Homeಕರ್ನಾಟಕಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

- Advertisement -
- Advertisement -

ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ  ಎಂದು ಟಿವಿ9 ವರದಿ ಮಾಡಿದೆ.

ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2 ದಿನದ ಹಿಂದಷ್ಟೇ ರಷ್ಯಾದಿಂದ ವಾಪಸ್ ಆಗಿದ್ದ ರಿಕ್ಕಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದರು. ನಿನ್ನೆ ರಾಮನಗರ ತಾಲೂಕಿನ ಬಿಡದಿ ಮನೆಯಿಂದ ತಡರಾತ್ರಿ ತನ್ನ ಫಾರ್ಚ್ಯೂನರ್​ ಕಾರಲ್ಲಿ ಬೆಂಗಳೂರಿಗೆ ಹೊರಟಿದ್ದರು. ಸುಮಾರು 11.30 ರ ಹೊತ್ತಿಗೆ ಮನೆಯಿಂದ ಹೊರಬರ್ತಿದ್ದಂತೆ ಗೇಟ್​​ ಬಳಿ ದುಷ್ಕರ್ಮಿ, ಎರಡು ಸುತ್ತಿನ ಫೈರಿಂಗ್​ ಮಾಡಿದ್ದಾನೆ. 70 ಎಂಎಂ ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ಮಾಡಲಾಗಿದೆ.

ರಿಕ್ಕಿ ರೈ ಪ್ರತಿ ಬಾರಿ ತಾವೇ ಕಾರು ಡ್ರೈವ್​ ಮಾಡುತ್ತಿದ್ದರು. ಹೀಗಾಗಿ ಡ್ರೈವರ್​​ ಸೀಟ್​ ಗುರಿ​ ಮಾಡಿ ಅಟ್ಯಾಕ್​ ಮಾಡಲಾಗಿತ್ತು. ಆದರೆ ತಡರಾತ್ರಿ ಅದ್ಯಾವ ಕಾರಣವೋ ಗೊತ್ತಿಲ್ಲ ತನ್ನ ಬದಲು ಡ್ರೈವರ್​ಗೆ ಕಾರು ಚಲಾಯಿಸಲು ಹೇಳಿದ್ದ ರಿಕ್ಕಿ ರೈ, ಹಿಂಬದಿ ಸೀಟ್​ನಲ್ಲಿ ಗನ್​ ಮ್ಯಾನ್​ ಜತೆ ಕುಳಿತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಕಾರು ಚಾಲಕ ರಾಜು ಮುಂದೆ ಬಗ್ಗಿದ್ದು, ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.​

ಖಾಸಗಿಯವರಿಗೆ ಸೇರಿದ, ರಸ್ತೆ ಪಕ್ಕದ ಕಾಂಪೌಡ್ ಬಳಿ ಬಚ್ಚಿಟ್ಟುಕೊಂಡು ದುಷ್ಕರ್ಮಿ ದಾಳಿ ಮಾಡಿದ್ದಾನೆ. ಅಂದರೆ ಕಾರು ಬೆಂಗಳೂರಿಗೆ ಹೊಗುತ್ತಿರಬೇಕಾದರೆ ಬಲಗಡೆ ಭಾಗದಲ್ಲಿ ಒಂದು ಕಾಂಪೌಂಡ್​ ಮಧ್ಯೆ ಅವಿತುಕೊಂಡು, ಅದರ ಒಂದು ರಂಧ್ರದಿಂದಲೇ ಗುಂಡಿನ ದಾಳಿ ಆಗಿದೆ.

ಬಿಡದಿ ಮನೆಯಿಂದ KA 53 MC 7128 ನಂಬರ್​​​ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ರಿಕ್ಕಿ ರೈ ಜತೆಗೆ ಗನ್​ ಮ್ಯಾನ್ ಇದ್ದು, ಚಾಲಕ ಕಾರು ಚಲಾಯಿಸ್ತಿದ್ದ. ಹಿಂಬದಿ ಸೀಟ್​ನಲ್ಲಿ ರಿಕ್ಕಿ ರೈ ಕುಳಿತಿದ್ದರು. ಪೊಲೀಸರ ಮಾಹಿತಿ ಪ್ರಕಾರ 70mm ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ನಡೆಸಲಾಗಿದೆ. ಒಂದು ಬಾರಿ ಮಾತ್ರ ಗುಂಡು ಹಾರಿಸಿದ್ದು, ಕಾರಿನ ಡೋರ್​ ಸೀಳಿ ಬಂದ ಬುಲೆಟ್, ಡ್ರೈವರ್ ಸೀಟ್ ಕುಶನ್ ಒಳಗೆ ನುಗ್ಗಿದೆ. ನಂತರ ಕಾರಿನ ಹಿಂಬದಿ ಸೀಟ್​ನ ಎಡಭಾಗದ ಡೋರ್​ಗೆ ತಾಗಿದೆ. ಈ ವೇಳೆ ಡ್ರೈವರ್ ಬೆನ್ನಿಗೆ ಹಾಗೂ ರಿಕ್ಕಿ ರೈ ಮೂಗು ಹಾಗೂ ಕೈಗೆ ಗಾಯವಾಗಿದೆ.

ರಿಕ್ಕಿ ರೈ ಹತ್ಯೆಗೆ ಪೂರ್ವ ನಿಯೋಜಿತ ಸಂಚು ನಡೆದಿತ್ತಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಎರಡು ದಿನಗಳ ಹಿಂದೆ ರಷ್ಯಾದಿಂದ ಬಂದಿರುವ ರಿಕ್ಕಿ ರೈ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ. ಈ ವೇಳೆ ಹಿಂಬಾಲಿಸಿ ಕಾದು ಕೃತ್ಯ ಎಸಗಲಾಗಿದೆ. ರಿಕ್ಕಿ ಬರೊದನ್ನೇ ಕಾದು ಜಾಗವನ್ನು ಗುರುತಿಸಿಕೊಳ್ಳಲಾಗಿದೆ. ಕಾಂಪೌಂಡ್​ ಒಂದರ ಮಧ್ಯೆ ಅವಿತುಕೊಂಡು ದುಷ್ಕರ್ಮಿ ಶೂಟ್​ ಮಾಡಿದ್ದಾನೆ. ಹೀಗಾಗಿ ಮಿಡ್ ನೈಟ್​ನಲ್ಲಿ ರಿಕ್ಕಿ ರೈ ಹೋಗೋ ಬಗ್ಗೆ ಮಾಹಿತಿ ಕೊಟ್ಟವರು ಯಾರು? ಸಂಚಿನ ಹಿಂದಿರೋರು ಯಾರು? ಯಾವ ಕಾರಣಕ್ಕೆ ಈ ದುಷ್ಕೃತ್ಯ ಎಸಗಿದರು ಅನ್ನೋದು ಪತ್ತೆ ಹಚ್ಚಲಾಗುತ್ತಿದೆ. ಮೇಲ್ನೋಟಕ್ಕೆ ಪ್ರೋಪೆಷನಲ್ ಶಾರ್ಪ್ ಶೂಟರ್​ನಿಂದಲೇ ಅಟ್ಯಾಕ್ ನಡೆದಿದ್ದು, ಅದೃಷ್ಟವಶಾತ್ ರಿಕ್ಕಿ ರೈ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಪರಿಶೀಲನೆ ವೇಳೆ ಪೊಲೀಸರಿಗೆ ದುಷ್ಕರ್ಮಿಯ ಕ್ಲ್ಯೂ ಸಿಕ್ಕಿದೆ ಎನ್ನಲಾಗುತ್ತಿದೆ. ಜತೆಗೆ ಎರಡು ಬುಲೆಟ್ ಹಾಗೂ ಒಂದು ಮೊಬೈಲ್ ಪತ್ತೆಯಾಗಿದ್ದು, ಕಿರಾತಕನ ಪತ್ತೆಗೆ ಬಲೆ ಬೀಸಿದ್ದಾರೆ.

ಜೈ ಶ್ರೀರಾಮ್ ಕೂಗಲು ನಿರಾಕರಣೆ: 13 ವರ್ಷದ ಮುಸ್ಲಿಂ ಬಾಲಕನಿಗೆ ಚಾಕು ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...