Homeಕರ್ನಾಟಕಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

- Advertisement -
- Advertisement -

ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ  ಎಂದು ಟಿವಿ9 ವರದಿ ಮಾಡಿದೆ.

ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2 ದಿನದ ಹಿಂದಷ್ಟೇ ರಷ್ಯಾದಿಂದ ವಾಪಸ್ ಆಗಿದ್ದ ರಿಕ್ಕಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದರು. ನಿನ್ನೆ ರಾಮನಗರ ತಾಲೂಕಿನ ಬಿಡದಿ ಮನೆಯಿಂದ ತಡರಾತ್ರಿ ತನ್ನ ಫಾರ್ಚ್ಯೂನರ್​ ಕಾರಲ್ಲಿ ಬೆಂಗಳೂರಿಗೆ ಹೊರಟಿದ್ದರು. ಸುಮಾರು 11.30 ರ ಹೊತ್ತಿಗೆ ಮನೆಯಿಂದ ಹೊರಬರ್ತಿದ್ದಂತೆ ಗೇಟ್​​ ಬಳಿ ದುಷ್ಕರ್ಮಿ, ಎರಡು ಸುತ್ತಿನ ಫೈರಿಂಗ್​ ಮಾಡಿದ್ದಾನೆ. 70 ಎಂಎಂ ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ಮಾಡಲಾಗಿದೆ.

ರಿಕ್ಕಿ ರೈ ಪ್ರತಿ ಬಾರಿ ತಾವೇ ಕಾರು ಡ್ರೈವ್​ ಮಾಡುತ್ತಿದ್ದರು. ಹೀಗಾಗಿ ಡ್ರೈವರ್​​ ಸೀಟ್​ ಗುರಿ​ ಮಾಡಿ ಅಟ್ಯಾಕ್​ ಮಾಡಲಾಗಿತ್ತು. ಆದರೆ ತಡರಾತ್ರಿ ಅದ್ಯಾವ ಕಾರಣವೋ ಗೊತ್ತಿಲ್ಲ ತನ್ನ ಬದಲು ಡ್ರೈವರ್​ಗೆ ಕಾರು ಚಲಾಯಿಸಲು ಹೇಳಿದ್ದ ರಿಕ್ಕಿ ರೈ, ಹಿಂಬದಿ ಸೀಟ್​ನಲ್ಲಿ ಗನ್​ ಮ್ಯಾನ್​ ಜತೆ ಕುಳಿತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಕಾರು ಚಾಲಕ ರಾಜು ಮುಂದೆ ಬಗ್ಗಿದ್ದು, ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.​

ಖಾಸಗಿಯವರಿಗೆ ಸೇರಿದ, ರಸ್ತೆ ಪಕ್ಕದ ಕಾಂಪೌಡ್ ಬಳಿ ಬಚ್ಚಿಟ್ಟುಕೊಂಡು ದುಷ್ಕರ್ಮಿ ದಾಳಿ ಮಾಡಿದ್ದಾನೆ. ಅಂದರೆ ಕಾರು ಬೆಂಗಳೂರಿಗೆ ಹೊಗುತ್ತಿರಬೇಕಾದರೆ ಬಲಗಡೆ ಭಾಗದಲ್ಲಿ ಒಂದು ಕಾಂಪೌಂಡ್​ ಮಧ್ಯೆ ಅವಿತುಕೊಂಡು, ಅದರ ಒಂದು ರಂಧ್ರದಿಂದಲೇ ಗುಂಡಿನ ದಾಳಿ ಆಗಿದೆ.

ಬಿಡದಿ ಮನೆಯಿಂದ KA 53 MC 7128 ನಂಬರ್​​​ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ರಿಕ್ಕಿ ರೈ ಜತೆಗೆ ಗನ್​ ಮ್ಯಾನ್ ಇದ್ದು, ಚಾಲಕ ಕಾರು ಚಲಾಯಿಸ್ತಿದ್ದ. ಹಿಂಬದಿ ಸೀಟ್​ನಲ್ಲಿ ರಿಕ್ಕಿ ರೈ ಕುಳಿತಿದ್ದರು. ಪೊಲೀಸರ ಮಾಹಿತಿ ಪ್ರಕಾರ 70mm ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ನಡೆಸಲಾಗಿದೆ. ಒಂದು ಬಾರಿ ಮಾತ್ರ ಗುಂಡು ಹಾರಿಸಿದ್ದು, ಕಾರಿನ ಡೋರ್​ ಸೀಳಿ ಬಂದ ಬುಲೆಟ್, ಡ್ರೈವರ್ ಸೀಟ್ ಕುಶನ್ ಒಳಗೆ ನುಗ್ಗಿದೆ. ನಂತರ ಕಾರಿನ ಹಿಂಬದಿ ಸೀಟ್​ನ ಎಡಭಾಗದ ಡೋರ್​ಗೆ ತಾಗಿದೆ. ಈ ವೇಳೆ ಡ್ರೈವರ್ ಬೆನ್ನಿಗೆ ಹಾಗೂ ರಿಕ್ಕಿ ರೈ ಮೂಗು ಹಾಗೂ ಕೈಗೆ ಗಾಯವಾಗಿದೆ.

ರಿಕ್ಕಿ ರೈ ಹತ್ಯೆಗೆ ಪೂರ್ವ ನಿಯೋಜಿತ ಸಂಚು ನಡೆದಿತ್ತಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಎರಡು ದಿನಗಳ ಹಿಂದೆ ರಷ್ಯಾದಿಂದ ಬಂದಿರುವ ರಿಕ್ಕಿ ರೈ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ. ಈ ವೇಳೆ ಹಿಂಬಾಲಿಸಿ ಕಾದು ಕೃತ್ಯ ಎಸಗಲಾಗಿದೆ. ರಿಕ್ಕಿ ಬರೊದನ್ನೇ ಕಾದು ಜಾಗವನ್ನು ಗುರುತಿಸಿಕೊಳ್ಳಲಾಗಿದೆ. ಕಾಂಪೌಂಡ್​ ಒಂದರ ಮಧ್ಯೆ ಅವಿತುಕೊಂಡು ದುಷ್ಕರ್ಮಿ ಶೂಟ್​ ಮಾಡಿದ್ದಾನೆ. ಹೀಗಾಗಿ ಮಿಡ್ ನೈಟ್​ನಲ್ಲಿ ರಿಕ್ಕಿ ರೈ ಹೋಗೋ ಬಗ್ಗೆ ಮಾಹಿತಿ ಕೊಟ್ಟವರು ಯಾರು? ಸಂಚಿನ ಹಿಂದಿರೋರು ಯಾರು? ಯಾವ ಕಾರಣಕ್ಕೆ ಈ ದುಷ್ಕೃತ್ಯ ಎಸಗಿದರು ಅನ್ನೋದು ಪತ್ತೆ ಹಚ್ಚಲಾಗುತ್ತಿದೆ. ಮೇಲ್ನೋಟಕ್ಕೆ ಪ್ರೋಪೆಷನಲ್ ಶಾರ್ಪ್ ಶೂಟರ್​ನಿಂದಲೇ ಅಟ್ಯಾಕ್ ನಡೆದಿದ್ದು, ಅದೃಷ್ಟವಶಾತ್ ರಿಕ್ಕಿ ರೈ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಪರಿಶೀಲನೆ ವೇಳೆ ಪೊಲೀಸರಿಗೆ ದುಷ್ಕರ್ಮಿಯ ಕ್ಲ್ಯೂ ಸಿಕ್ಕಿದೆ ಎನ್ನಲಾಗುತ್ತಿದೆ. ಜತೆಗೆ ಎರಡು ಬುಲೆಟ್ ಹಾಗೂ ಒಂದು ಮೊಬೈಲ್ ಪತ್ತೆಯಾಗಿದ್ದು, ಕಿರಾತಕನ ಪತ್ತೆಗೆ ಬಲೆ ಬೀಸಿದ್ದಾರೆ.

ಜೈ ಶ್ರೀರಾಮ್ ಕೂಗಲು ನಿರಾಕರಣೆ: 13 ವರ್ಷದ ಮುಸ್ಲಿಂ ಬಾಲಕನಿಗೆ ಚಾಕು ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...