋರಾಟ ನಡೆಸಬೇಕಿದೆ. ಮೊದಲನೆಯದ್ದು ತಮ್ಮದೇ ಬಣ ‘ನೈಜ ಟಿಎಂಸಿ’ ಮತ್ತು ಪಕ್ಷದ ಚಿಹ್ನೆ ತಮಗೆ ಸೇರಬೇಕು ಎಂದು ಚುನಾವಣಾ ಆಯೋಗದ ಮುಂದೆ ಸಾಬೀತುಪಡಿಸುವುದು. ಎರಡನೆಯದ್ದು ಪಕ್ಷಾಂತರ ನಿಷೇಧ ಕಾಯ್ದೆಯಡಿ ಲೋಕಸಭೆಯ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಮುಂದೆ ಹೋರಾಡುವುದು. ಆದರೆ ಸದ್ಯಕ್ಕೆ ಮಮತಾ ಬಳಲಿದಂತೆ ಕಾಣುತ್ತಿದ್ದು ಮುಂದೆ ಯಾವ ತೀರ್ಮಾನ ಕೈಗೊಳ್ಳುತ್ತಾರೋ ಕಾದು ನೋಡಬೇಕಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

    ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

    ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

    ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

    ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

    ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

    ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

    ‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

    SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

    ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

    ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

    ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

    ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

    ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

    ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

    ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

    ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

    ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...