Homeಕರ್ನಾಟಕಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

- Advertisement -
- Advertisement -

ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ  ಎಂದು ಟಿವಿ9 ವರದಿ ಮಾಡಿದೆ.

ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2 ದಿನದ ಹಿಂದಷ್ಟೇ ರಷ್ಯಾದಿಂದ ವಾಪಸ್ ಆಗಿದ್ದ ರಿಕ್ಕಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದರು. ನಿನ್ನೆ ರಾಮನಗರ ತಾಲೂಕಿನ ಬಿಡದಿ ಮನೆಯಿಂದ ತಡರಾತ್ರಿ ತನ್ನ ಫಾರ್ಚ್ಯೂನರ್​ ಕಾರಲ್ಲಿ ಬೆಂಗಳೂರಿಗೆ ಹೊರಟಿದ್ದರು. ಸುಮಾರು 11.30 ರ ಹೊತ್ತಿಗೆ ಮನೆಯಿಂದ ಹೊರಬರ್ತಿದ್ದಂತೆ ಗೇಟ್​​ ಬಳಿ ದುಷ್ಕರ್ಮಿ, ಎರಡು ಸುತ್ತಿನ ಫೈರಿಂಗ್​ ಮಾಡಿದ್ದಾನೆ. 70 ಎಂಎಂ ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ಮಾಡಲಾಗಿದೆ.

ರಿಕ್ಕಿ ರೈ ಪ್ರತಿ ಬಾರಿ ತಾವೇ ಕಾರು ಡ್ರೈವ್​ ಮಾಡುತ್ತಿದ್ದರು. ಹೀಗಾಗಿ ಡ್ರೈವರ್​​ ಸೀಟ್​ ಗುರಿ​ ಮಾಡಿ ಅಟ್ಯಾಕ್​ ಮಾಡಲಾಗಿತ್ತು. ಆದರೆ ತಡರಾತ್ರಿ ಅದ್ಯಾವ ಕಾರಣವೋ ಗೊತ್ತಿಲ್ಲ ತನ್ನ ಬದಲು ಡ್ರೈವರ್​ಗೆ ಕಾರು ಚಲಾಯಿಸಲು ಹೇಳಿದ್ದ ರಿಕ್ಕಿ ರೈ, ಹಿಂಬದಿ ಸೀಟ್​ನಲ್ಲಿ ಗನ್​ ಮ್ಯಾನ್​ ಜತೆ ಕುಳಿತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಕಾರು ಚಾಲಕ ರಾಜು ಮುಂದೆ ಬಗ್ಗಿದ್ದು, ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.​

ಖಾಸಗಿಯವರಿಗೆ ಸೇರಿದ, ರಸ್ತೆ ಪಕ್ಕದ ಕಾಂಪೌಡ್ ಬಳಿ ಬಚ್ಚಿಟ್ಟುಕೊಂಡು ದುಷ್ಕರ್ಮಿ ದಾಳಿ ಮಾಡಿದ್ದಾನೆ. ಅಂದರೆ ಕಾರು ಬೆಂಗಳೂರಿಗೆ ಹೊಗುತ್ತಿರಬೇಕಾದರೆ ಬಲಗಡೆ ಭಾಗದಲ್ಲಿ ಒಂದು ಕಾಂಪೌಂಡ್​ ಮಧ್ಯೆ ಅವಿತುಕೊಂಡು, ಅದರ ಒಂದು ರಂಧ್ರದಿಂದಲೇ ಗುಂಡಿನ ದಾಳಿ ಆಗಿದೆ.

ಬಿಡದಿ ಮನೆಯಿಂದ KA 53 MC 7128 ನಂಬರ್​​​ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ರಿಕ್ಕಿ ರೈ ಜತೆಗೆ ಗನ್​ ಮ್ಯಾನ್ ಇದ್ದು, ಚಾಲಕ ಕಾರು ಚಲಾಯಿಸ್ತಿದ್ದ. ಹಿಂಬದಿ ಸೀಟ್​ನಲ್ಲಿ ರಿಕ್ಕಿ ರೈ ಕುಳಿತಿದ್ದರು. ಪೊಲೀಸರ ಮಾಹಿತಿ ಪ್ರಕಾರ 70mm ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ನಡೆಸಲಾಗಿದೆ. ಒಂದು ಬಾರಿ ಮಾತ್ರ ಗುಂಡು ಹಾರಿಸಿದ್ದು, ಕಾರಿನ ಡೋರ್​ ಸೀಳಿ ಬಂದ ಬುಲೆಟ್, ಡ್ರೈವರ್ ಸೀಟ್ ಕುಶನ್ ಒಳಗೆ ನುಗ್ಗಿದೆ. ನಂತರ ಕಾರಿನ ಹಿಂಬದಿ ಸೀಟ್​ನ ಎಡಭಾಗದ ಡೋರ್​ಗೆ ತಾಗಿದೆ. ಈ ವೇಳೆ ಡ್ರೈವರ್ ಬೆನ್ನಿಗೆ ಹಾಗೂ ರಿಕ್ಕಿ ರೈ ಮೂಗು ಹಾಗೂ ಕೈಗೆ ಗಾಯವಾಗಿದೆ.

ರಿಕ್ಕಿ ರೈ ಹತ್ಯೆಗೆ ಪೂರ್ವ ನಿಯೋಜಿತ ಸಂಚು ನಡೆದಿತ್ತಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಎರಡು ದಿನಗಳ ಹಿಂದೆ ರಷ್ಯಾದಿಂದ ಬಂದಿರುವ ರಿಕ್ಕಿ ರೈ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ. ಈ ವೇಳೆ ಹಿಂಬಾಲಿಸಿ ಕಾದು ಕೃತ್ಯ ಎಸಗಲಾಗಿದೆ. ರಿಕ್ಕಿ ಬರೊದನ್ನೇ ಕಾದು ಜಾಗವನ್ನು ಗುರುತಿಸಿಕೊಳ್ಳಲಾಗಿದೆ. ಕಾಂಪೌಂಡ್​ ಒಂದರ ಮಧ್ಯೆ ಅವಿತುಕೊಂಡು ದುಷ್ಕರ್ಮಿ ಶೂಟ್​ ಮಾಡಿದ್ದಾನೆ. ಹೀಗಾಗಿ ಮಿಡ್ ನೈಟ್​ನಲ್ಲಿ ರಿಕ್ಕಿ ರೈ ಹೋಗೋ ಬಗ್ಗೆ ಮಾಹಿತಿ ಕೊಟ್ಟವರು ಯಾರು? ಸಂಚಿನ ಹಿಂದಿರೋರು ಯಾರು? ಯಾವ ಕಾರಣಕ್ಕೆ ಈ ದುಷ್ಕೃತ್ಯ ಎಸಗಿದರು ಅನ್ನೋದು ಪತ್ತೆ ಹಚ್ಚಲಾಗುತ್ತಿದೆ. ಮೇಲ್ನೋಟಕ್ಕೆ ಪ್ರೋಪೆಷನಲ್ ಶಾರ್ಪ್ ಶೂಟರ್​ನಿಂದಲೇ ಅಟ್ಯಾಕ್ ನಡೆದಿದ್ದು, ಅದೃಷ್ಟವಶಾತ್ ರಿಕ್ಕಿ ರೈ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಪರಿಶೀಲನೆ ವೇಳೆ ಪೊಲೀಸರಿಗೆ ದುಷ್ಕರ್ಮಿಯ ಕ್ಲ್ಯೂ ಸಿಕ್ಕಿದೆ ಎನ್ನಲಾಗುತ್ತಿದೆ. ಜತೆಗೆ ಎರಡು ಬುಲೆಟ್ ಹಾಗೂ ಒಂದು ಮೊಬೈಲ್ ಪತ್ತೆಯಾಗಿದ್ದು, ಕಿರಾತಕನ ಪತ್ತೆಗೆ ಬಲೆ ಬೀಸಿದ್ದಾರೆ.

ಜೈ ಶ್ರೀರಾಮ್ ಕೂಗಲು ನಿರಾಕರಣೆ: 13 ವರ್ಷದ ಮುಸ್ಲಿಂ ಬಾಲಕನಿಗೆ ಚಾಕು ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...