Homeಕರ್ನಾಟಕಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

- Advertisement -
- Advertisement -

ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ  ಎಂದು ಟಿವಿ9 ವರದಿ ಮಾಡಿದೆ.

ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2 ದಿನದ ಹಿಂದಷ್ಟೇ ರಷ್ಯಾದಿಂದ ವಾಪಸ್ ಆಗಿದ್ದ ರಿಕ್ಕಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದರು. ನಿನ್ನೆ ರಾಮನಗರ ತಾಲೂಕಿನ ಬಿಡದಿ ಮನೆಯಿಂದ ತಡರಾತ್ರಿ ತನ್ನ ಫಾರ್ಚ್ಯೂನರ್​ ಕಾರಲ್ಲಿ ಬೆಂಗಳೂರಿಗೆ ಹೊರಟಿದ್ದರು. ಸುಮಾರು 11.30 ರ ಹೊತ್ತಿಗೆ ಮನೆಯಿಂದ ಹೊರಬರ್ತಿದ್ದಂತೆ ಗೇಟ್​​ ಬಳಿ ದುಷ್ಕರ್ಮಿ, ಎರಡು ಸುತ್ತಿನ ಫೈರಿಂಗ್​ ಮಾಡಿದ್ದಾನೆ. 70 ಎಂಎಂ ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ಮಾಡಲಾಗಿದೆ.

ರಿಕ್ಕಿ ರೈ ಪ್ರತಿ ಬಾರಿ ತಾವೇ ಕಾರು ಡ್ರೈವ್​ ಮಾಡುತ್ತಿದ್ದರು. ಹೀಗಾಗಿ ಡ್ರೈವರ್​​ ಸೀಟ್​ ಗುರಿ​ ಮಾಡಿ ಅಟ್ಯಾಕ್​ ಮಾಡಲಾಗಿತ್ತು. ಆದರೆ ತಡರಾತ್ರಿ ಅದ್ಯಾವ ಕಾರಣವೋ ಗೊತ್ತಿಲ್ಲ ತನ್ನ ಬದಲು ಡ್ರೈವರ್​ಗೆ ಕಾರು ಚಲಾಯಿಸಲು ಹೇಳಿದ್ದ ರಿಕ್ಕಿ ರೈ, ಹಿಂಬದಿ ಸೀಟ್​ನಲ್ಲಿ ಗನ್​ ಮ್ಯಾನ್​ ಜತೆ ಕುಳಿತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಕಾರು ಚಾಲಕ ರಾಜು ಮುಂದೆ ಬಗ್ಗಿದ್ದು, ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.​

ಖಾಸಗಿಯವರಿಗೆ ಸೇರಿದ, ರಸ್ತೆ ಪಕ್ಕದ ಕಾಂಪೌಡ್ ಬಳಿ ಬಚ್ಚಿಟ್ಟುಕೊಂಡು ದುಷ್ಕರ್ಮಿ ದಾಳಿ ಮಾಡಿದ್ದಾನೆ. ಅಂದರೆ ಕಾರು ಬೆಂಗಳೂರಿಗೆ ಹೊಗುತ್ತಿರಬೇಕಾದರೆ ಬಲಗಡೆ ಭಾಗದಲ್ಲಿ ಒಂದು ಕಾಂಪೌಂಡ್​ ಮಧ್ಯೆ ಅವಿತುಕೊಂಡು, ಅದರ ಒಂದು ರಂಧ್ರದಿಂದಲೇ ಗುಂಡಿನ ದಾಳಿ ಆಗಿದೆ.

ಬಿಡದಿ ಮನೆಯಿಂದ KA 53 MC 7128 ನಂಬರ್​​​ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ರಿಕ್ಕಿ ರೈ ಜತೆಗೆ ಗನ್​ ಮ್ಯಾನ್ ಇದ್ದು, ಚಾಲಕ ಕಾರು ಚಲಾಯಿಸ್ತಿದ್ದ. ಹಿಂಬದಿ ಸೀಟ್​ನಲ್ಲಿ ರಿಕ್ಕಿ ರೈ ಕುಳಿತಿದ್ದರು. ಪೊಲೀಸರ ಮಾಹಿತಿ ಪ್ರಕಾರ 70mm ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ನಡೆಸಲಾಗಿದೆ. ಒಂದು ಬಾರಿ ಮಾತ್ರ ಗುಂಡು ಹಾರಿಸಿದ್ದು, ಕಾರಿನ ಡೋರ್​ ಸೀಳಿ ಬಂದ ಬುಲೆಟ್, ಡ್ರೈವರ್ ಸೀಟ್ ಕುಶನ್ ಒಳಗೆ ನುಗ್ಗಿದೆ. ನಂತರ ಕಾರಿನ ಹಿಂಬದಿ ಸೀಟ್​ನ ಎಡಭಾಗದ ಡೋರ್​ಗೆ ತಾಗಿದೆ. ಈ ವೇಳೆ ಡ್ರೈವರ್ ಬೆನ್ನಿಗೆ ಹಾಗೂ ರಿಕ್ಕಿ ರೈ ಮೂಗು ಹಾಗೂ ಕೈಗೆ ಗಾಯವಾಗಿದೆ.

ರಿಕ್ಕಿ ರೈ ಹತ್ಯೆಗೆ ಪೂರ್ವ ನಿಯೋಜಿತ ಸಂಚು ನಡೆದಿತ್ತಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಎರಡು ದಿನಗಳ ಹಿಂದೆ ರಷ್ಯಾದಿಂದ ಬಂದಿರುವ ರಿಕ್ಕಿ ರೈ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ. ಈ ವೇಳೆ ಹಿಂಬಾಲಿಸಿ ಕಾದು ಕೃತ್ಯ ಎಸಗಲಾಗಿದೆ. ರಿಕ್ಕಿ ಬರೊದನ್ನೇ ಕಾದು ಜಾಗವನ್ನು ಗುರುತಿಸಿಕೊಳ್ಳಲಾಗಿದೆ. ಕಾಂಪೌಂಡ್​ ಒಂದರ ಮಧ್ಯೆ ಅವಿತುಕೊಂಡು ದುಷ್ಕರ್ಮಿ ಶೂಟ್​ ಮಾಡಿದ್ದಾನೆ. ಹೀಗಾಗಿ ಮಿಡ್ ನೈಟ್​ನಲ್ಲಿ ರಿಕ್ಕಿ ರೈ ಹೋಗೋ ಬಗ್ಗೆ ಮಾಹಿತಿ ಕೊಟ್ಟವರು ಯಾರು? ಸಂಚಿನ ಹಿಂದಿರೋರು ಯಾರು? ಯಾವ ಕಾರಣಕ್ಕೆ ಈ ದುಷ್ಕೃತ್ಯ ಎಸಗಿದರು ಅನ್ನೋದು ಪತ್ತೆ ಹಚ್ಚಲಾಗುತ್ತಿದೆ. ಮೇಲ್ನೋಟಕ್ಕೆ ಪ್ರೋಪೆಷನಲ್ ಶಾರ್ಪ್ ಶೂಟರ್​ನಿಂದಲೇ ಅಟ್ಯಾಕ್ ನಡೆದಿದ್ದು, ಅದೃಷ್ಟವಶಾತ್ ರಿಕ್ಕಿ ರೈ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಪರಿಶೀಲನೆ ವೇಳೆ ಪೊಲೀಸರಿಗೆ ದುಷ್ಕರ್ಮಿಯ ಕ್ಲ್ಯೂ ಸಿಕ್ಕಿದೆ ಎನ್ನಲಾಗುತ್ತಿದೆ. ಜತೆಗೆ ಎರಡು ಬುಲೆಟ್ ಹಾಗೂ ಒಂದು ಮೊಬೈಲ್ ಪತ್ತೆಯಾಗಿದ್ದು, ಕಿರಾತಕನ ಪತ್ತೆಗೆ ಬಲೆ ಬೀಸಿದ್ದಾರೆ.

ಜೈ ಶ್ರೀರಾಮ್ ಕೂಗಲು ನಿರಾಕರಣೆ: 13 ವರ್ಷದ ಮುಸ್ಲಿಂ ಬಾಲಕನಿಗೆ ಚಾಕು ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...