Homeಮುಖಪುಟನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

ನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

- Advertisement -
- Advertisement -

ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ, ರಾಜತಾಂತ್ರಿಕ, ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆನ್ರಿ ಕಿಸ್ಸಿಂಜರ್ ತನ್ನ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಜರ್ಮನ್ ಮೂಲದವರಾದ ಕಿಸ್ಸಿಂಜರ್ ಕನೆಕ್ಟಿಕಟ್‌ನಲ್ಲಿರುವ ಅವರ ಮನೆಯಲ್ಲಿ ಬುಧವಾರ ನಿಧನರಾಗಿದ್ದಾರೆ ಎಂದು ಅವರ ರಾಜಕೀಯ ಸಲಹಾ ಸಂಸ್ಥೆ ಕಿಸ್ಸಿಂಜರ್ ಅಸೋಸಿಯೇಟ್ಸ್ ತಿಳಿಸಿದೆ.

1923ರಲ್ಲಿ ಜರ್ಮನಿಯಲ್ಲಿ ಜನಿಸಿದ ಕಿಸ್ಸಿಂಜರ್, 1938 ರಲ್ಲಿ ಕುಟುಂಬದೊಂದಿಗೆ ಅಮೆರಿಕಕ್ಕೆ ಬಂದು ನೆಲೆಸಿದರು. 1943ರಲ್ಲಿ ಅವರು ಅಮೆರಿಕದ ಪೌರತ್ವ ಪಡೆದ ಕಿಸ್ಸಿಂಜರ್, ಯುಎಸ್ ಸೇನೆಯಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಇಂಟಲಿಜೆನ್ಸ್ ಕಾರ್ಪ್‌ನಲ್ಲಿ ಕೆಲಸ ಮಾಡಿದ್ದರು. 1969ರಲ್ಲಿ ಆಗಿನ ಯುಎಸ್ ಅಧ್ಯಕ್ಷ ಡಿಚರ್ಡ್ ನಿಕ್ಸನ್, ಕಿಸ್ಸಿಂಜರ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದ್ದರು. ತನ್ನ ಅಧಿಕಾರವಧಿಯಲ್ಲಿ ಕಿಸ್ಸಿಂಜರ್ ಯುಎಸ್ ವಿದೇಶಾಂಗ ನೀತಿಗಳ ಮಾರ್ಪಾಡು, ಹೊಸ ಪರಿಚಯ ಮಾಡಿದ್ದರು.

ವಿವಾದಕ್ಕೆ ಕಾರಣವಾಗಿತ್ತು ಕಿಸ್ಸಿಂಜರ್ ನೋಬೆಲ್ ಪುರಸ್ಕಾರ :

ಹೆನ್ರಿ ಕಿಸ್ಸಿಂಜರ್ ಎಂದಾಕ್ಷಣ ಅವರಿಗೆ ದೊರೆತ ನೋಬೆಲ್ ಪುರಸ್ಕಾರದ ವಿಚಾರ ಮುನ್ನಲೆಗೆ ಬರುತ್ತದೆ. 1973ರಲ್ಲಿ ವಿಯೆಟ್ನಾಂನ ಲೇ ಡುಕ್ ಥೋ ಅವರೊಂದಿಗೆ ಕಿಸ್ಸಿಂಜರ್ ಜಂಟಿಯಾಗಿ ನೋಬೆಲ್ ಶಾಂತಿ ಪುರಸ್ಕಾರ ಪಡೆದರು. ಕಿಸ್ಸಿಂಜರ್ ನೋಬೆಲ್ ಪಡೆಯುವುದಕ್ಕೆ ಜಾಗತಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಕಾಂಬೋಡಿಯಾದಲ್ಲಿ ಗೌಪ್ಯವಾಗಿ ಬಾಂಬ್ ದಾಳಿ ನಡೆಸಿದ್ದರ ಹಿಂದೆ ಕಿಸ್ಸಿಂಜರ್ ಕೈವಾಡ ಇದೆ ಎಂದು ನೋಬೆಲ್ ಸಮಿತಿಯ ಇಬ್ಬರು ಸದಸ್ಯರು ರಾಜೀನಾಮೆ ಕೂಡ ನೀಡಿದ್ದರು.

100 ನೇ ವರ್ಷಕ್ಕೆ ಕಾಲಿಟ್ಟ ನಂತರವೂ, ಕಿಸ್ಸಿಂಜರ್ ಶ್ವೇತಭವನದಲ್ಲಿ ಸಭೆಗಳಿಗೆ ಹಾಜರಾಗುತ್ತಿದ್ದರು. ನಾಯಕತ್ವದ ಶೈಲಿಗಳ ಬಗ್ಗೆ ಪುಸ್ತಕವನ್ನು ಪ್ರಕಟಿಸಿದ್ದರು. ಉತ್ತರ ಕೊರಿಯಾ ಒಡ್ಡಿದ ಪರಮಾಣು ಬೆದರಿಕೆಯ ಬಗ್ಗೆ ಅವರು ಸೆನೆಟ್ ಸಮಿತಿಯ ಮುಂದೆ ಸಾಕ್ಷ್ಯ ನೀಡಿದ್ದರು. ಈ ವರ್ಷದ ಜುಲೈನಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುವ ಮೂಲಕ ಕಿಸ್ಸಿಂಜರ್ ಅಚ್ಚರಿ ಮೂಡಿಸಿದ್ದರು.

ಸೆಪ್ಟೆಂಬರ್ 11, 2001 ರ ಯುಎಸ್ ವಿಶ್ವ ವಾಣಿಜ್ಯ ಕಟ್ಟಡಗಳ ಮೇಲಿನ ಅಲ್‌ ಖೈದಾ ದಾಳಿಯ ನಂತರ, ಆಗಿನ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ಕಿಸ್ಸಿಂಜರ್ ಅವರನ್ನು ತನಿಖಾ ಸಮಿತಿಯ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದರು. ಆದರೆ, ಡೆಮಾಕ್ರಟಿಕ್ ಪಕ್ಷದ ತೀವ್ರ ವಿರೋಧವು ಕಿಸ್ಸಿಂಜರ್ ಅವರನ್ನು ಆ ಸ್ಥಾನದಿಂದ ರಾಜೀನಾಮೆ ನೀಡುವಂತೆ ಮಾಡಿಸಿತ್ತು.

1964 ರಲ್ಲಿ ತನ್ನ ಮೊದಲ ಪತ್ನಿ ಆನ್ ಫ್ಲೀಶರ್‌ಗೆ ವಿಚ್ಛೇದನ ನೀಡಿದ ನಂತರ, ಕಿಸ್ಸಿಂಜರ್ 1974 ರಲ್ಲಿ ನ್ಯೂಯಾರ್ಕ್ ಗವರ್ನರ್ ನೆಲ್ಸನ್ ರಾಕ್‌ಫೆಲ್ಲರ್ ಅವರ ಸಹಾಯಕಿ ನ್ಯಾನ್ಸಿ ಮ್ಯಾಗಿನ್ನೆಸ್ ಅವರನ್ನು ವಿವಾಹವಾದರು. ತಮ್ಮ ಮೊದಲ ಪತ್ನಿಯಿಂದ ಕಿಸ್ಸಿಂಜರ್ ಇಬ್ಬರು ಮಕ್ಕಳನ್ನು ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...